ಐತಿಹಾಸಿಕ ಹಂಪಿ ಸ್ಮಾರಕಗಳನ್ನು ಸಂರಕ್ಷಿಸುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ

Kannada Nadu
ಐತಿಹಾಸಿಕ ಹಂಪಿ ಸ್ಮಾರಕಗಳನ್ನು ಸಂರಕ್ಷಿಸುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ

ಹೊಸಪೇಟೆ:ಐತಿಹಾಸಿಕ ಹಂಪಿ ಸ್ಮಾರಕಗಳನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಮೀಸಲಿಡುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ
ಹೇಳಿದರು.
ಹಂಪಿಯಲ್ಲಿ ವಿಶ್ವ ಪರಂಪರೆ, ಪ್ರವಾಸೋದ್ಯಮ ಮತ್ತು ಫಿಟ್ನೆಸ್ ಅನ್ನು ಉತ್ತೇಜಿಸುವ ನಿಟ್ಟಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ 21 ಕಿಮೀ ಮತ್ತು 12 ಕಿಮೀ ಮತ್ತು 5 ಕಿಮೀ ಓಟಗಳ ಗೋ ಹೆರಿಟೇಜ್ ಓಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಶ್ವವಿಖ್ಯಾತ ಹಂಪಿ ನೆಮ್ಮಲ್ಲರ ಹೆಮ್ಮೆಯಾಗಿದೆ.ನಿಲ್ಲಿನ ಪ್ರಸಿದ್ಧ ಸ್ಮಾರಕಗಳು ಜಗತ್ತಿನ ಗಮನ ಸೆಳೆದಿವೆ. ಇಲ್ಲಿನ ಶಿಲ್ಪಕಲಾ ವೈಭವ ಎಲ್ಲರನ್ನು ಕೈ ಬೀಸಿ ಕರೆಯುತ್ತಿದೆ. ಇತಂಹ ಸ್ಮಾರಕಗಳನ್ನು ಸಂರಕ್ಷಿಸುವ ಹೊಣೆ ಎಲ್ಲರ ಮೇಲಿದೆ ಎಂದರು.
ಹಂಪಿ ಗಾಯತ್ರಿ ಪೀಠದಿಂದ ಆರಂಭವಾದ ಗೋ ಹೆರಿಟೇಜ್ ಓಟದಲ್ಲಿ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಕೃಷ್ಣ ದೇವಸ್ಥಾನ, ಕೃಷ್ಣ ಬಜಾರ್, ಶ್ರೀ ಚಂಡಿಕೇಶ್ವರ ಗುಡಿ, ಶಿವ ದೇವಾಲಯ, ರಾಣಿ ಸ್ನಾನಗೃಹ ಹಾಗೂ ತಳವಾರ್ ಘಟ್ಟ ಸೇರಿದಂತೆ ವಿವಿಧ ಸ್ಮಾರಕಗಳನ್ನು ದಾಟಿ ಓಟ ಪೂರ್ಣಗೊಳಿಸಿದರು. ರಾಜ್ಯ, ಹೊರ ರಾಜ್ಯದಿಂದ ಆಗಮಿಸಿದ ಪ್ರವಾಸಿಗರು ಈ ಓಟದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಎಸ್., ಡಿವೈಎಸ್ಪಿ ಮಂಜುನಾಥ ಸೇರಿದಂತೆ ಇತರರು ಭಾಗವಹಿಸಿದ್ದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";