ಕೆಆರ್‍ಎಸ್‍ ಡ್ಯಾಂಗೆ ಹೆಚ್ಚಿದ ಒಳಹರಿವು

ಮೈಸೂರು / ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಕೆಆರ್‌ಎಸ್ ಡ್ಯಾಂ‌ಗೆ 10 ಸಾವಿರ ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದೆ.

 

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂಗೆ ಒಳಹರಿವಿನ ಪ್ರಮಾಣ ಏರುತ್ತಿದೆ. ಕಳೆದ ಮೂರು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಳೆಯ ಅಬ್ಬರದಿಂದ ಕೆಆರ್‌ಎಸ್‌ಗೆ ಅಧಿಕ ಒಳಹರಿವು ಕಂಡು ಬಂದಿದೆ. ಇಂದು ಕೆಆರ್‌ಎಸ್‌ನಲ್ಲಿ  13,437 ಕ್ಯೂಸೆಕ್ ಒಳಹರಿವು ಇದ್ದು, ಈ ವರ್ಷದಲ್ಲಿ ಸದ್ಯ ಇದೇ ಅಧಿಕ ಪ್ರಮಾಣದ ಒಳಹರಿವು ದಾಖಲಾಗಿದೆ. 

ನಿನ್ನೆ 3,856 ಕ್ಯೂಸೆಕ್‌ ಒಳಹರಿವು ಇತ್ತು. 24 ಗಂಟೆಯ ಅವಧಿಯಲ್ಲಿ 10 ಸಾವಿರ ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದೆ. ಅಲ್ಲದೇ ಒಂದೇ ದಿನದಲ್ಲಿ ಡ್ಯಾಂಗೆ ಹರಿದು 1 ಟಿಎಂಸಿಗೂ ಅಧಿಕ ನೀರು ಹರಿದು ಬಂದಿದೆ.

 

49.452 ಟಿಎಂಸಿ ಗರಿಷ್ಠ ಸಾಮಾರ್ಥ್ಯದ ಕೆಆರ್‌ಎಸ್‌ನಲ್ಲಿ 16.118 ಟಿಎಂಸಿ ಸಂಗ್ರಹವಿದ್ದು, ನಿನ್ನೆ 15.007 ಟಿಎಂಸಿ ನೀರು ಇತ್ತು. 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ 90.30 ಅಡಿ ನೀರು ಶೇಖರಣೆಯಾಗಿದೆ. ಅಂತೆಯೇ ಇಂದಿನ ಹೊರ ಹರಿವು 478 ಕ್ಯೂಸೆಕ್ ನಷ್ಟಿದೆ. 

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top