ಶಿವಮೊಗ್ಗ

ಪ್ರತಿಭಟನೆ ವೇಳೆ ಹೃದಯಾಘಾತ: ಬಿಜೆಪಿ ಮಾಜಿ ಎಂಎಲ್‌ಸಿ ಭಾನುಪ್ರಕಾಶ್ ನಿಧನ

ಶಿವಮೊಗ್ಗ: ಬಿಜೆಪಿ ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (೬೯) ನಿಧನರಾಗಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ರ್ಕಾ ರದ ವಿರುದ್ಧ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾನುಪ್ರಕಾಶ್ ಅವರು ಭಾಗಿಯಾಗಿದ್ದರು. ಪ್ರತಿಭಟನೆ ನಂತರ ಹೃದಯಾಘವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೆ ಬಿಜೆಪಿ ಕರ್ಯಪರ್ತರರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಸ್ವಗ್ರಾಮ ಮತ್ತೂರಿಗೆ ಮೃತದೇಹ ರವಾನೆ ಮಾಡಲಾಗಿದೆ.

ನನಗೆ ಕನ್ನಡ ಅಷ್ಟು ಶುದ್ಧವಾಗಿ ಓದಲು ಬರಲ್ಲ, ಸ್ವಲ್ಪ ಉಚ್ಚಾರಣೆ ತಪ್ಪಾಗುತ್ತೆ: ಶಿಕ್ಷಣ ಸಚಿವ

ಶಿವಮೊಗ್ಗ: ೨೦೨೩-೨೦೨೪ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಈ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ನಾನು ಓದುವುದರಲ್ಲಿ ಅಷ್ಟು ಬುದ್ದಿವಂತನಾಗಿರಲಿಲ್ಲ. ನಾನು ಸಹ ಫೇಲ್ ಆಗಿದ್ದೇನೆ. ನನಗೆ ಕನ್ನಡ ಅಷ್ಟು ಶುದ್ಧವಾಗಿ ಓದಲು ಬರಲ್ಲ. ಸ್ವಲ್ಪ ಉಚ್ಚಾರಣೆ ತಪ್ಪಾಗುತ್ತೆ. ನನ್ನ ಬಗ್ಗೆ ಕೆಟ್ಟ ಟ್ರೋಲ್ ಮಾಡುವವರು ಎಂದೂ ಉದ್ಧಾರಾಗಲ್ಲ ಎಂದು ಶಾಪ ಹಾಕಿದರು.

ಕೇವಲ ನರೇಂದ್ರ ಮೋದಿಯವರಿಗೆ ಮಾತ್ರ ದೇಶದ ಪ್ರಧಾನ ಮಂತ್ರಿಯಾಗುವ ಯೋಗ್ಯತೆ ಇದೆ: ಕೆ ಅಣ್ಣಾಮಲೈ, ಬಿಜೆಪಿ ನಾಯಕ

ಶಿವಮೊಗ್ಗ: ಜಿಲ್ಲೆಯ ಭದ್ರಾವತಿಯಲ್ಲಿ ನಿನ್ನೆ ಸಾಯಂಕಾಲ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ರ್ಥಿಾ ಬಿವೈ ರಾಘವೇಂದ್ರ ಅವರ ಪರ ಮತ ಯಾಚಿಸಿದ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ , ದೇಶದ ಪ್ರಧಾನಿಮಂತ್ರಿಯಾಗಲು ರ್ಹಲತೆ ಮತ್ತು ಯೋಗ್ಯತೆ ಬೇಕು, ಆ ಯೋಗ್ಯತೆ ಇಂಡಿಯ ಒಕ್ಕೂಟದ ಒಬ್ಬ ನಾಯಕನಲ್ಲೂ ಇಲ್ಲ ಎಂದು ಹೇಳಿದರು. ಪ್ರಧಾನ ಮಂತ್ರಿ ಹುದ್ದೆ ಆಟಿಕೆಯ ವಸ್ತು ಅಲ್ಲ, ಅಥವಾ ಒಂದು ಕಿಂರ್ಗಾೆರ್ಟ್ನ್ ಶಾಲೆಯ ಟೀಚರ್ ಆದಂತಲ್ಲ ಎಂದ ಅಣ್ಣಾಮಲೈ, ದೇಶದಲ್ಲಿ ಪ್ರಧಾನಮಂತ್ರಿಯಯಾಗುವ ಯೋಗ್ಯತೆ ಕೇವಲ ನರೇಂದ್ರ ಮೋದಿಯವರಿಗಿದೆ, ಅವರನ್ನು ಮೂರನೇ ಬಾರಿ ಪ್ರಧಾನಿಯಾಗಿಸಲೆಂದೇ ನಿಮ್ಮ ಸಹಕಾರ ಕೋರಲು ಬಂದಿದ್ದೇವೆ ಎಂದರು. ವಿರೋಧ ಪಕ್ಷಗಳ ಒಕ್ಕೂಟದಲ್ಲಿ, ಫರೂಕ್ ಅಬ್ದುಲ್ಲಾ ಮಮತಾ ಬ್ಯಾರ್ಜೀ , ರಾಹುಲ್ ಗಾಂಧಿ, ಎಂಕೆ ಸ್ಟಾಲಿನ್ ಮೊದಲಾದವರೆಲ್ಲ ಪ್ರಧಾನಿಯಾಗುವ ಮಹತ್ವಾಕಾಂಕ್ಷೆ ಹೊಂದಿದ್ದಾರೆ, ಅದರೆ ಅವರ ಕನಸು ಯಾವತ್ತೂ ನನಸಾಗಲ್ಲ ಎಂದು ಅವರು ಹೇಳಿದರು. ಭದ್ರಾವತಿಯಲ್ಲಿ ತಮಿಳು ಮಾತಾಡುವ ಜನ ಸಾಕಷ್ಟು ಸಂಖ್ಯೆಯಲ್ಲಿರುವುದರಿಂದ ಅಣ್ಣಾಮಲೈ ತಮಿಳು ಭಾಷೆಯಲ್ಲೂ ಮಾತಾಡಿದರು.

ಶಿವಮೊಗ್ಗ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ : ಮೆರವಣಿಗೆಯಲ್ಲಿ ಭಾಗಿ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾದ ಗೀತಾ ಶಿವರಾಜ್ ಕುಮಾರ್ ಬೃಹತ್ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸುವ ಮೊದಲು ಒಂದು ಸೆಟ್ ನ ನಾಮಪತ್ರ ಸಲ್ಲಿಸಿದ್ದಾರೆ.
ನಂತರ ಮಾಧ್ಯಮಗಳಿಗೆ ಮಾತನಾಡಿದ ಅಭ್ಯರ್ಥಿ ಗೀತ ಈ ಬಾರಿ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಗ್ಯಾರೆಂಟಿಯಿಂದಾಗಿ ಜನ ಕಾಂಗ್ರೆಸ್ ಗೆ ಮತಹಾಕಲಿದ್ದಾರೆ. ಹೋದಕಡೆಯಲ್ಲ ಮಹಿಳೆಯರು ಹೆಚ್ಚಿನ ಒಲವು ತೋರುತ್ತಿದ್ದಾರೆ ಎಂದರು.
ಡಿಸಿಎಂ ಡಿಕೆ ಶಿವಕುಮಾರ್ ಶಿವಮೊಗ್ಗಕ್ಕೆ ಬಂದ ಮೇಲೆ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.

ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಶಿವಮೊಗ್ಗಕ್ಕೆ ಇಂದು ಐತಿಹಾಸಿಕ ದಿನ: ಸಿಎಂ
ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು: ಸಿಎಂ ಸಿದ್ದರಾಮಯ್ಯ

ಗ್ಯಾರಂಟಿಗಳ ಮೂಲಕ ಜನರಿಗೆ ಆರ್ಥಿಕ, ಸಾಮಾಜಿಕ ಶಕ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿವಮೊಗ್ಗ : ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗೆ ಬರುವಂತಾಗಬೇಕೆಂಬ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯದ ತತ್ವದಂತೆ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಯುವನಿಧಿ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಭೆ ನಡೆಸಿದ ವೈದ್ಯಕೀಯ ಸಚಿವ ಶರಣಪ್ರಕಾಶ್ ಪಾಟೀಲ್

ಶಿವಮೊಗ್ಗ : ರಾಜ್ಯ ಸರ್ಕಾರದ ಬಹುನಿರೀಕ್ಷಿತ ಯುವನಿಧಿ ಯೋಜನೆಯ ಉದ್ಘಾಟನೆಯನ್ನು ಜನಪರ ಕಾರ್ಯಕ್ರಮವನ್ನಾಗಿ ರೂಪಿಸಲು ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಶೌಚಗುಂಡಿಗೆ ಮಕ್ಕಳನ್ನು ಇಳಿಸಿದ ಪ್ರಕರಣ ಅಧ್ಯಯನಕ್ಕೆ ಬಿಜೆಪಿ ಸಮಿತಿ: ವಿಜಯೇಂದ್ರ

ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರಿನ ಸಮೀಪದ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಖಂಡಿಸಿದ್ದಾರೆ. ಈ ಘಟನೆಯ ವಸ್ತುಸ್ಥಿತಿ ಅಧ್ಯಯನಕ್ಕೆ ರಾಜ್ಯ ಸಮಿತಿಯನ್ನು ರಚಿಸಿ ಅವರು ಆದೇಶ ಹೊರಡಿಸಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ಶೇ 80 ಕಮಿಷನ್‍ನ ಕಾಂಗ್ರೆಸ್ ಸರಕಾರಕ್ಕೆ ಪ್ರಜ್ಞಾವಂತ ಮತದಾರರಿಂದ ತಕ್ಕ ಪಾಠ: ವಿಜಯೇಂದ್ರ ವಿಶ್ವಾಸ

ಬೆಂಗಳೂರು: ಗುಡುಗು, ಸಿಡಿಲು, ಮಳೆ, ಬಿರುಗಾಳಿ ಏನೇ ಬಂದರೂ ಪಕ್ಷದ ಹಿರಿಯರಾದ ಯಡಿಯೂರಪ್ಪ, ಈಶ್ವರಪ್ಪ ಮತ್ತಿತರ ರಾಜ್ಯದ ಎಲ್ಲ ಹಿರಿಯರ ಆಶೀರ್ವಾದ, ಕಾರ್ಯಕರ್ತರ ನೆರವಿನಿಂದ ಬಿಜೆಪಿ ಎಂಬ ವಿಮಾನವನ್ನು ಸೇಫ್ ಆಗಿ ಲ್ಯಾಂಡ್ ಮಾಡಲಿದ್ದೇನೆ ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರನವರು ತಿಳಿಸಿದರು.

ಮುಂದಿನ 3 ವರ್ಷಗಳಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳ ಸ್ಥಾಪನೆ : ಸಚಿವ ಎಸ್. ಮಧು ಬಂಗಾರಪ್ಪ

ಶಿವಮೊಗ್ಗ : ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್. ಮಧು ಬಂಗಾರಪ್ಪ ಹೇಳಿದರು.

Translate »
Scroll to Top