ಆರೋಗ್ಯದಲ್ಲಿ ಏರುಪೇರು: ಮಾಜಿ ಸಿಎಂ ಎಸ್ಎಂ ಕೃಷ್ಣ ಆಸ್ಪತ್ರೆಗೆ ದಾಖಲು!

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ಎಸ್.ಎಂ.ಕೃಷ್ಣ ಅವರು ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವರದಿಗಳು ತಿಳಿಸಿವೆ. ಆದರೆ ಇನ್ನು ಎರಡು ಅಥವಾ ಮೂರು ದಿನ ಆಸ್ಪತ್ರೆಯಲ್ಲಿ ಇರಲಿದ್ದು ಬಳಿಕ ಡಿಶ್ಚರ‍್ಜ್ ಆಗಲಿದ್ದಾರೆನ್ನಲಾಗುತ್ತಿದೆ.

 

ಇತ್ತೀಚೆಗೆ ತೀವ್ರ ಜ್ವರದಿಂದ ಬಳಲಿದ್ದ ಎಸ್ಎಂ ಕೃಷ್ಣ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದರು. ಇದೀಗ ಮತ್ತೆ ತೀವ್ರ ಶೀತ ಮತ್ತು ಜ್ವರದಿಂದಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top