‘ಅಹಂಕಾರದ ಪರಮಾವಧಿ’: ಸರ್ಕಾರಕ್ಕೆ ಬಿಜೆಪಿ ಟೀಕೆ
ಬೆಂಗಳೂರು: ಸರಕಾರಕ್ಕೆ ಕೇಸರಿ ಎಂದರೆ ದ್ವೇಷ, ಶತ್ರುಭಾವ! ಇಂದು ನಡೆದಾಡುವ ದೇವರು, ಕಾಯಕಯೋಗಿ, ತ್ರಿವಿಧದಾಸೋಹಿ ಪರಮ ಪೂಜ್ಯನೀಯ ಡಾ।। ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಿ ಪಡಸಾಲೆಯಲ್ಲಿ ಉರುಳಾಡುವಂತೆ ಮಾಡಿ ಅಪಮಾನಿಸಿರುವುದು ಅಕ್ಷಮ್ಯ ಅಪರಾಧ! ಎಂದು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಿಎಂ ಸಿದ್ದರಾಮಯ್ಯನವರ ನಡವಳಿಕೆಗೆ ಟೀಕೆ ಬಿಜೆಪಿ ಟೀಕೆ ಮಾಡಿದೆ.