ದೇವನಹಳ್ಳಿ,ಡಿ,28 : ಕಳೆದ 20 ವರ್ಷಗಳಿಂದ 4 ಬಾರಿ ನಡೆದ ಚುನಾವಣೆಯಲ್ಲೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗ್ರಾಪಂ ಗೆ ಆಯ್ಕೆಯಾಗಿದ್ದು, ಈ ಬಾರಿಯೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ ಎಂದು ತಾ.ಪಂ. ಮಾಜಿ ಸದಸ್ಯ ದಿನ್ನೂರು ವೆಂಕಟೇಶ್ ತಿಳಿಸಿದರು.
ದೇವನಹಳ್ಳಿ ತಾಲ್ಲೂಕು ಸಮೀಪದ ಚನ್ನರಾಯಪಟ್ಟಣ ಗ್ರಾ.ಪಂ ಗೆ ನಡೆದ ಚುನಾವಣೆಗೆ ದಿನ್ನೂರು ಮತಗಟ್ಟೆಯಲ್ಲಿ ಮತ ಚಲಾಯಿಸಿ ಮಾತನಾಡಿ, ಕಾಂಗ್ರೆಸ್ ನಾಯಕರು, ಮುಖಂಡರ ನೇತೃತ್ವ ಮತ್ತು ಅಧಿಕಾರಾವಧಿಯಲ್ಲಿ ದಿನ್ನೂರು ಗ್ರಾಮ ಬಹಳಷ್ಟು ಅಭಿವೃದ್ಧಿ ಹೊಂದಿದೆ. 430 ಮತಗಳಿರುವ ಪುಟ್ಟ ಗ್ರಾಮವಾದರೂ ಗ್ರಾಮಾಂತರ ಜಿಲ್ಲೆಯಲ್ಲಿಯೇ ಉತ್ತಮ ಯೋಜನೆಗಳಿಂದ ಅಭಿವೃದ್ಧಿ ಹೊಂದಿದ ಮಾದರಿ ಗ್ರಾಮವಾಗಿದೆ. ಆದ್ದರಿಂದ ಈ ಬಾರಿಯೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.