ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿ, ತರಗತಿಗಳು ನಡೆಯವಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳ ಬೃಹತ್ ಹೋರಾಟ

ಬಳ್ಳಾರಿ; AIDSO ಜಿಲ್ಲಾ ಸಮಿತಿಯಿಂದ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಿ ವಿದ್ಯಾರ್ಥಿಗಳಿಗೆ ಎಲ್ಲಾ ತರಗತಿಗಳನ್ನು ತೆಗೆದುಕೊಳ್ಳುವಂತೆ ಕ್ರಮ ಕೈಗೊಳ್ಳಬೇಕೆಂದು ನೂರಾರು ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ಮಾಡಲಾಯಿತು. ನಂತರ ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್‌ಓ ಜಿಲ್ಲಾ ಅಧ್ಯಕ್ಷರಾದ ಗುರಳ್ಳಿ ರಾಜ ಅವರು ಮಾತನಾಡುತ್ತಾ.., “ಅತಿಥಿ ಉಪನ್ಯಾಸಕರ ಬೇಡಿಕೆಗಳು ನ್ಯಾಯ ಸಮ್ಮತವಾಗಿದ್ದು ಅವುಗಳನ್ನು ಕೂಡಲೇ ಈಡೇರಿಸಬೇಕು. ಯಾವುದೇ ಪೂರ್ವ ತಯಾರಿಯಿಲ್ಲದೆ ಎನ್‌ಈಪಿ-2020(ರಾಷ್ಟಿಯ ಶಿಕ್ಷಣ ನೀತಿ-2020) ಹಠಾತ್ ಹೇರಿಕೆಯಿಂದ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಲ್ಲಿ ನೂರೆಂಟು ಗೊಂದಲಗಳು ಸೃಷ್ಟಿಯಾಗಿದ್ದು, ವಿದ್ಯಾರ್ಥಿಗಳಿಗೆ ಹಲವಾರು ವಿಷಯಗಳ ಬಗ್ಗೆ ಸ್ಪಷ್ಟವಾದ ಮಾಹಿತಿ ದೊರೆತಿಲ್ಲ. ಪದವಿ ಪ್ರಥಮ ಸೆಮಿಸ್ಟರ್‌ನ ಕೆಲವು ವಿಷಯಗಳಿಗೆ ಪಠ್ಯ ಪುಸ್ತಕ ದೊರೆತಿಲ್ಲ, ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಯಾವ ಮಾದರಿಯಲ್ಲಿರುತ್ತವೆ ಎನ್ನುವ ಪ್ರಶ್ನೆಗಳಿಗೆ ಉತ್ತರ ಸಿಗುತ್ತಿಲ್ಲ. ಅದರ ಮದ್ಯದಲ್ಲಿ ಹತ್ತು ದಿನಗಳಿಂದ ತರಗತಿಗಳು ನಡೆಯದಿರುವುದರಿಂದ ಜ್ಞಾನಾರ್ಜನೆಗೆ ಧಕ್ಕೆಯಾಗಿದ್ದು ಪರೀಕ್ಷೆಗಳನ್ನು ಎದುರಿಸುದು ಹೇಗೆ? ಎಂಬ ಆತಂಕ ಸೃಷ್ಟಿಯಾಗಿದೆ” ಎಂದು ತಿಳಿಸಿದರು.

ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿಗಳಾದ ರವಿಕಿರಣ್.ಜೆ.ಪಿ ಅವರು ಮಾತನಾಡುತ್ತಾ ರಾಜ್ಯದಲ್ಲಿ 14,000 ಅತಿಥಿ ಉಪನ್ಯಾಸಕರು 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಳೆದ 15-20 ವರ್ಷಗಳಿಂದ ಕಾರ್ಯನಿರ್ವಾಹಿಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಅವರಿಗೆ ಯಾವುದೇ ತರದ ಉದ್ಯೋಗ ಭದ್ರತೆ ಒದಗಿಸದೇ ಅತ್ಯಂತ ಕಡಿಮೆ ಸಂಬಳ ನೀಡುತ್ತಿದೆ. ಸರ್ಕಾರ ನೀಡುವ ಸಂಬಳದಿಂದ ದುಬಾರಿ ಬೆಲೆ ಏರಿಕೆಯ ಈ ದಿನಗಳಲ್ಲಿ ಜೀವನ ನಡೆಸುವುದು ಕಷ್ಟವಾಗಿದೆ. ಆದ್ದರಿಂದ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಈ ಕೂಡಲೇ ಈಡೆರಿಸಿ ತರಗತಿಗಳು ನಡೆಯವಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ AIDSO ಜಿಲ್ಲಾ ಉಪಾಧ್ಯಕ್ಷೆ ಜೆ.ಸೌಮ್ಯ, ಜಿಲ್ಲಾ ಸೆಕ್ರೇಟರಿಯೇಟ್ ಸದಸ್ಯರಾದ ಕೆ.ಈರಣ್ಣ, ಎಮ್.ಶಾಂತಿ, ಕಂಬಳಿ ಮಂಜುನಾಥ, ನಿಂಗರಾಜ್, ಅನುಪಮಾ, ಸಿದ್ದು, ನಿಹಾರಿಕ ಮತ್ತು ಸದಸ್ಯರಾದ ಉಮಾದೇವಿ, ಪ್ರಮೋದ್, ನಾಗರತ್ನ, ಮೋಹನ್, ವಿದ್ಯಾರ್ಥಿಗಳಾದ ತಿಪ್ಪೆರುದ್ರ, ಶ್ವೇತಾ, ಸುನಿಲ್, ಸತೀಶ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Comment

Your email address will not be published. Required fields are marked *

Translate »
Scroll to Top