ಜಿಲ್ಲೆಗಳು

ಕನ್ನಡ ನಾಮಫಲಕ ಕಡ್ಡಾಯ

ಕೊಪ್ಪಳ,: ಕರ್ನಾಟಕ ರಾಜ್ಯ ಸರ್ಕಾರ ಕನ್ನಡ ರಾಜ್ಯೋತ್ಸವ ಅಂಗವಾಗಿ ಮಾತಾಡ್ ಮಾತಾಡ್ ಕನ್ನಡ (ಕನ್ನಡ ಬರೆಯುವುದು ಹಾಗೂ ಕನ್ನಡ ಮಾತನಾಡುವುದು ಕಡ್ಡಾಯ) ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ ನಿಟ್ಟಿನಲ್ಲಿ ಕೊಪ್ಪಳ ನಗರದಲ್ಲಿರುವ ಅಂಗಡಿ ಮಾಲೀಕರು ತಮ್ಮ ನಾಮಫಲಕದಲ್ಲಿ ಕನ್ನಡಕ್ಕೆ ಮೊದಲ ಪ್ರಾತಿನಿಧ್ಯವನ್ನು ನೀಡಬೇಕು ಒಂದು ವೇಳೆ ನಾಮಫಲಕಗಳಲ್ಲಿ ಕನ್ನಡ ಪ್ರಕಟಿಸಲು ನಿರ್ಲಕ್ಷ್ಯ ತೋರಿದಲ್ಲಿ ಅಂತಹ ಅಂಗಡಿ ನಾಮಫಲಕಗಳಿಗೆ ಮಸಿ ಬಳೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಹೈದರಾಬಾದ್ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ನಾಸೀರ್ ಕಂಠಿ ತಿಳಿಸಿದ್ದಾರೆ. ಈ ಕುರಿತು …

ಕನ್ನಡ ನಾಮಫಲಕ ಕಡ್ಡಾಯ Read More »

ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಮಾಲರ್ಪಣೆ ಮಾಡಿದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ

ಕುಷ್ಟಗಿ:- ಕೊಪ್ಪಳ ಬಿಜೆಪಿ ಪಕ್ಷದ‌ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ವಾಲ್ಮೀಕಿ ಭಾವಚಿತ್ರಕ್ಕೆ ಮಾಲಾರ್ಪಣೆಯನ್ನು ಮಾಡಿ ಪುಷ್ಪವನ್ನು ಅರ್ಪಿಸಿದರು.ಕರ್ನಾಟಕ ಸರ್ಕಾರ ತಾಲೂಕು ಆಡಳಿತ, ತಾಲೂಕು ಪಂಚಾಯತ್,ಹಾಗೂ ಪುರಸಭೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕುಷ್ಟಗಿ ಇವರ ಸಹಯೋಗದಲ್ಲಿ ಇಂದು ಶ್ರೀ ಬುತ್ತಿ ಬಸವೇಶ್ವರ ಸಭಾಭವನದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಲ್ಪ ಸಂಖ್ಯಾತ ಕೊಪ್ಪಳ ಜಿಲ್ಲಾ ಅಧ್ಯಕ್ಷ ಅಮೀನುದ್ದೀನ್ ಮುಲ್ಲಾ, ಪುರಸಭೆ ಅಧ್ಯಕ್ಷ …

ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಮಾಲರ್ಪಣೆ ಮಾಡಿದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ Read More »

ಸದೃಢ ಸಮಾಜ ಕಟ್ಟಲು ಯುವಕರಿಗೆ ರಾಮಾಯಣ ಬಹು ಮುಖ್ಯ

ಕುಷ್ಟಗಿ:- ಒಬ್ಬ ಈ ಸಮಾಜದಲ್ಲಿ ಮನುಷ್ಯ ಮನುಷ್ಯ ನಾಗಿ ಬಾಳಬೇಕು ಎನ್ನುವದು ಮಹರ್ಷಿ ವಾಲ್ಮೀಕಿಯ ಉದ್ದೇಶವಾಗಿತ್ತೆಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ. ಕರ್ನಾಟಕ ಸರಕಾರ ತಾಲೂಕು ಆಡಳಿತ, ತಾಲೂಕು ಪಂಚಾಯತ ಹಾಗೂ ಪುರಸಭೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕುಷ್ಟಗಿ ಇವರ ಸಹಯೋಗದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶ್ರೀ ರಾಮಯಣ ಮಾಹಾ ಭಾರತವನ್ನು ನಮ್ಮ ಇಡಿ ದೇಶಾದ್ಯಂತ ಪೂಜಿಸುತ್ತಾರೆ. ಅಂತಹ ವಾಲ್ಮೀಕಿ ಬರೆದಂತಹ ರಾಮಾಯಣವನ್ನು ಈ ದೇಶದ ಯುವಕರಿಗೆ ಸ್ಪೂರ್ತಿದಾಯಕವಾಗಬೇಕಾಗಿದೆ …

ಸದೃಢ ಸಮಾಜ ಕಟ್ಟಲು ಯುವಕರಿಗೆ ರಾಮಾಯಣ ಬಹು ಮುಖ್ಯ Read More »

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಮಸ್ಕಿ : ಬಿಜೆಪಿ ಕಾರ್ಯಾಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತ್ತು ಪದಾಧಿಕಾರಿಗಳು ಮೋರ್ಚಾ ಅಧ್ಯಕ್ಷರು ಪ್ರಮುಖ ಕಾರ್ಯಕರ್ತರು ಹಾಗೂ ಮಸ್ಕಿ ಕ್ಷೇತ್ರದ ವಾಲ್ಮೀಕಿ ಬಂಧುಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಮೋದಿ ಸರ್ಕಾರದ ವಿರುದ್ಧ ಗುಡುಗಿದ ಸಂತೋಷ್ ಲಾಡ್

ಸಂಡೂರು : ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬರೀ ಸುಳ್ಳು ಘೋಷಣೆ ಮಾಡುತ್ತಾ ಹೊರಟಿದೆ ಬಡವರ ಉದ್ಧಾರ ಮಾಡುವುದು ಬಿಟ್ಟು ಅಂಬಾನಿ ಅದಾನಿ ಶ್ರೀಮಂತ ಉದ್ಯಮಿಗಳ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮಾಜಿ ಸಚಿವ ಸಂತೋಷ ಲಾಡ್ ಗುಡುಗಿದರು. ಅವರು ಸಂಡೂರು ಪಟ್ಟಣದಲ್ಲಿ ಜರುಗಿದ ನೂತನವಾಗಿ ಆಯ್ಕೆಯಾದ ಗ್ರಾಮಪಂಚಾಯಿತಿ ಸದಸ್ಯರುಗಳಿಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಉದ್ಯೋಗ ಖಾತ್ರಿ ಆಹಾರ ಭದ್ರತಾ ಕಾಯ್ದೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಅಳವಡಿಕೆ ಸೇರಿದಂತೆ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಕಾಂಗ್ರೆಸ್ ಸರ್ಕಾರ …

ಮೋದಿ ಸರ್ಕಾರದ ವಿರುದ್ಧ ಗುಡುಗಿದ ಸಂತೋಷ್ ಲಾಡ್ Read More »

ಪ್ರವಾದಿ ಮುಹಮ್ಮದ್ ಪೈಗಂಬರ್ ದಿನಾಚರಣೆ ಪ್ರಯುಕ್ತ ರಕ್ತದಾನ ಶಿಬಿರ ಯಶಸ್ವಿ

ಕುಷ್ಟಗಿ: ಹಜರತ್ ಹೈದರಾಲಿ ನೌಜವಾನ್ ಕಮಿಟಿ ಕುಷ್ಟಗಿ ಹಾಗೂ ರೆಡ್ ಕ್ರಾಸ್ ಸಂಸ್ಥೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಮಮ್ಮದ್ ಪೈಗಂಬರ್ ಅವರ ಜನ್ಮದಿನಾಚರಣೆ ಪ್ರಯುಕ್ತ ಪಟ್ಟಣದ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ 90 ಜನರು ಸ್ವಯಂಪ್ರೇರಿತ ರಕ್ತದಾನ ಮಾಡುವ ಮೂಲಕ ಈದ್ ಮಿಲಾದ್ ಹಬ್ಬಕ್ಕೆ ಮೆರಗು ನೀಡಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸ್ಥಳೀಯ ಶ್ರೀ ಮದ್ದಾನೇಶ್ವರ ಸ್ವಾಮಿಗಳು ವಹಿಸಿಕೊಂಡು ಮಾತನಾಡಿ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರು ಶಾಂತಿಗಾಗಿ, ಸೌಹಾರ್ಧತೆಗಾಗಿ, ಸಾಮಾಜಿಕವಾಗಿ ಮಾನವೀಯ …

ಪ್ರವಾದಿ ಮುಹಮ್ಮದ್ ಪೈಗಂಬರ್ ದಿನಾಚರಣೆ ಪ್ರಯುಕ್ತ ರಕ್ತದಾನ ಶಿಬಿರ ಯಶಸ್ವಿ Read More »

ಮಹಮ್ಮದ್ ಪೈಗಂಬರ್‍ ಮಾನವ ಕಲ್ಯಾಣದ ಜ್ಯೋತಿ ಬೆಳಗಿದ ಮಹಾಪುರುಷರು: ಸಂಗಣ್ಣ ಕರಡಿ

ಕೊಪ್ಪಳ,: ಶೋಷಣೆ ಮುಕ್ತ ಸಮಾಜದ ಪ್ರತಿಪಾದಕ ಪ್ರವಾದಿ ಮಹಮ್ಮದ್ ಪೈಗಂಬರ್ ನುಡಿಗಳೇ ಹೆಗ್ಗರುತುಗಳಾಗಿದ್ದವು. ಸಮತ್ವದ ಸಂದೇಶ ಸಾರಿದ ಪ್ರವಾದಿ ಪೈಗಂಬರ್ ಮಾನವ ಕಲ್ಯಾಣದ ಜ್ಯೋತಿಯನ್ನು ಬೆಳಗಿದ ಮಹಾಪುರುಷರು ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.ಮಂಗಳವಾರ ಕೊಪ್ಪಳ ತಾಲೂಕಿನ ಹೊಸಪೇಟೆ ರಸ್ತೆಯ ಹೊಸಳ್ಳಿ ಗ್ರಾಮದ ಜಾಮಿಯಾ ಮಸ್ಜಿದ್ ಕಮೀಟಿ ವತಿಯಿಂದ ಹಮ್ಮಿಕೊಂಡ ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪೈಗಂಬರ್ ಜೀವನಗಾಥೆಯು ಪ್ರಸಕ್ತ ಕಾಲಕ್ಕೆ ನಿಜಕ್ಕೂ ಮಾದರಿ. ಅವರು ಸಮರ್ಥ ಆಡಳಿತಗಾರ, ವ್ಯಾಪಾರಿ, ಯೋಧರು, …

ಮಹಮ್ಮದ್ ಪೈಗಂಬರ್‍ ಮಾನವ ಕಲ್ಯಾಣದ ಜ್ಯೋತಿ ಬೆಳಗಿದ ಮಹಾಪುರುಷರು: ಸಂಗಣ್ಣ ಕರಡಿ Read More »

ಆಧುನಿಕ ವೈದ್ಯ ಪದ್ಧತಿಯಲ್ಲಿ ರೋಗಿಗಳಿಗೆ ಚಿಕಿತ್ಸೆ

ದೇವನಹಳ್ಳಿ: ನಗರ ಪ್ರದೇಶದಲ್ಲಿನ ಅತ್ಯಾಧುನಿಕ ವೈದ್ಯ ಪದ್ಧತಿಯಲ್ಲಿ ರೋಗಿಗಳಿಗೆ ಚಿಕಿತ್ಸೆಯನ್ನು ನೀಡುತ್ತಿದ್ದು ಹೆಚ್ಚಿನ ಹೊರೆಯಾಗದಂತೆ ಸುಲಭ ದರದಲ್ಲಿ ಚಿಕಿತ್ಸೆ ನೀಡುವ ಉದ್ದೇಶದಿಂದ ಗ್ರಾಮೀಣ ಭಾಗದ ಜನತೆ ಬೆಂಗಳೂರು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಹೋಗುವುದನ್ನು ತಪ್ಪಿಸಿ ಅಲ್ಲಿನ ಚಿಕಿತ್ಸೆ ಇಲ್ಲಿಯೇ ನೀಡುವ ಸದುದ್ದೇಶದಿಂದ ಕಳೆದ ಮೂರು ವರ್ಷಗಳ ಹಿಂದೆ ಮಾನಸ ಆಸ್ಪತ್ರೆ ಪ್ರಾರಂಭ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡುತ್ತಿರುವುದಾಗಿ ಮಾನಸ ಆಸ್ಪತ್ರೆಯ ಮುಖ್ಯಸ್ಥ ಹಾಗೂ ವೈದ್ಯಕೀಯ ನಿರ್ದೇಶಕ ಡಾ.ನರಸಾರೆಡ್ಡ್ಡಿತಿಳಿಸಿದರು. ಅವರು ದೇವನಹಳ್ಳಿ ಪಟ್ಟಣದ 11 ನೇ ವಾರ್ಡ್ ನ ಮರಳುಬಾಗಿಲು …

ಆಧುನಿಕ ವೈದ್ಯ ಪದ್ಧತಿಯಲ್ಲಿ ರೋಗಿಗಳಿಗೆ ಚಿಕಿತ್ಸೆ Read More »

ಪರಿಸರ ಸಂರಕ್ಷಣೆಯು ಸರ್ವರ ನಿತ್ಯದ ಹೊಣೆಗಾರಿಕೆಯಾಗಬೇಕು

ದೇವನಹಳ್ಳಿ: ಪರಿಸರ ಸಂರಕ್ಷಣೆಯನ್ನು ಎಲ್ಲರೂ ತಮ್ಮ ಹೊಣೆಗಾರಿಕೆ ಎಂದು ಭಾವಿಸಿ ಸಸಿಗಳನ್ನು ನೆಟ್ಟು ಪೋಷಿಸಬೇಕು. ಪರಿಸರವನ್ನು ಸ್ವಚ್ಚವಾಗಿರಿಸಿಕೊಳ್ಳಬೇಕು. ಸುತ್ತಮುತ್ತಲೂ ನೈರ್ಮಲ್ಯ ಕಾಪಾಡಲು ಮುಂದಾಗಬೇಕು. ಆಧುನಿಕ ವ್ಯಾಮೋಹದಿಂದ ಪರಿಸರದ ಸಂರಕ್ಷಣೆಗಿಂತ ಸ್ವಾರ್ಥಕ್ಕಾಗಿ ನಾಶ ಮಾಡುವುದೇ ಹೆಚ್ಚಾಗಿದ್ದು, ಪ್ಲಾಸ್ಟಿಕ್ ಮುಕ್ತವಾಗಿಸಲು ಯುವಪೀಳಿಗೆ ಪಣತೊಡಬೇಕು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಅಭಿಯಂತರ ಎನ್.ದಿನೇಶ್ ತಿಳಿಸಿದರು. ಸಮೀಪದ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸುಂದರಲಾಲ್ ಬಹುಗುಣ ಇಕೋಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಸಸಿ ನೆಡುವ …

ಪರಿಸರ ಸಂರಕ್ಷಣೆಯು ಸರ್ವರ ನಿತ್ಯದ ಹೊಣೆಗಾರಿಕೆಯಾಗಬೇಕು Read More »

ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಒತ್ತಾಯಿಸಿ ಬೃಹತ್ ಪ್ರತಿಭಟನೆ

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಇಂದು ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಒತ್ತಾಯಿಸಿ ಬೃಹತ್ ಪ್ರತಿಭಟನೆ ಮಾಡಲಾಯಿತು. ಸಂದರ್ಭದಲ್ಲಿ ದಲಿತ ಪರ ಸಂಘಟನೆಗಳು ಭಾಗವಹಿಸಿದ್ದವು ದಲಿತ ಸಾಹಿತಿ ದಾನಪ್ಪ ನೀಲಗಲ್ ಮಾತನಾಡಿದರು ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಇಂದು ನ್ಯಾಯಮೂರ್ತಿ ಸದಾಶಿವ ಆಯೋಗ ವರದಿಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಬೃಹತ್ ಪ್ರತಿಭಟನೆ ಮಾಡಲಾಯಿತು. ಸಂದರ್ಭದಲ್ಲಿ ದಲಿತ ಪರ ಸಂಘಟನೆಗಳು ಭಾಗವಹಿಸಿದ್ದವು.

Translate »
Scroll to Top