ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ

ಕುಷ್ಟಗಿ: ನಾಡೋಜ ಡಾ. ಮಹೇಶ್ ಜೋಶಿ ಅಭಿಮಾನಿಗಳ ಬಳಗದ ವತಿಯಿಂದ ದಿನಾಂಕ : ೨೧-೧೧-೨೦೨೧ ರವಿವಾರದಂದು ನಡೆಯುವ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನದ ಸೇವಾಕಾಂಕ್ಷಿಗಳಾದ ನಾಡೋಜ ಡಾ. ಮಹೇಶ್ ಜೋಶಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸ್ಥಾನದ ಸೇವಾಕಾಂಕ್ಷಿಗಳಾದ ವೀರಪ್ಪ ನಿಂಗೊಜಿ ಅವರನ್ನು ಬೆಂಬಲಿಸಿ ವಿಜಯಶಾಲಿಗಳಾಗಲೆಂದು ದಿನಾಂಕ:೦೯-೧೧-೨೦೨೧ ರಂದು ಮಂಗಳವಾರ ಚಿಕ್ಕವಂಕಲಕುಂಟಾ ಶ್ರೀ ಮಾರುತೇಶ್ವರ ದೇವಸ್ಥಾನದಿಂದ ಕುಷ್ಟಗಿಯ ಶ್ರೀ ಮದ್ಧಾನೇಶ್ವರ ಮಠದವರೆಗೆ ಕ.ಸಾ.ಪ ಚುನಾವಣಾ ಪ್ರಚಾರ ಸಮಿತಿ ರಾಜ್ಯ ಸಂಘಟನಾ ಕಾರ್ಯದರ್ಶಿ ನಬಿಸಾಬ ಕುಷ್ಟಗಿ

ಇವರಿಂದ ಪಾದಯಾತ್ರೆ ಹಮ್ಮಿಕೊಂಡಿದ್ದು ಅಂದು ಬೆಳಗ್ಗೆ ೧೦:30 ಕ್ಕೆ ಶ್ರೀ ರೇಣುಕಾಚಾರ್ಯ ಕಲ್ಯಾಣ ಮಂಟಪದಿಂದ ಶ್ರೀ ಮದ್ಧಾನೇಶ್ವರ ಮಠದವರೆಗೆ ನಾಡೋಜ ಡಾ. ಮಹೇಶ ಜೋಶಿ ಹಾಗೂ ವೀರಪ್ಪ ನಿಂಗೊಜಿಯವರು ಮತಯಾಚನೆಯ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವರು. ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು ಹಾಗೂ ಕನ್ನಡಾಭಿಮಾನಿಗಳು ಪಾಲ್ಗೊಂಡು ಬೆಂಬಲಿಸಬೇಕೆಂದು ನಬಿಸಾಬ ಕುಷ್ಟಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದೆ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಮಲ್ಲಪ್ಪ ಬಾಲಿ ದೊಡ್ಡಪ್ಪ ಕೈರವಾಡಗಿ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

Translate »
Scroll to Top