ಬಳ್ಳಾರಿ : ಎಸ್ಸಿಪಿ/ಟಿಎಸ್ಪಿ ಯೋಜನೆ ಅಡಿ ವಿವಿಧ ಗ್ರಾಮಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಭೂಮಿಪೂಜೆ ನೆರವೇರಿಸಿದರು.
ಬಳ್ಳಾರಿ ತಾಲೂಕಿನ ಕೊಳಗಲ್ಲು,ಸಂಗನಕಲ್ಲು,ತಂಬ್ರಹಳ್ಳಿ, ಬುರ್ರನಾಯಕನಹಳ್ಳಿ ಗ್ರಾಮಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.
ಶೀಘ್ರವಾಗಿ ಕಾಮಗಾರಿಗಳು ಆರಂಭಿಸಬೇಕು ಮತ್ತು ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಮಾಜಿ ಸಂಸದ ಸಣ್ಣ ಫಕೀರಪ್ಪ ಹಾಗೂ ಅಧಿಕಾರಿಗಳು ಮತ್ತು ಮುಖಂಡರು ಇದ್ದರು.