ಬೆಂಗಳೂರು, ಫೆಬ್ರವರಿ 23 ಸುದ್ದಗಾರರೊಂದಿಗೆ ಇಂದು ಮಾತಾನಾಡಿದ ಸಚಿವರು, ಶಿವಮೊಗ್ಗ ದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಕುರಿತಂತೆ ಇದುವರೆಗೆ ಎಂಟು ಆರೋಪಿ ಗಳನ್ನು ಬಂಧಿಸಲಾಗಿದೆ. ಬಂಧಿತರಾದ ಆರೋಪಿಗಳು ಒಂದಕ್ಕಿಂತ ಹೆಚ್ಚು ಅಪರಾಧ ಕೃತ್ಯಗಳನ್ನು ಮಾಡಿದ್ದು, ಇವರ ಬೆಳವಣಿಗೆಗೆ ಕಡಿವಾಣ ಹಾಕಲು ವಿಫಲರಾದ ಪೊಲೀಸ್ ಅಧಿಕಾರಿ ಗಳು ಹಾಗೂ ಸಿಬ್ಬಂದಿಗಳ ಬಗ್ಗೆಯೂ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ. ಈ ಬಗ್ಗೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿರುವ ಸಚಿವರು, ಒಂದು ವಾರದಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದ್ದಾರೆ.
![](http://www.kannadanadunews.in/wp-content/uploads/2022/02/araga-jnanendra-dh-1033315-1632357995-1057160-1638561875.jpg)