ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ – ಈಶ್ವರ ಖಂಡ್ರೆ

ಬೀದರ್ : ಜಿಲ್ಲೆಯ ಆಡಳಿತ ಸುಗಮವಾಗಿ ನಡೆಯಬೇಕು. ಜನರಿಗೆ ಸರ್ಕಾರಿ ಸೌಲಭ್ಯ, ಸೇವೆ ಯಾವುದೇ ಅಡ್ಡಿ ಇಲ್ಲದೆ ದೊರಕಬೇಕು. ತಾವು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ  ಸಚಿವ ಈಶ್ವರ ಖಂಡ್ರೆ ಸಂಸದ ಭಗವಂತ ಖೂಬಾ ಅವರ ಹೆಸರು ಹೇಳದೆ ತಿರುಗೇಟು ನೀಡಿದ್ದಾರೆ.

ಕೆಲವರು ಅಭಿವೃದ್ಧಿಗೆ ತಡೆ ಒಡ್ಡಲು ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾಲ್ಕು ವರ್ಷದಿಂದ ತಾವು ಯಾವುದೇ ಉತ್ತಮ ಕಾರ್ಯ ಮಾಡದ, ಜನರಿಗೆ ಅನುಕೂಲ ಆಗುವಂತ ಯೋಜನೆ ರೂಪಿಸದವರು ಇಂದು ಸುಳ್ಳು ಆರೋಪ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದರು.

ತಾವು ಸಚಿವರಾಗಿ 90ಕ್ಕೂ ಹೆಚ್ಚು ದಿನವಾಗಿದೆ. ಸರ್ಕಾರಕ್ಕೆ 100 ದಿನ ತುಂಬಿದೆ. ಈ 3 ತಿಂಗಳ ಅವಧಿಯಲ್ಲಿ ಒಂದೇ ಒಂದು ದಿನವೂ ವಿಶ್ರಾಂತಿ ಪಡೆಯದೆ ನಿರಂತರವಾಗಿ ಜನ ಸೇವೆ ಮಾಡುತ್ತಾ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವುದಾಗಿ ಈಶ್ವರ ಖಂಡ್ರೆ ಹೇಳಿದರು. ಸಣ್ಣ ಪುಟ್ಟ ವಿಚಾರಗಳಿಗೆ ಮಹತ್ವ ನೀಡಿ ಅದನ್ನೇ ದೊಡ್ಡದು ಮಾಡಿ, ಜನರ ದಾರಿ ತಪ್ಪಿಸುವುದರಿಂದ ಜಿಲ್ಲೆಗೆ ಒಳಿತಾಗುವುದಿಲ್ಲ. ನಾವೆಲ್ಲಾ ಜಿಲ್ಲೆಯ ಒಳಿತಿಗಾಗಿ ಕೆಲಸ ಮಾಡಬೇಕು. ಇಲ್ಲಿ ರಾಜಕೀಯ ಮಾತನಾಡುವುದು ಬೇಡ. ಜಿಲ್ಲೆಯ ಜನರ ಒಳಿತಿಗಾಗಿ ಶ್ರಮಿಸೋಣ ಎಂದು ಹೇಳಿದರು.

Facebook
Twitter
LinkedIn
WhatsApp
Telegram
Tumblr
Email

Leave a Comment

Your email address will not be published. Required fields are marked *

Translate »
Scroll to Top