ದೇವೇಗೌಡರೇ ಪ್ಲಾನ್ ಮಾಡಿ ಪ್ರಜ್ವಲ್ ನ ವಿದೇಶಕ್ಕೆ ಕಳುಹಿಸಿದ್ದಾರೆ, ಡಿಕೆ ಶಿವಕುಮಾರ್ ವಿರುದ್ಧ ವೃಥಾ ಆರೋಪ: ಸಿಎಂ ಸಿದ್ದರಾಮಯ್ಯ

ಯಾದಗಿರಿ: ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣರನ್ನು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರೇ ಪ್ಲಾನ್ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಿದೇಶಕ್ಕೆ ಹೋಗುವವರಿಗೆ ವೀಸಾ ಕೊಡುವುದು ಯಾರು ಕೇಂದ್ರದ ಬಿಜೆಪಿಯವರೇ ತಾನೇ ಎಂದರು, ಪ್ರಜ್ವಲ್ ಪ್ರಕರಣಕ್ಕೂ ಡಿಸಿಎಂ ಡಿಕೆ ಶಿವಕುಮಾರ್ಗೂ ಯಾವುದೇ ಸಂಬಂಧ ಇಲ್ಲ ಎಂದರು.

ಸೂರಜ್ ರೇವಣ್ಣ ಜೊತೆ ಫೋಟೋ ಇದ್ದರೆ ಏನಾಗುತ್ತೆ ಕುಮಾರಸ್ವಾಮಿ ಜೊತೆಗೂ ಡಿಕೆ ಶಿವಕುಮಾರ್ ಫೋಟೋ ಇದೆ. ನನ್ನ ಜೊತೆಗೆ ಹೆಚ್ಡಿ ರೇವಣ್ಣ ಇರುವ ಫೋಟೋ ಕೂಡ ಇದೆ. ಹಾಗಾದ್ರೆ ಅವರನ್ನು ರಕ್ಷಣೆ ಮಾಡುತ್ತೇನೆ ಎಂದು ರ‍್ಥವಾ ಎಂದು ಪ್ರಶ್ನಿಸಿದರು.

ಪೆನ್ಡ್ರೈವ್ ಹಿಂದೆ ಡಿಕೆ ಶಿವಕುಮಾರ್ ಕೈವಾಡ ಇದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕರ‍್ತಿಕ್ ಎಂಬಾತ ಪ್ರಜ್ವಲ್ ರೇವಣ್ಣರ ಕಾರು ಚಾಲಕ ಆಗಿದ್ದ. ಕರ‍್ತಿಕ್ ಬಿಜೆಪಿ ಮುಖಂಡನ ಕೈಯಲ್ಲಿ ಪೆನ್ಡ್ರೈವ್ ಕೊಟ್ಟಿದ್ದ. ಅದನ್ನು ಆತನೇ ಹೇಳಿಕೊಂಡಿದ್ದಾನೆ. ಹೆಚ್ಡಿಕೆ ಕೇವಲ ರಾಜಕಾರಣಕ್ಕಾಗಿ ಡಿಕೆ ಶಿವಕುಮಾರ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.

 

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎಲ್ಲ ವಿಚಾರ ಗೊತ್ತಿದ್ದರೂ ಯಾಕೆ ಪ್ರಜ್ವಲ್ಗೆ ಟಿಕೆಟ್ ಕೊಟ್ಟರು, ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಲಾಗಿದೆ. ಎಸ್ಐಟಿ ಅಧಿಕಾರಿಗಳು ಪಾರರ‍್ಶಕವಾಗಿ ತನಿಖೆ ಮಾಡುತ್ತಾರೆ. ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top