ಕೆರೆ ಅಂಚಿನಲ್ಲಿ ಮೀನುಮರಿ ಪಾಲನಾ ಕೊಳ ನಿರ್ಮಾಣ
ತುಮಕೂರು: ಕೆರೆ ಅಥವಾ ಜಲಾಶಯದ ಅಂಚಿನಲ್ಲಿ ಮೀನುಮರಿ ಪಾಲನಾ ಕೊಳ ನಿರ್ಮಾಣ ಮಾಡಿ ಮೀನು ಕೃಷಿ ಕೈಗೊಳ್ಳುವುದರಿಂದ ಮೀನು ಉತ್ಪಾದನೆಯನ್ನು ದ್ವಿಗುಣಗೊಳಿಸಲು ಸಾಧ್ಯವಿದೆ. ಕೃಷಿಗೆ ಯೋಗ್ಯವಲ್ಲದ ಹಾಗೂ ಜೌಗು-ಚೌಳು-ಕ್ಷಾರಯುಕ್ತ ಜಮೀನಿನಲ್ಲಿ ಮೀನು ಕೃಷಿ ಕೊಳವನ್ನು ನಿರ್ಮಿಸಿಯೂ ಮೀನು ಕೃಷಿ ಕೈಗೊಂಡು ಅಧಿಕ ಲಾಭ ಗಳಿಸಬಹುದು. ಈ ನಿಟ್ಟಿನಲ್ಲಿ ಮೀನು ಕೃಷಿಯನ್ನು ಉತ್ತೇಜಿಸುವ ದೃಷ್ಟಿಯಿಂದ ಮೀನುಗಾರಿಕಾ ಇಲಾಖೆಯು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಮೀನು ಕೃಷಿಯಲ್ಲಿ ಆಸಕ್ತಿಯುಳ್ಳವರು ಯೋಜನೆಗಳ ಸದುಪಯೋಗ ಪಡೆದು ತಮ್ಮ ಬದುಕನ್ನು ಹಸನಾಗಿಸಿಕೊಳ್ಳಬಹುದಾಗಿದೆ. ಜಿಲ್ಲೆಯ ಮೀನುಗಾರಿಕೆ ಸ್ಥಿತಿ-ಗತಿ, …