ನವದೆಹಲಿ: ಲೋಕಸಭೆ ಚುನಾವಣೆ ೨೦೨೪ರ ಮೂರನೇ ಹಂತದ ಮತದಾನ ದೇಶದ ೯೩ ಕ್ಷೇತ್ರಗಳಲ್ಲಿ ಪ್ರಗತಿಯಲ್ಲಿದ್ದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಪ್ರಮುಖರು ತಮ್ಮ ಹಕ್ಕು ಚಲಾಯಿಸಿದರು.
![](https://kannadanadunews.in/wp-content/uploads/2024/05/11-2.png)
ಗುಜರಾತ್ನ ೨೫ ಕ್ಷೇತ್ರಗಳಿಗೆ ಒಂದೇ ಹಂತದ ಮತದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರ ಲೋಕಸಭಾ ಕ್ಷೇತ್ರದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಬೆಳಗ್ಗೆ ೭ ಗಂಟೆಗೆ ಮತದಾನ ಆರಂಭವಾದ ಬೆನ್ನಲ್ಲೇ ಮೋದಿ ಅವರು ಅಹಮದಾಬಾದ್ ನಗರದ ರಾನಿಪ್ ಪ್ರದೇಶದ ನಿಶಾನ್ ಪಬ್ಲಿಕ್ ಸ್ಕೂಲ್ನಲ್ಲಿರುವ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು. ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಸ್ರ್ಧಿಸುತ್ತಿದ್ದಾರೆ.
ಮೂರನೇ ಹಂತದ ಲೋಕಸಭೆ ಚುನಾವಣೆಯಲ್ಲಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಜನರನ್ನು ಒತ್ತಾಯಿಸಿದ ಅವರು, ಮತದಾರರ ಸಕ್ರಿಯ ಭಾಗವಹಿಸುವಿಕೆ ಚುನಾವಣೆಯನ್ನು ಇನ್ನಷ್ಟು ರೋಮಾಂಚನಗೊಳಿಸುತ್ತದೆ ಎಂದು ಹೇಳಿದರು.
ಸಂಸತ್ತಿನ ಮೂರನೇ ಹಂತದ ಮತದಾನದಲ್ಲಿ ೧೧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ೯೩ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಪ್ರಧಾನಿಯವರು ಬೆಂಗಾಲಿ, ಅಸ್ಸಾಮಿ, ಕನ್ನಡ, ಗುಜರಾತಿ, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ಮೈಕ್ರೋಬ್ಲಾಗಿಂಗ್ ವೇದಿಕೆಯಲ್ಲಿ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ.
ಮೂರನೇ ಹಂತದ ಚುನಾವಣೆಯಲ್ಲಿ ಸುಮಾರು ೧೨೦ ಮಹಿಳೆಯರು ಸೇರಿದಂತೆ ೧,೩೦೦ಕ್ಕೂ ಹೆಚ್ಚು ಅಭ್ರ್ಥಿಗಳು ಕಣದಲ್ಲಿದ್ದಾರೆ. ಕೇಂದ್ರ ಸಚಿವರಾದ ಅಮಿತ್ ಶಾ (ಗಾಂಧಿನಗರ), ಜ್ಯೋತಿರಾಧಿತ್ಯ ಸಿಂಧಿಯಾ (ಗುಣ), ಮನ್ಸುಖ್ ಮಾಂಡವಿಯಾ (ಪೋರಬಂದರ್), ರ್ಷೋತ್ತಮ್ ರೂಪಾಲಾ (ರಾಜ್ಕೋಟ್), ಪ್ರಲ್ಹಾದ್ ಜೋಶಿ (ಧಾರವಾಡ) ಮತ್ತು ಎಸ್ಪಿ ಸಿಂಗ್ ಬಘೇಲ್ (ಆಗ್ರಾ) ಪ್ರಮುಖರು.
೮೩.೯ ಮಿಲಿಯನ್ ಮಹಿಳೆಯರು ಸೇರಿದಂತೆ ೧೭೨.೪ ಮಿಲಿಯನ್ ಜನರು ಮತ ಚಲಾಯಿಸಲು ರ್ಹರಾಗಿದ್ದಾರೆ ಮತ್ತು ೧.೮೫ ಮಿಲಿಯನ್ ಅಧಿಕಾರಿಗಳು ನರ್ವಹಿಸುವ ೧೮೫,೦೦೦ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.