ನಾಡಿಗೆ ದ್ರೋಹ ಬಗೆದ ಕಾಂಗ್ರೆಸ್ ಸರಕಾರ : ಎಚ್.ಡಿ.ಕುಮಾರಸ್ವಾಮಿ

ನಾಡಿಗೆ ದ್ರೋಹ ಬಗೆಯುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಿದೆ ಎಂದು ಜೆಡಿಎಸ್ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು. ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ- ಜೆಡಿಎಸ್ ಮೈತ್ರಿ ಸರಕಾರ ಇದ್ದಾಗ ಉತ್ತಮ ಆಡಳಿತ ನೀಡಿದ್ದನ್ನು ನೆನಪಿಸಿಕೊಂಡರು.

 

ನಮ್ಮ ನಾಡಿನ ರೈತರ ಕುರಿತು ಈ ಸರಕಾರ ನಿರ್ಲಕ್ಷ್ಯ ತೋರಿದೆ. ಸರಕಾರ ಕಾವೇರಿ ವಿಚಾರದಲ್ಲಿ ನಿರಂತರವಾಗಿ ಎಡವಿದೆ. ಇದು ಖಂಡನೀಯ ಎಂದು ತಿಳಿಸಿದರು. ಹಿಂದಿನ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರಕಾರದ ನಮ್ಮ ತೀರ್ಮಾನದಿಂದ ಕರ್ನಾಟಕಕ್ಕೆ ಹೆಚ್ಚು ನೀರು ಲಭಿಸಿದೆ ಎಂದು ತಿಳಿಸಿದರು.

ಸರಕಾರದ ನಮ್ಮ ತೀರ್ಮಾನದಿಂದ ಕರ್ನಾಟಕಕ್ಕೆ ಹೆಚ್ಚು ನೀರು ಲಭಿಸಿದೆ ಎಂದು ತಿಳಿಸಿದರು.

 

ನೀರಿನ ಲಭ್ಯತೆಗೆ ಅನುಗುಣವಾಗಿ ಕಾವೇರಿ ನೀರು ಬಿಡುವ ಕುರಿತು ನಿರ್ಧಾರ ಆಗಬೇಕು. ಪ್ರಾಧಿಕಾರದ ಮುಂದೆ ವಾಸ್ತವಾಂಶಗಳನ್ನು ಇಟ್ಟು ಎರಡೂ ರಾಜ್ಯಗಳಿಗೆ ಅನ್ಯಾಯ ಆಗದಂತೆ ಪರಿಹಾರ ಲಭಿಸಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು. ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂಬುದು ಕಾಂಗ್ರೆಸ್ ಸಣ್ಣತನವನ್ನು ತೋರಿಸುತ್ತದೆ ಎಂದು ಟೀಕಿಸಿದರು. ಜವಾಬ್ದಾರಿಯಲ್ಲಿ ಸರಕಾರ ವಿಫಲವಾಗಿದೆ ಎಂದು ನುಡಿದರು. ಇದು ರೈತರ ಬದುಕಿನ ಪ್ರಶ್ನೆ ಎಂದು ತಿಳಿಸಿದರು.

Facebook
Twitter
LinkedIn
WhatsApp
Telegram
Tumblr
Email

Leave a Comment

Your email address will not be published. Required fields are marked *

Translate »
Scroll to Top