ಕುಷ್ಟರೋಗಿ ನಿರಾಶ್ರಿತರ ಕಾಲೋನಿಗೆ ಜಿಲ್ಲಾಧಿಕಾರಿ ದಿವಾಕರ್ ಭೇಟಿ

ಹೊಸಪೇಟೆ: ನಗರದಲ್ಲಿರುವ ಕುಷ್ಟರೋಗಿಗಳ ನಿರಾಶ್ರಿತ ಮನೆಗಳಿಗೆ ಭೇಟಿ ನೀಡಲಾಯಿತು ರೋಗಿ ಮತ್ತು ಅವರ ಕುಟುಂಬದ ಸದಸ್ಯರೊಂದಿಗೆ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು ಸ್ಥಳದಲ್ಲಿ ಹಾಜರಿದ್ದ ನಗರಸಭೆ ಅಧಿಕಾರಿಗಳಿಗೆ ಕುಡಿಯುವ ನೀರು ಮತ್ತು ಡ್ರೈನೇಜ್ ವ್ಯವಸ್ಥೆಯನ್ನು ಸರಿಪಡಿಸುವಂತೆ ತಿಳಿಸಲಾಯಿತು.

ಹಾಜರಿದ್ದ ವೈದ್ಯಕೀಯ ಅಧಿಕಾರಿಗಳಿಗೆ ರೋಗಿಗಳು ಮತ್ತು ಕುಟುಂಬದ ಎಲ್ಲ ಸದಸ್ಯರಿಗೆ ವರ್ಷದಲ್ಲಿ ಎರಡು ಬಾರಿ ಆರೋಗ್ಯ ತಪಾಸಣೆ ಮಾಡಲು ತಿಳಿಸಿದರು ಮತ್ತು ಕುಟುಂಬದಲ್ಲಿರುವ ಸಣ್ಣ ಮಕ್ಕಳಲ್ಲಿ ಪೋಷಕಾಂಶ ಕೊರತೆ ಕಂಡುಬಂದಿದ್ದು ಆಸ್ಪತ್ರೆಗೆ ದಾಖಲಿಸಿ ಉಪಚಾರ ಮಾಡಲು ತಿಳಿಸಲಾಯಿತು.

ವಯಸ್ಸಾದವರಿಗೆ ತಕ್ಷಣವೇ ವೃದ್ದಾಪ್ಯ ವೇತನ ಮತ್ತು ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ಗಳನ್ನು ನಿಯಮಾನುಸಾರ ವಿತರಿಸಲು ಸೂಚಿಸಿದರು ಮತ್ತು ಅವರ ಜೊತೆಯಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಮಾಡಿದರು. ಪಕ್ಕದಲ್ಲಿದ್ದ ವಾರ್ಡ್ ನಂಬರ್ 21 ,22ರಲ್ಲಿ ಹಕ್ಕು ಪತ್ರ ನೀಡಿದ್ದು ಫಾರಂ 3 ಸಮಸ್ಯೆ ಬಗ್ಗೆ ನಾಗರಿಕರು ಅಹವಾಲು ಸಲ್ಲಿಸಿದರು. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ತಿಳಿಸಿದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top