ಕೇರಳ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಪಿ.ಟಿ. ಥಾಮಸ್ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ಕೇರಳ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷರು, ಶಾಸಕರು ಹಾಗೂ ಕೇರಳದ ಮಾಜಿ ಸಚಿವರಾದ ಪಿ.ಟಿ. ಥಾಮಸ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಕೇರಳ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರು, ನನಗೆ ಆತ್ಮೀಯರು ಆದ ಪಿ.ಟಿ. ಥಾಮಸ್ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ವಿದ್ಯಾರ್ಥಿ ಘಟಕದಿಂದ ಬೆಳೆದು ಬಂದ ಥಾಮಸ್ ಅವರು ಕೇರಳದಲ್ಲಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಲೋಕಸಭೆಗೂ ಆಯ್ಕೆಯಾಗಿದ್ದ ಅವರು, ಪರಿಸರ ಸಂರಕ್ಷಣೆಗಾಗಿ ಸಾಕಷ್ಟು ಹೋರಾಟ ಮಾಡಿದ್ದರು. ಥಾಮಸ್ ಅವರ ಅಗಲಿಕೆ ಬರೀ ಕೇರಳಕ್ಕಷ್ಟೇ ಅಲ್ಲ ಕಾಂಗ್ರೆಸ್ ಪಕ್ಷಕ್ಕೇ ನಷ್ಟವಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರು, ಅವರ ಅಭಿಮಾನಿ ಬಳಗ, ಪಕ್ಷದ ಕಾರ್ಯಕರ್ತರಿಗೆ ಕೊಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top