ಶಾಸಕ ನಾರಾ ಭರತ್ ರೆಡ್ಡಿ ಜನ್ಮ ದಿನಾಚರಣೆಗೆ ಭರದ ಸಿದ್ಧತೆ

ಬಳ್ಳಾರಿ: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ಜನ್ಮ ದಿನಾಚರಣೆಯನ್ನು ಅತ್ಯಂತ ಅದ್ಧೂರಿಯಿಂದ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಶಾಸಕ ನಾರಾ ಭರತ್ ರೆಡ್ಡಿ ಅವರ ಅಭಿಮಾನಿ ಬಳಗ ಹಾಗೂ ಎನ್‍ಬಿಆರ್ ಟೀಮ್‍ನ ಸದಸ್ಯರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ನಗರದ ಮೂರು ಕಡೆಗಳಲ್ಲಿ ಭೋಜನಕೂಟವನ್ನು ಏರ್ಪಡಿಸಿದ್ದು, ಅಂದಾಜು 30 ಸಾವಿರ ಜನರಿಗೆ ಆಹಾರದ ವ್ಯವಸ್ಥೆ ಮಾಡಲು ತಯಾರಿ ನಡೆಸಲಾಗಿದೆ.

 

ಬಳ್ಳಾರಿ ಜಿಲ್ಲೆಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿ ಶಾಸಕರಾಗಿ ಆಯ್ಕೆಯಾದ, ಟಚ್ ಫಾರ್ ಲೈಫ್ ಫೌಂಡೇಶನ್ ಸ್ಥಾಪಿಸಿ ಸಾವಿರಾರು ಜನರಿಗೆ ನೆರವು ನೀಡಿದ, ಜಿಲ್ಲಾ ಪಂಚಾಯಿತಿಯ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿ, ಪ್ರತಿ ದಿನ ಜನರ ಸೇವೆಗೆ ಕಂಕಣ ಬದ್ಧರಾಗಿ ತಮ್ಮ ಸೇವೆ ಮಾಡುತ್ತಿರುವ ನಮ್ಮ ನಿಮ್ಮೆಲ್ಲರ ನೆಚ್ಚಿನ ಯುವ ನಾಯಕರು, ಜನಪರ ಶಾಸಕ ನಾರಾ ಭರತ್ ರೆಡ್ಡಿಯವರ ಜನ್ಮ ದಿನಾಚರಣೆಯನ್ನು ಸಂತಸ ಸಡಗರದಿಂದ ಆಚರಿಸಲು ನಾವೆಲ್ಲ ಸಜ್ಜಾಗಿದ್ದೇವೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಇದೇ ತಿಂಗಳು ಅಕ್ಟೋಬರ್ 25ರಂದು ನಗರದ ವಿವಿಧೆಡೆ ಪ್ರೀತಿಯ ಭೋಜನೂಕಟವನ್ನು ಆಯೋಜಿಸಲಾಗಿರುತ್ತದೆ. ಅಂದು ಸಾರ್ವಜನಿಕರು ಈ ಭೋಜನಕೂಟದಲ್ಲಿ ಭಾಗವಹಿಸಿ, ಶಾಸಕ ನಾರಾ ಭರತ್ ರೆಡ್ಡಿ ಅವರಿಗೆ ಹರಸಿ, ಹಾರೈಸಿ, ಶುಭ ಕೋರಿ, ಆಶೀರ್ವದಿಸಬೇಕೆಂದು ಸಂಘಟಕರು ಕೋರಿದ್ದಾರೆ.

 

ಶಾಸಕರ ಪರವಾಗಿ ಆಯೋಜಿಸಲಾಗಿರುವ ಈ ಭೋಜನ ಕೂಟ ಹಾಗೂ ಸನ್ಮಾನ ಕಾರ್ಯಕ್ರಮಗಳು ಮೂರು ಕಡೆ ನಡೆಯಲಿದ್ದು, ಜನರಿಗೆ ತಮಗೆ ಅನುಕೂಲ ಆಗುವ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕ್ರಮ ಯಶಸಸ್ವಿಗೊಳಿಸಬೇಕೆಂದು ಕೋರಲಾಗಿದೆ. 

ಅ.25ರಂದು ಬೆಳಿಗ್ಗೆ 11 ಗಂಟೆಗೆ ನಗರದ ಎಪಿಎಂಸಿಯ ಗಣೇಶ ಗುಡಿಯ ಬಳಿ ಹಾಗೂ ಶ್ರೀರಾಂಪುರ ಕಾಲೋನಿಯ ಸರ್ಕಾರಿ ಶಾಲೆಯ ಬಳಿ ಭೋಜನಕೂಟ ಏರ್ಪಡಿಸಲು ತೀರ್ಮಾನಿಸಲಾಗಿದೆ. ಅದೇ ರೀತಿ ಸಂಜೆ 5 ಗಂಟೆಯ ನಂತರ ಬಳ್ಳಾರಿ ನಗರದ ತಾಳೂರು ರಸ್ತೆಯ ನಾಗಪ್ಪನ ಕಟ್ಟೆಯ ಬಳಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಸಂಘಟಕರು ಪ್ರಕಟಣೆ ಮೂಲಕ ತಿಳಿಸಿದ್ದಾರೆ. 

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top