ಬಾಸ್ಕೆಟ್ ಬಾಲ್ ಪಂದ್ಯ ವೀಕ್ಷಿಸಿ ಕ್ರೀಡಾಪಟುಗಳ ಉತ್ಸಾಹ ಹೆಚ್ಚಿಸಿದ ಸಚಿವ ಬಿ. ನಾಗೇಂದ್ರ

ಬೆಂಗಳೂರು:  ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ನಡೆದ ಐ. ಎನ್.ಬಿ.ಎಲ್ 3*3 ಸೀಸನ್ -2 ಬಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ ಕಾರ್ಯಕ್ರಮವನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಚಾಲನೆ ನೀಡಿ, ಕರ್ನಾಟಕ ಮತ್ತು ಕೊಚ್ಚಿನ್ ನಡುವೆ ನಡೆದ ರಾಷ್ಟ್ರೀಯ ಮಟ್ಟದ ಪಂದ್ಯವಳಿಯನ್ನು ವೀಕ್ಷಣೆ ಮಾಡಿ ಕ್ರೀಡಾಪಟುಗಳ ಉತ್ಸಾಹ ಹೆಚ್ಚಿಸಿದರು.

ಈ ಸಂದರ್ಭದಲ್ಲಿ ಎಂ.ಎಲ್.ಸಿ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಡಾ.ಕೆ.ಗೋವಿಂದರಾಜು ರವರು, ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ರವರು, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಅಪರ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ರವರು, ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಬಿ. ದಯಾನಂದ ರವರು ಹಾಗೂ ಐಎನ್ ಬಿ ಎಲ್ & ಹೆಚ್ ಎ ಐ ಮುಖ್ಯಸ್ಥರಾದ ಪ್ರವೀಣ್ ಬತೀಶ್ ಉಪಸ್ಥಿತರಿದ್ದರು.

Facebook
Twitter
LinkedIn
WhatsApp
Telegram
Email

Leave a Comment

Your email address will not be published. Required fields are marked *

Translate »
Scroll to Top