ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ದೇವದಾಸ್ ಅವರಿಗೆ ಎಐಡಿಎಸ್ಓ ವತಿಯಿಂದ ವಿದ್ಯಾರ್ಥಿಗಳ ಬೇಡಿಕೆಯ ಪ್ರಣಾಳಿಕೆ ಸಲ್ಲಿಕೆ

ಬಳ್ಳಾರಿ: ದುಡಿಯುವ ಜನರ ಹೋರಾಟದ ಧ್ವನಿಯಾಗಿರುವ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ದೇವದಾಸ್ ಅವರಿಗೆ ಎಐಡಿಎಸ್ಓ ವತಿಯಿಂದ ವಿದ್ಯಾರ್ಥಿಗಳ ಬೇಡಿಕೆಯ ಪ್ರಣಾಳಿಕೆಯನ್ನು ಸಲ್ಲಿಸಲಾಯಿತು.

ಸ್ವಾತಂತ್ರ್ಯ ಬಂದು 76ವರ್ಷಗಳು ಕಳೆದರೂ, ಎಲ್ಲಾ ಪಕ್ಷಗಳು ಅಧಿಕಾರದ ಚುಕ್ಕಾಣಿ ಹಿಡಿದರೂ ಕೂಡ ವಿದ್ಯಾರ್ಥಿಗಳ ಸಮಸ್ಯೆಗಳು ಕೊನೆಗಾಣುತ್ತಿಲ್ಲ. ಎಲ್ಲಾ ಪಕ್ಷಗಳು ಕೂಡ ಶಿಕ್ಷಣವನ್ನು ಖಾಸಗೀಕರಣ ಮಾಡಿ ಬಡವರಿಗೆ ಶಿಕ್ಷಣ ಇಲ್ಲ ಅನ್ನುವಂತೆ ಆಗಿದೆ. ಆದ್ದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಕೇಂದ್ರ ಬಜೆಟ್ ನಲ್ಲಿ 10% ಮತ್ತು ರಾಜ್ಯ ಬಜೆಟ್ 30%ರಷ್ಟು ಮೀಸಲಿಡಬೇಕು, ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ದೊರೆಯಬೇಕು.  ವಿದ್ಯಾರ್ಥಿ ವೇತನ ಸರಿಯಾದ ಸಮಯಕ್ಕೆ ನೀಡಬೇಕು ಮತ್ತು ಮುಖ್ಯವಾಗಿ ಬಡವರಿಂದ ಶಿಕ್ಷಣ ಕಸಿದುಕೊಳ್ಳುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್.ಇ.ಪಿ-2020) ಅನ್ನು ಹಿಂಪಡೆಯಬೇಕು ಎಂದು ಎಐಡಿಎಸ್ಓ ರಾಜ್ಯ ಸೆಕ್ರೆಟರಿಯೇಟ್ ಸದಸ್ಯರು ರವಿಕಿರಣ್.ಜೆ.ಪಿ ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು.

 

ಈ ಸಂದರ್ಭದಲ್ಲಿ ಎಐಡಿಎಸ್ಓ ಉಪಾಧ್ಯಕ್ಷರು ಉಮಾ, ಖಜಾಂಚಿ ಅನುಪಮಾ, ಕಛೇರಿ ಕಾರ್ಯದರ್ಶಿ ನಿಹಾರಿಕ ಮತ್ತು ಸದಸ್ಯರಾದ ಇಂದ್ರ, ನಾಗಲಿಂಗ, ರಾಮಾಂಜಿನಿ, ಮಹೇಶ್, ಯೇಸುದಾಸ್ ಇತರರು ಭಾಗವಹಿಸಿದ್ದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top