ನಟ ಚೇತನ್ ಚಂದ್ರ ಮೇಲೆ ಮಾರಣಾಂತಿಕ ಹಲ್ಲೆ; ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ನಟ ಚೇತನ್ ಚಂದ್ರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಇಬ್ಬರನ್ನು ಪೊಲೀಸರು ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ. ಭಾನುವಾರ ರಾತ್ರಿ ಆರು ಜನರ ತಂಡ ತಮ್ಮ ಮೇಲೆ ಹಲ್ಲೆ ನಡೆಸಿದೆ ಎಂದು ಚೇತನ್ ಚಂದ್ರ ಅವರು ಕಗ್ಗಲಿಪುರ ಪೊಲೀಸರಿಗೆ ದೂರು ನೀಡಿದ್ದರು.

ಬೈಕ್‍ನಲ್ಲಿ ಹಿಂಬಾಲಿಸಿಕೊಂಡು ಬಂದ ಕಿಡಿಗೇಡಿಗಳು, ಬೈಕ್‍ಗೆ ಟಚ್ ಮಾಡಿದ್ದೀರಿ ಎಂದು ಗಲಾಟೆ ಶುರುಮಾಡಿದರು. ದುಡ್ಡು ಕೇಳಿದರು. ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಗಲಾಟೆ ಮಾಡಿದರು. ಬಳಿಕ ಬೈಕ್‌ನಲ್ಲಿ ಚೇಸ್ ಮಾಡಿಕೊಂಡು ಬಂದು ಕಾರಿಗೆ ಬೈಕ್ ಅಡ್ಡಹಾಕಿ, ನನ್ನ ಮೇಲೆ ಹಲ್ಲೆ ನಡೆಸಿದರು ಎಂದು ಹೇಳಿದ್ದಾರೆ.

ಬೈಕ್ ಚಾಲಕ ಕುಡಿದಿದ್ದ ಮತ್ತು ನಟನ ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದಾನೆ. ನಟ ವಾಹನ ಚಾಲಕನನ್ನು ತಡೆದು ವಿಚಾರಿಸಿದಾಗ ಆರು ಮಂದಿ ದುಷ್ರ‍್ಮಿಗಳ ಗುಂಪು ಅವರ ಮೇಲೆ ಹಲ್ಲೆ ನಡೆಸಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

 

ದಾಳಿಯ ನಂತರ ಚಂದ್ರು ಕಗ್ಗಲಿಪುರ ಪೊಲೀಸ್ ಠಾಣೆಗೆ ಧಾವಿಸಿದರು. ಅಲ್ಲಿಂದ ಅಧಿಕಾರಿಗಳು ಅವರನ್ನು ಪ್ರಥಮ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ನಟನ ಮೂಗು ಮತ್ತು ಮುಖಕ್ಕೆ ತೀವ್ರವಾಗಿ ಪೆಟ್ಟು ಬಿದ್ದಿದ್ದು, ಭಾರಿ ರಕ್ತಸ್ರಾವವಾಗಿದೆ. ಅವರ ಮೇಕಪ್ ಕಲಾವಿದ ಮತ್ತು ಸ್ನೇಹಿತನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Facebook
Twitter
LinkedIn
Telegram
Email
WhatsApp
Print

Leave a Comment

Your email address will not be published. Required fields are marked *

Translate »
Scroll to Top