‘ಸರಕಾರಿ ನೌಕರರಿಗೆ ಸಂಬಳ ಸಿಗುತ್ತಿಲ್ಲ; ಮುಖ್ಯಮಂತ್ರಿಗಳು ಅಸರ‍್ಥವಾಗಿದ್ದಾರೆ’

ಬೆಂಗಳೂರು: ಜನರು ಕೂಡ ಈ ಸರಕಾರದಿಂದ ಅನುದಾನ ಬರುವುದಿಲ್ಲ ಎಂಬಷ್ಟರ ಮಟ್ಟಿಗೆ ಪಶ್ಚಾತ್ತಾಪ ಪಡುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಸಂಪುಟವನ್ನು ಗಮನಿಸಿದರೆ ಇಡೀ ಸಂಪುಟವೇ ಅಸರ‍್ಥವಾಗಿದೆ. ರಕಾರಿ ನೌಕರರಿಗೆ ಸಂಬಳ ಸಿಗುತ್ತಿಲ್ಲ ಅನ್ನುವಷ್ಟರ ಮಟ್ಟಿಗೆ ಅಸರ‍್ಥ ಮುಖ್ಯಮಂತ್ರಿಯ ಆಡಳಿತವನ್ನು ರ‍್ನಾಟಕದಲ್ಲಿ ನೋಡುತ್ತಿದ್ದೇವೆ ಎಂದು ವಿ. ಸುನೀಲ್ ಕುಮಾರ್ ಅವರು ತಿಳಿಸಿದರು.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಚಿವರ ಮೇಲೆ ಹಿಡಿತವಿಲ್ಲದೆ ಮುಖ್ಯಮಂತ್ರಿಗಳು ಅಸರ‍್ಥವಾಗಿದ್ದಾರೆ. ಯೋಜನೆ ರೂಪಿಸುವುದರಲ್ಲಿ ಮುಖ್ಯಮಂತ್ರಿಗಳು ಅಸರ‍್ಥವಾಗಿದ್ದಾರೆ. ಕಾನೂನು, ಸುವ್ಯವಸ್ಥೆ ನಿಭಾಯಿಸುವುದರಲ್ಲಿ ಗೃಹ ಸಚಿವರು ಸಂಪರ‍್ಣವಾಗಿ ವಿಫಲವಾಗಿದ್ದಾರೆ. ಬರ ಪರಿಹಾರದಲ್ಲಿ ಕಂದಾಯ ಸಚಿವರು ಎಷ್ಟು ದೊಡ್ಡ ಪ್ರಮಾಣದಲ್ಲಿ ವೈಫಲ್ಯ ಕಂಡಿದ್ದಾರೆಂದರೆ ಮಂತ್ರಿಮಂಡಲದ ಒಬ್ಬ ಸದಸ್ಯರೂ ಬರ ಪರಿಹಾರದ ಸ್ಥಳಕ್ಕೆ ಭೇಟಿ ಕೊಟ್ಟಿಲ್ಲ ಎಂದು ಹೇಳಿದರು.

ಹಣ ಬಿಡುಗಡೆ ಮಾಡಿಲ್ಲ. ಕಂದಾಯ ಸಚಿವರಿಂದ ಗ್ರಾಮೀಣಾಭಿವೃದ್ಧಿ ಸಚಿವರವರೆಗೆ ಎಲ್ಲ ಸಂಪುಟವು ಬರ ಪರಿಹಾರದ ನರ‍್ವಹಣೆಯಲ್ಲಿ ಅಸರ‍್ಥವಾಗಿದೆ. ರೈತರಿಗೆ ಈಗ ಹೊಸ ಸಾಲ ಸಿಗುತ್ತಿಲ್ಲ. ರೈತರ ಸಾಲದ ಬಡ್ಡಿ ಮನ್ನಾ ಮಾಡಿದ್ದಾಗಿ ಘೋಷಣೆ ಮಾಡಿ, ೪೯೬ ಕೋಟಿ ಅನುದಾನವನ್ನು ಬಿಡುಗಡೆ ಮಾಡದ ಕಾರಣ ಪಿಎಲ್‍ಡಿ ಬ್ಯಾಂಕ್, ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳಲ್ಲಿ ರೈತರಿಗೆ ಮರುಸಾಲ ಸಿಗದ ಪರಿಸ್ಥಿತಿ ನರ‍್ಮಾಣವಾಗಿದ್ದರೆ ಅದಕ್ಕೆ ಕೃಷಿ- ಸಹಕಾರಿ ಸಚಿವರು ಇವತ್ತು ಅಸರ‍್ಥವಾಗಿರುವುದೇ ಕಾರಣ ಎಂದು ಹೇಳಿದರು. ಈ ಸರಕಾರ ಬಂದ ಬಳಿಕ ರ‍್ನಾಟಕದ ಒಬ್ಬನೇ ಒಬ್ಬ ರೈತನಿಗೆ ಹೊಸ ಪಂಪ್‍ಸೆಟ್ ಸಂರ‍್ಕ ಸಿಗಲಿಲ್ಲ. ರೈತರು ಹಣ ಕಟ್ಟಿದರೂ ಹೊಸ ಸಂರ‍್ಕ ಸಿಕ್ಕಿಲ್ಲ ೨೪ ಗಂಟೆ ವಿದ್ಯುತ್ ನಿರಂತರ ಬಿಡಿ; ಗ್ರಾಮೀಣ ಪ್ರದೇಶದಲ್ಲಿ ೧೦- ೧೨ ಗಂಟೆ ವಿದ್ಯುತ್ ಕೊಡಲಾಗದ ಅಸರ‍್ಥ ಇಂಧನ ಸಚಿವರು ನಮ್ಮ ನಡುವೆ ಇದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ಒಂದು ರ‍್ಷದ ಅವಧಿಯನ್ನು ಅಸರ‍್ಥ ಸಂಪುಟ, ಅಭಿವೃದ್ಧಿಶೂನ್ಯ ಸರಕಾರ. ವಿಧಾನಸಭಾ ಚುನಾವಣೆ ಮುಗಿದು ಸರಕಾರ ರಚನೆಯಾಗಿ ಒಂದು ರ‍್ಷ ಮುಗಿಯುತ್ತಿದೆ. ಗೊತ್ತುಗುರಿ ಇಲ್ಲದ ಆಡಳಿತವನ್ನು ರ‍್ನಾಟಕದ ಜನತೆ ಕಳೆದ ಒಂದು ರ‍್ಷದಲ್ಲಿ ನೋಡಿದ್ದಾರೆ. ಅಭಿವೃದ್ಧಿ ಶೂನ್ಯ ಸರಕಾರ ಇದು ಎಂದು ಟೀಕಿಸಿದರು. ಈ ಒಂದು ರ‍್ಷದ ಅವಧಿಯಲ್ಲಿ ಯಾವ ಯೋಜನೆಗೆ ಅನುದಾನ ಕೊಟ್ಟಿದ್ದಾರೆ ಎಂಬ ಮಾಹಿತಿಯನ್ನು ಸರಕಾರ ಬಿಡುಗಡೆ ಮಾಡಬೇಕು. ಸ್ಥಳೀಯ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಯಾವ ಯೋಜನೆಗಳಿಗೆ, ಎಷ್ಟು ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನ ಕೊಟ್ಟಿದ್ದಾರೆ ಎಂದು ಸರಕಾರ ಬಹಿರಂಗಪಡಿಸಿದರೆ ಸಾಕು ಎಂದು ವ್ಯಂಗ್ಯವಾಗಿ ಹೇಳಿದರು. ಇಂಥ ಅಭಿವೃದ್ಧಿಶೂನ್ಯ ಆಡಳಿತ, ಸರಕಾರವನ್ನು ರ‍್ನಾಟಕದ ಜನತೆ ಯಾವತ್ತೂ ನೋಡಿರಲಿಲ್ಲ. ವಿಧಾನಸಭಾ ಕ್ಷೇತ್ರಗಳು, ಇಲಾಖೆಗಳಿಗೆ ಒಂದು ರೂಪಾಯಿ ಅನುದಾನವನ್ನೂ ಕೊಡದೆ ಒಂದು ರ‍್ಷ ಕಾಲವನ್ನು ಈ ಸರಕಾರ ಕಳೆದಿದೆ. ನಾವೆಲ್ಲ ಶಾಸಕರು ಒಂದು ರ‍್ಷದಿಂದ ಒಂದು ಗುದ್ದಲಿ ಪೂಜೆ ಮಾಡಲಾಗಿಲ್ಲ. ಒಂದು ಅನುದಾನ ಬಂದಿದೆ ಎಂದು ಜನರ ಹತ್ತಿರ ಹೋಗಲೂ ಆಗಿಲ್ಲ. ಶಿಕ್ಷಣದ ವ್ಯವಸ್ಥೆ ಸಂಪರ‍್ಣವಾಗಿ ಕುಸಿದು ಬಿದ್ದಿದೆ. ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಗ್ರೇಸ್ ಮರ‍್ಕ್ ಕೊಟ್ಟಿದ್ದನ್ನು ಗಮನಿಸಿದರೆ ಶಿಕ್ಷಣ ಇಲಾಖೆ ಎಷ್ಟು ಅಸರ‍್ಥ ಎಂಬುದನ್ನು ನಾವು ನೋಡುತ್ತಿದ್ದೇವೆ. ಅಂಗನವಾಡಿಯವರಿಗೆ ಗೌರವಧನ ಹೆಚ್ಚಿಸಿಲ್ಲ; ಅಂಗನವಾಡಿಗಳ ಮೊಟ್ಟೆ ವಿತರಣೆಯಲ್ಲಿ ವ್ಯತ್ಯಾಸವಾಗಿದೆ. ಅಲ್ಲೂ ಕೂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಅಸರ‍್ಥರಾಗಿದ್ದಾರೆ ಎಂದು ದೂರಿದರು.

ಬ್ರ‍್ಯಾಂಡ್ ಬೆಂಗಳೂರು ಇವತ್ತು ದಿಕ್ಕೆಟ್ಟ ಬೆಂಗಳೂರಾಗಿದೆ. ಬೆಂಗಳೂರಿಗೆ ಯಾವ ರೀತಿಯ ಯೋಜನೆ ರೂಪಿಸುವುದರಲ್ಲಿ ನಗರಾಭಿವೃದ್ಧಿ ಸಚಿವರು ಅಸರ‍್ಥರಾಗಿದ್ದಾರೆ. ಇದೊಂದು ಅಸರ‍್ಥ ಸಂಪುಟ. ಅಭಿವೃದ್ಧಿ ಶೂನ್ಯ ಸರಕಾರ. ಜನಪ್ರತಿನಿಧಿಗಳಿಗೆ ಅಪಮಾನ ಮಾಡುವ ರೀತಿಯಲ್ಲಿ. ಬೆಲೆ ಹೆಚ್ಚಳ ದೊಡ್ಡ ಪ್ರಮಾಣದಲ್ಲಿ ನಡೆದಿದೆ. ಪಿಕ್ ಪಾಕೆಟ್ ಕಾಂಗ್ರೆಸ್ ಎಂದು ನಾವು ಈ ಹಿಂದೆ ಹೇಳಿದ್ದೆವು. ಅದನ್ನು ಸರಕಾರ ಸರಿ ಮಾಡಿಕೊಂಡಿಲ್ಲ. ರ‍್ನಾಟಕದಲ್ಲಿ ಆಡಳಿತವನ್ನು ಕೆಲವು ಕುಟುಂಬದ ಸದಸ್ಯರು, ಇವೆಂಟ್ ಮ್ಯಾನೇಜ್‍ಮೆಂಟಿನ ಸದಸ್ಯರು ಸರಕಾರ ನಡೆಸುತ್ತಿದ್ದಾರೆ. ಜನಪ್ರತಿನಿಧಿಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಈ ಸರಕಾರ ನಡೆಯುತ್ತಿದೆ ಎಂದು ಹೇಳಿದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top