ಜನಾರ್ದನ ರೆಡ್ಡಿ ಬಿಜೆಪಿಗೆ ಆಗಮನ ದೊಡ್ಡ ಶಕ್ತಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಮರಳಿ ಬಂದಿರುವುದು ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

 

ಅವರು ಇಂದು ಕೊಪ್ಪಳ ಸಂಸದ ಕರಡಿ ಸಂಗಣ್ಣ ಹಾಗೂ ಅವರ ಬೆಂಬಲಿಗರು ತಮ್ಮನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಅವರು ಉತ್ತರ ಕರ್ನಾಟಕ ಭಾಗದಲ್ಲಿ ತಮ್ಮದೇ ಆದ ಪ್ರಭಾವ ಹೊಂದಿದ್ದಾರೆ. ಅವರು ಪಕ್ಷಕ್ಕೆ ವಾಪಸ್ ಬಂದಿರುವುದರಿಂದ ಆ ಭಾಗದಲ್ಲಿ ಪಕ್ಷಕ್ಕೆ ದೊಡ್ಡ ಮಟ್ಟದ ಅನುಕೂಲ ಅನುಕೂಲವಾಗಲಿದೆ ಎಂದು ಹೇಳಿದರು.

ಇನ್ನು ಸಂಸದ ಕರಡಿ ಸಂಗಣ್ಣ ಅವರಿಗೆ ಟಿಕೆಟ್ ತಪ್ಪಿರುವುದರಿಂದ ಅವರ ಬೆಂಬಲಿಗರೊಂದಿಗೆ ಬಂದು ತಮಗೆ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ. ಅವರ ಭಾವನೆಗಳನ್ನು ಪಕ್ಷದ ಮುಖಂಡರ ಗಮನಕ್ಕೆ ತರುತ್ತೇನೆ ಎಂದು ಹೇಳಿದರು.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top