ಹೊಸಪೇಟೆ : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವ್ಯಾಸನಕೇರಿ ರೈಲು ನಿಲ್ದಾಣ ಸಮೀಪ ಗೂಡ್ಸ್ ಗಾಡಿಯೊಂದು ನಿನ್ನೆ ಸಂಜೆ ವೇಳೆ ಹಳಿತಪ್ಪಿದ್ದು, ಈ ಹಿನ್ನೆಲೆಯಲ್ಲಿ ವಿವಿಧ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ
ಯಶವಂತಪುರ- ವಿಜಯಪುರ ಎಕ್ಸಪ್ರೆಸ್ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ನಿನ್ನೆ ಸಂಜೆ ಗೂಡ್ಸ್ ಗಾಡಿಯೊಂದರ ಕೆಲ ಬೋಗಿಗಳು ಹಳಿ ತಪ್ಪಿದ್ದು, ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಹಳಿಗಳಿಂದ ಗೂಡ್ಸ್ ಗಾಡಿ ತೆರವು ಕಾರ್ಯದ ನಿಮಿತ್ತ ಈ ಮಾರ್ಗದಲ್ಲಿ ಸಂಚರಿಸಬೇಕಿದ್ದ ಹೊಸಪೇಟೆ- ಹರಿಹರ ಪ್ಯಾಸೆಂಜರ್, ಹರಿಹರ- ಬಳ್ಳಾರಿ ಡೆಮೊ ಸ್ಪೆಷಲ್, ಬಳ್ಳಾರಿ – ಹೊಸಪೇಟೆ ಡೆಮೋ ಸ್ಪೆಷಲ್ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ವಿಜಯಪುರ- ಯಶವಂತಪುರ ಮತ್ತು ಯಶವಂತಪುರ- ವಿಜಯಪುರ ಎಕ್ಸಪ್ರೆಸ್ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಹೊಸಪೇಟೆ- ಕೊಟ್ಟೂರು ಮಾರ್ಗದ ಬದಲಾಗಿ ಹೊಸಪೇಟೆ, ಬಳ್ಳಾರಿ, ರಾಯದುರ್ಗ, ಚಿಕ್ಕಜಾಜೂರು ಮಾರ್ಗದಲ್ಲಿ ಸಂಚರಿಸಲಿವೆ
Facebook
Twitter
LinkedIn
WhatsApp
Email
Print
Telegram