ಕಾಡಂಚಿನ ಗ್ರಾಮಗಳಿಗೆ ಹಗಲು 3 ಫೇಸ್ ವಿದ್ಯುತ್ : ಈಶ್ವರ ಖಂಡ್ರೆ ಮನವಿ

ಬೆಂಗಳೂರು : ವನ್ಯಜೀವಿ-ಮಾನವ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಕಾಡಿನಂಚಿನ ಗ್ರಾಮಗಳಿಗೆ ರಾತ್ರಿಯ ವೇಳೆಗೆ ಬದಲಾಗಿ ಹಗಲು ಹೊತ್ತಿನಲ್ಲಿ ಮಾತ್ರವೇ 3 ಫೇಸ್ ವಿದ್ಯುತ್ ಒದಗಿಸುವಂತೆ ಮುಖ್ಯಮಂತ್ರಿಯವರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.

ಈ ಸಂಬಂಧ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯಾದ್ಯಂತ ಕಾಡಿನಂಚಿನಲ್ಲಿರುವ ಪ್ರದೇಶಗಳಿಗೆ ಆನೆ, ಹುಲಿ, ಚಿರತೆ ಸೇರಿದಂತೆ ಹಲವು ಕಾಡು ಪ್ರಾಣಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಪ್ರಾಣ ಹಾನಿ ಆಗುತ್ತಿದೆ. ರಾತ್ರಿಯ ವೇಳೆ 3 ಫೇಸ್ ವಿದ್ಯುತ್ ಪೂರೈಕೆ ಮಾಡಿದರೆ ರೈತರು ಪಂಪ್ ಸೆಟ್ ಆನ್ ಮಾಡಲು ಮತ್ತು ಆಫ್ ಮಾಡಲು ರಾತ್ರಿಯ ವೇಳೆ ಸಂಚರಿಸುವ ಕಾರಣ ಸಂಘರ್ಷ ಹೆಚ್ಚುತ್ತದೆ. ಹೀಗಾಗಿ ಬೆಳಗಿನ ಹೊತ್ತು 3ಫೇಸ್ ವಿದ್ಯುತ್ ಪೂರೈಸುವುದು ಸೂಕ್ತ ಎಂಬುದು ತಜ್ಞರ ಅಭಿಪ್ರಾಯವಾಗಿದೆ ಎಂದು ತಿಳಿಸಿದ್ದಾರೆ.

 

ಈ ನಿಟ್ಟಿನಲ್ಲಿ ಕಾಡಂಚಿನ ಗ್ರಾಮಗಳಿಗೆ ರಾತ್ರಿಯ ವೇಳೆ 3 ಫೇಸ್ ವಿದ್ಯುತ್ ಪೂರೈಸದಂತೆ ಇಂಧನ ಇಲಾಖೆಗೆ ನಿರ್ದೇಶನ ನೀಡುವಂತೆ ಇಂಧನ ಸಚಿವರನ್ನೂ ಕೋರಿದ್ದಾರೆ.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top