ಬಳ್ಳಾರಿ ಜನರ ನಿರೀಕ್ಷೆಗಳು ಈಡೇರಿಸಲು ಬದ್ಧ

ಬಳ್ಳಾರಿ,ಫೆ.12: ನಗರದ ಎಪಿಎಂಸಿ ಆವರಣದಲ್ಲಿ 2.80ಕೋಟಿ ರೂ.ವೆಚ್ಚದಲ್ಲಿಬಳ್ಳಾರಿ ಎಪಿಎಂಸಿ ಪೊಲೀಸ್ ಠಾಣೆಯ ನಿರ್ಮಾಣಕ್ಕೆ ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಶನಿವಾರ ಗುದ್ದಲಿ ಪೂಜೆ ನೆರವೇರಿಸಿದರು. ಸುಮಾರು ಅರ್ಧ ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಎಪಿಎಂಸಿ ಪೊಲೀಸ್ ಠಾಣೆ ನೂತನ ಕಟ್ಟಡವನ್ನು 11ತಿಂಗಳಲ್ಲಿ ಪೂರ್ಣಗೊಳಿಸುವ ಗುರಿ ಹಾಕಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು ಅವರು ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಬಳ್ಳಾರಿ ಎಪಿಎಂಸಿ ಸೇರಿ ನಾಲ್ಕು ಕಡೆ ನೂತನ ಪೊಲೀಸ್ ಠಾಣೆ ನಿರ್ಮಿಸಲಾಗುತ್ತಿದೆ ಎಂದರು.


ಬಳ್ಳಾರಿ ಜಿಲ್ಲೆಯಲ್ಲಿ 1ಲಕ್ಷ ಪಟ್ಟಾಗಳನ್ನು ವಿತರಿಸಬೇಕಾಗಿದ್ದು,ಒಂದೆರಡು ತಿಂಗಳಲ್ಲಿ ಸಿಎಂ ಅವರ ಸಮ್ಮುಖದಲ್ಲಿ ಪಟ್ಟಾ ವಿತರಿಸಲಾಗುವುದು. ಮುಂಡರಗಿ ಆಶ್ರಯ ವಸತಿ ಬಡಾವಣೆಯಲ್ಲಿ ಶೀಘ್ರ ಮನೆಗಳನ್ನು ಫಲಾನುಭವಿಗಳಿಗೆ ಒದಗಿಸಲಾಗುತ್ತದೆ ಎಂದು ಭರವಸೆ ನೀಡಿದ ಅವರು ನಾನು ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ನಮ್ಮ ಜನರ ನಿರೀಕ್ಷೆಗಳು ಹೆಚ್ಚಾಗಿವೆ;ಅದನ್ನು ಈಡೇರಿಸಲು ಬದ್ಧನಾಗಿದ್ದೇನೆ ಎಂದರು.


ಶಾಸಕರಾದ ಜಿ.ಸೋಮಶೇಖರ್ ರೆಡ್ಡಿ ಅವರು ಮಾತನಾಡಿದರು ಈ ಸಂದರ್ಭದಲ್ಲಿ ಶಾಸಕರಾದ ಬಿ.ನಾಗೇಂದ್ರ,ಬುಡಾ ಅಧ್ಯಕ್ಷ ಪಾಲನ್ನ,ಎಪಿಎಂಸಿ ಅಧ್ಯಕ್ಷ ಉಮೇಶ, ಮಾಜಿ ಸಂಸದರಾದ ಜೆ.ಶಾಂತಾ,ಸಣ್ಣ ಫಕೀರಪ್ಪ,ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಹೆಚ್ಚುವರಿ ಎಸ್ಪಿ ಗುರುನಾಥ ಮತ್ತೂರ್, ಡಿವೈಎಸ್ಪಿಗಳಾದ ರಮೇಶಕುಮಾರ್,ಸರ್ದಾರ್, ತಹಸೀಲ್ದಾರ್ ವಿಶ್ವನಾಥ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು,ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಇದ್ದರು.

Leave a Comment

Your email address will not be published. Required fields are marked *

Translate »
Scroll to Top