ಪದವೀಧರ ಮತದಾರರು ನನ್ನನ್ನು ಬೆಂಬಲಿಸಿ ಆಶೀರ್ವದಿಸಿ: ಅಮರನಾಥ್ ಪಾಟೀಲ್

ಬೆಂಗಳೂರು: ಈಶಾನ್ಯ ಪದವೀಧರ ಮತಕ್ಷೇತ್ರದಿಂದ ಬಿಜೆಪಿಯಾಗಿ ಸ್ಪರ್ಧಿಸಿರುವ ತಮ್ಮನ್ನು ಪ್ರಜ್ಞಾವಂತ ಮತದಾರರು ಬೆಂಬಲಿಸಿ ಆಶೀರ್ವದಿಸುವಂತೆ ವಿಧಾನ ಪರಿಷತ್ನ ಈಶಾನ್ಯ ಪದವೀಧರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮರನಾಥ್ ಪಾಟೀಲ್ ಮನವಿ ಮಾಡಿದ್ದಾರೆ.

ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿಲ್ಲೆಗಳಲ್ಲಿ ನಾನು ಪ್ರವಾಸ ಕೈಗೊಂಡು ಬಿರುಸಿನ ಪ್ರಚಾರ ಮಾಡಿ ಮತಯಾಚಿಸುತ್ತಿದ್ದೇನೆ ಬಳ್ಳಾರಿಗೆ ಎರಡನೇ ಬಾರಿಗೆ ಬಂದಿದ್ದೇನೆ ಇಂದು ಕೂಡ ಹಲವಾರು ಕಾಲೇಜು ಶಾಲೆಗಳಿಗೆ ಭೇಟಿ ನೀಡಿ ಮತಯಾಚಿಸುವುದಾಗಿ ಹೇಳಿದರು.

ವಿದ್ಯಾವಂತ ಪದವೀಧರ ಮತದಾರರೆಲ್ಲರೂ ತಪ್ಪದೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ತಮಗೆ ಪ್ರಥಮ ಪ್ರಶಸ್ತಿದ ಮತ ನೀಡಿ ಬೆಂಬಲಿಸಬೇಕು ಈ ಹಿಂದೆ ನಾನು 2012ರಲ್ಲಿ ಇದೆ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದೇನೆ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಲ್ಲಿನ ಶಿಕ್ಷಣದ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ 371 ಜೆ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯಿಸಿ ಹೋರಾಡಿದ್ದೇನೆ ಪರಿಷತ್ತಿನಲ್ಲಿ ಅನೇಕ ಪ್ರಶ್ನೆಗಳನ್ನು ಕೇಳಿ ಸರ್ಕಾರಗಳ ಗಮನಸೆಳೆದು ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಶ್ರಮಿಸಿದ್ದೇನೆ ಎಂದು ಪಾಟೀಲರು ತಿಳಿಸಿದ್ದಾರೆ.

ಈ ಹಿಂದೆ ಶ್ರದ್ಧೆ ಕಳಕಳಿ ಕಾಳಜಿಗಳಿಂದ ಬದ್ಧತೆಯೊಂದಿಗೆ ಕೆಲಸ ಮಾಡಿದ್ದೇನೆ ಈ ಬಾರಿ ಮತದಾರ ಬಾಂಧವರು ಮತ್ತೊಮ್ಮೆ ನನಗೆ ಅವಕಾಶ ನೀಡಿದೆ ನಿರುದ್ಯೋಗ ಯುವಜನರನ್ನು ನಿಜ ಧ್ವನಿಯಾಗಿ ಸರ್ಕಾರದ ಗಮನ ಸೆಳೆದು ದಕ್ಷತೆಯಿಂದ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

 

ಈ ಸಂದರ್ಭದಲ್ಲಿ ರಾಜ್ಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್ ರವಿ ಕುಮಾರ್ ಜಿಲ್ಲಾ ಬಿಜೆಪಿ ಅಧ್ಯಕ್ಷ ಅನಿಲ್ ನಾಯ್ಡು, ಮಾಜಿ ಶಾಸಕ ಜಿ ಸೋಮಶೇಖರ್ ರೆಡ್ಡಿ ಹಿರಿಯ ಧುರೀಣರಾದ ಡಾಕ್ಟರ್ ವೆಂಕಟಮಹಿಪಾಲ ಎಸ್ ಗುರುಲಿಂಗನಗೌಡ ಮುರಹರ ಗೌಡ ಎಚ್ ಹನುಮಂತಪ್ಪ ಮತ್ತೆ ತರ ಉಪಸಿತರಿದ್ದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top