ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಹೆಚ್.ಡಿ. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಇಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಅವರನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.
![](https://kannadanadunews.in/wp-content/uploads/2023/11/Parameshwar3-1015x1024.jpg)
ಕಲಬುರಗಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಇಂದು ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ. ಒಂದು ವೇಳೆ ಅವರು ವಿಚಾರಣೆಗೆ ಹಾಜರಾಗದೆ ಹೋದರೆ ಮುಲಾಜಿಲ್ಲದೆ ಬಂಧಿಲಾಗುವುದು ಎಂದು ಹೇಳಿದರು
ಸಂಸದ ಪ್ರಜ್ವಲ್ ರೇವಣ್ಣ ಅವರು ವಿಚಾರಣೆಗೆ ಹಾಜರಾಗಲು ವಕೀಲರ ಮೂಲಕ ಆರು ದಿನಗಳ ಕಾಲಾವಕಾಶ ಕೋರಿದ್ದಾರೆ ಆದರೆ ಪ್ರಕರಣದ ಸೆಕ್ಷನ್ ೪೧ಎ ಪ್ರಕಾರ ಹಾಗೆಲ್ಲಾ ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಅವರು ವಿಚಾರಣೆಗೆ ಹಾಜರಾಗಬೇಕು ಎಂದು ಹೇಳಿದರು.
ಈ ಪ್ರಕರಣದ ೨ನೇ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದು ಸತ್ಯ. ಕೇಂದ್ರ ಸರ್ಕಾರವೇ ರಾಜತಾಂತ್ರಿಕ ಪಾಸ್ಪೋರ್ಟ್ ನೀಡಿದೆ. ಹಾಗಾಗಿ ವಿದೇಶಕ್ಕೆ ತೆರಳಿದ್ದಾರೆ. ಅವರನ್ನು ಶೀಘ್ರವೇ ಅಲ್ಲಿಂದ ಕರೆತರಲಾಗುವುದು. ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ನ್ನು ಹೊರಡಿಸಲಾಗಿದೆ ಎಂದು ಗೃಹ ಸಚಿವರು ಹೇಳಿದರು.
ಈಗಾಗಲೇ ಎಸ್.ಐ.ಟಿ ಎದುರು ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್ ನೀಡಲಾಗಿದೆ. ಅವರು ತಮ್ಮ ವಕೀಲರ ಮೂಲಕ ಆರು ದಿನಗಳ ಕಾಲಾವಕಾಶ ಕೋರಿದ್ದಾರೆ. ಆದರೆ, ಪ್ರಕರಣದ ಸೆಕ್ಷನ್ ೪೧ ಎ ಪ್ರಕಾರ ಹಾಗೆಲ್ಲಾ ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಹೀಗಾಗಿ, ಪ್ರಜ್ವಲ್ ಅವರನ್ನು ಅರೆಸ್ಟ್ ಮಾಡಲಾಗುವುದು. ಆರೋಪಿ ನಂಬರ್ ಒನ್ ಆಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಇಂದು ವಿಚಾರಣೆಗೆ ಹಾಜರಾಗಲು ಒಪ್ಪಿಕೊಂಡಿದ್ದಾರೆ. ಒಂದು ವೇಳೆ ಇಂದು ಹಾಜರಾಗದೆ ಹೋದರೆ ಮುಲಾಜಿಲ್ಲದೆ ಅರೆಸ್ಟ್ ಮಾಡಲಾಗುವುದು ಎಂದು ಖಚಿತಪಡಿಸಿದರು.
ಆರೋಪಿ ಪ್ರಜ್ವಲ್ ಅವರಿಗೆ ಕೇಂದ್ರ ಸರಕಾರವೇ ಡಿಪ್ಲೊಮ್ಯಾಟಿಕ್ ಪಾಸ್ ಪೋರ್ಟ್ ನೀಡಿದೆ. ಹೀಗಾಗಿ, ಅವರು ಸಲೀಸಾಗಿ ದೇಶ ಬಿಟ್ಟು ಹೋಗಿದ್ದಾರೆ. ಈಗ ಡಿಪ್ಲೊಮ್ಯಾಟಿಕ್ ಪಾಸ್ ಪೋರ್ಟ್ ರದ್ದುಪಡಿಸುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ ಎಂದು ಮಾಹಿತಿ ನೀಡಿದರು.
ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಸಂತ್ರಸ್ತ ಮಹಿಳೆಯರು ಹಾಗೂ ಅವರ ಕುಟುಂಬಗಳಿಗೆ ಸರಕಾರ ರಕ್ಷಣೆ ನೀಡಲಿದೆ. ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಚಿವ ಪರಮೇಶ್ವರ ಸ್ಪಷ್ಟಪಡಿಸಿದರು.
ಕಾನೂನು ಸ್ಥಿತಿ ಉತ್ತಮ: ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಪರಿಸ್ಥಿತಿ ನಿರ್ವಹಣೆಯಲ್ಲಿ ಕೇಂದ್ರ ಸರಕಾರಕ್ಕಿಂತಲೂ ರಾಜ್ಯ ಸರಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.