ಬೆಂಗಳೂರು: ಸಮಾಜಿಕ ಮತ್ತು ಆರ್ಥಿಕ ಜನಗಣತಿಯನ್ನು ಯಾವುದೇ ಶಾಲಾ ಮಕ್ಕಳಿಂದ ತಯಾರು ಮಾಡಿಲ್ಲ,ಇದು ಸತ್ಯಕ್ಕೆ ದೂರವಾದ ವಿಚಾರವಾಗಿದೆ. ವೈಜ್ಞಾನಿಕವಾಗಿ ತಯಾರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿಂದು ರಾಜ್ಯ ಒಕ್ಕಲಿಗರ ಸಂಘದ ನಿಯೋಗ ಕಾಂತರಾಜ್ ಜನಗಣತಿ ವರದಿ ತಿರಸ್ಕರಿಸುವಂತೆ ಬೇಟಿ ನೀಡಿ ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಶಾಲಾ ಮಕ್ಕಳಿಂದ ವರದಿಯನ್ನು ತಯಾರಿಸಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ. ವೈಜ್ಞಾನಿಕವಾಗಿ ತಯಾರಿಸಿದ ಅಂಕಿ ಸಂಖ್ಯೆಯಾಗಿದೆ. ಬಿಇಎಲ್ ಸಂಸ್ಥೆಯ ನೆರವಿನೊಂದಿಗೆ ತಯಾರಿಸಲಾಗಿದೆ ಎಂದು ಹೇಳಿದರು.
![](https://kannadanadunews.in/wp-content/uploads/2023/11/WhatsApp-Image-2023-11-17-at-5.24.14-PM-1024x576.jpeg)
ಈ ವರದಿಯಲ್ಲಿ ಯಾವುದೇ ಸಮಾಜವನ್ನು ಒಡೆಯುವ ಕೆಲಸ ಮಾಡಿಲ್ಲ, ಕಾಂತರಾಜ್ ಆಯೋಗದ ವರದಿಯನ್ನು ಅಧಿಕಾರಿಗಳಿಂದ ಅಂಕಿ ಸಂಖ್ಯೆಗಳನ್ನು ಕಲೆ ಹಾಕಿ ತಯಾರಿಸಲಾಗಿದೆ ಎಂದು ತಿಳಿಸಿದರು.
ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ, ಕಾಂತರಾಜ್ ಆಯೋಗ ವರದಿ ಅವೈಜ್ಞಾನಿಕವಾಗಿದೆ. ಶಾಲಾ ಮಕ್ಕಳಿಂದ ಈ ವರದಿಯನ್ನು ತಯಾರಿಸಲಾಗಿದೆ. ನವೆಂಬರ್ 25ರೊಳಗೆ ತಾವು ವರದಿ ಸಲ್ಲಿಸುವ ಸಾಧ್ಯತೆ ಇರುವ ಅನುಮಾನವಿದೆ. ಈ ವರದಿ ಸಲ್ಲಿಕೆಯಿಂದ ಒಕ್ಕಲಿಗ ಸಮುದಾಯಕ್ಕೆ ಬಾರೀ ದೊಡ್ಡ ಅನ್ಯಾಯ ಮಾಡಿದಂತಾಗುತ್ತದೆ. ಒಕ್ಕಲಿಗ ಜನಾಂಗದಲ್ಲೂ ಅತ್ಯಂತ ಕಡುಬಡವರು, ಕಾರ್ಮಿಕರು ಸವಲತ್ತು ವಂಚಿತರು ಇದ್ದಾರೆ, ವರದಿ ಸಲ್ಲಿಕೆಯಿಂದ ಕಟ್ಟಕಡೆಯ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾಗಲಿದೆ. ಇದರಲ್ಲಿರುವ ಅನೇಕ ಗೊಂದಲಗಳು ಇರುವುದರಿಂದ ತಾವು ಯಥಾವತ್ತ್ ವರದಿಯನ್ನು ಸಲ್ಲಿಸ ಬಾರದು ಎಂದು ಮನವಿ ಮಾಡಿದರು.