ಹೊಸಪೇಟೆ: ನಗರದಲ್ಲಿರುವ ಕುಷ್ಟರೋಗಿಗಳ ನಿರಾಶ್ರಿತ ಮನೆಗಳಿಗೆ ಭೇಟಿ ನೀಡಲಾಯಿತು ರೋಗಿ ಮತ್ತು ಅವರ ಕುಟುಂಬದ ಸದಸ್ಯರೊಂದಿಗೆ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು ಸ್ಥಳದಲ್ಲಿ ಹಾಜರಿದ್ದ ನಗರಸಭೆ ಅಧಿಕಾರಿಗಳಿಗೆ ಕುಡಿಯುವ ನೀರು ಮತ್ತು ಡ್ರೈನೇಜ್ ವ್ಯವಸ್ಥೆಯನ್ನು ಸರಿಪಡಿಸುವಂತೆ ತಿಳಿಸಲಾಯಿತು.
![](https://kannadanadunews.in/wp-content/uploads/2024/01/WhatsApp-Image-2024-01-01-at-9.14.25-PM-1-1024x768.jpeg)
ಹಾಜರಿದ್ದ ವೈದ್ಯಕೀಯ ಅಧಿಕಾರಿಗಳಿಗೆ ರೋಗಿಗಳು ಮತ್ತು ಕುಟುಂಬದ ಎಲ್ಲ ಸದಸ್ಯರಿಗೆ ವರ್ಷದಲ್ಲಿ ಎರಡು ಬಾರಿ ಆರೋಗ್ಯ ತಪಾಸಣೆ ಮಾಡಲು ತಿಳಿಸಿದರು ಮತ್ತು ಕುಟುಂಬದಲ್ಲಿರುವ ಸಣ್ಣ ಮಕ್ಕಳಲ್ಲಿ ಪೋಷಕಾಂಶ ಕೊರತೆ ಕಂಡುಬಂದಿದ್ದು ಆಸ್ಪತ್ರೆಗೆ ದಾಖಲಿಸಿ ಉಪಚಾರ ಮಾಡಲು ತಿಳಿಸಲಾಯಿತು.
![](https://kannadanadunews.in/wp-content/uploads/2024/01/WhatsApp-Image-2024-01-01-at-9.14.22-PM-1024x768.jpeg)
ವಯಸ್ಸಾದವರಿಗೆ ತಕ್ಷಣವೇ ವೃದ್ದಾಪ್ಯ ವೇತನ ಮತ್ತು ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ಗಳನ್ನು ನಿಯಮಾನುಸಾರ ವಿತರಿಸಲು ಸೂಚಿಸಿದರು ಮತ್ತು ಅವರ ಜೊತೆಯಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಮಾಡಿದರು. ಪಕ್ಕದಲ್ಲಿದ್ದ ವಾರ್ಡ್ ನಂಬರ್ 21 ,22ರಲ್ಲಿ ಹಕ್ಕು ಪತ್ರ ನೀಡಿದ್ದು ಫಾರಂ 3 ಸಮಸ್ಯೆ ಬಗ್ಗೆ ನಾಗರಿಕರು ಅಹವಾಲು ಸಲ್ಲಿಸಿದರು. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ತಿಳಿಸಿದರು.