LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Entertainment News

ರಾಜಮೌಳಿನಿರ್ದೇಶನದ ಸಿನಿಮಾ ರಿಜೆಕ್ಟ್ ಮಾಡಿದ ನಟ ವಿಕ್ರಂ : ಎಸ್‌ಎಸ್‌ಎಂಬಿ29 !

ರಾಜಮೌಳಿನಿರ್ದೇಶನದ ಸಿನಿಮಾ ರಿಜೆಕ್ಟ್ ಮಾಡಿದ ನಟ ವಿಕ್ರಂ : ಎಸ್‌ಎಸ್‌ಎಂಬಿ29 !

ಎಸ್‌ಎಸ್ ರಾಜಮೌಳಿ ಹಾಗೂ ಮಹೇಶ್‌ಬಾಬು ಕಾಂಬಿನೇಷನ್‌ನ ಎಸ್‌ಎಸ್‌ಎಂಬಿ29 ಸಿನಿಮಾದ ಪ್ರೀ ಪ್ರೊಡಕ್ಷನ್ ಕೆಲಸವು ಭರ್ಜರಿಯಾಗಿ ಸಾಗಿವೆ. ಸಿನಿಮಾಗೆ ಪಾತ್ರಗಳ ಆಯ್ಕೆ ಕೂಡಾ ಅಷ್ಟೇ ಬಿರುಸಿನಿಂದ ಸಾಗಿದೆ. ಮಹೇಶ್ ಬಾಬು ಅವರ ತಂದೆ ಪಾತ್ರಕ್ಕಾಗಿ ಚಿತ್ರತಂಡ ತಮಿಳು ನಟ ಚಿಯಾನ್ ವಿಕ್ರಂ ಅವರನ್ನ ಆಯ್ಕೆ ಮಾಡಿಕೊಂಡಿತ್ತು. ಈ ಸಿನಿಮಾದಲ್ಲಿ ನಟಿಸುವಂತೆ ಚಿಯಾನ್ ವಿಕ್ರಂ ಅವರನ್ನು ಕೇಳಿದಾಗ ಅವರು ನಟಿಸುವುದಿಲ್ಲ ಎಂದು ಹೇಳಿದ್ದಾರಂತೆ.

ತಮಿಳು ನಟ ಚಿಯಾನ್ ವಿಕ್ರಂ ಯಾಕೆ ನಟಿಸುವುದಿಲ್ಲ ಅನ್ನೋದಕ್ಕೆ ಕಾರಣ ಕೂಡಾ ಇದೆ. ಹೌದು, ವೀರ ಧೀರ ಸೂರನ್ ಸಿನಿಮಾದ ನಟ ವಿಕ್ರಂ ಎರಡು ಸಿನಿಮಾಗಳ ನಟನೆಯಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ರಾಜಮೌಳಿ ಸಿನಿಮಾದಲ್ಲಿ ನಟಿಸಲು ಡೇಟ್ ಕ್ಲ್ಯಾಶ್ ಆಗುವ ಕಾರಣದಿಂದ ಮಹೇಶ್ ಬಾಬು ತಂದೆ ಪಾತ್ರದಲ್ಲಿ ನಟಿಸೋಕೆ ಸಾಧ್ಯವಾಗುವುದಿಲ್ಲ ಎಂದು ನಟ ವಿಕ್ರಂ ಹೇಳಿದ್ದಾರಂತೆ. ಹೀಗಾಗಿ ಚಿತ್ರತಂಡ ಮಾಧವನ್ ಅವರನ್ನ ಸೂಪರ್ ಸ್ಟಾರ್ ತಂದೆ ಪಾತ್ರದಲ್ಲಿ ನಟಿಸುವಂತೆ ಅಪ್ರೋಚ್ ಮಾಡಿದೆ ಎನ್ನಲಾಗ್ತಿದೆ.       Chiyaan Vikram to join SS Rajamouli, Mahesh Babu? Thangalaan actor shares  update - India Today

ಇನ್ನು ಎಸ್‌ಎಸ್‌ಎಂಬಿ29 ಹೆಸರಿನ ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಆರ್‌ಆರ್‌ಆರ್ ಸಿನಿಮಾ ಬಳಿಕ ನಿರ್ದೇಶಕ ರಾಜಮೌಳಿ ಕೈಗೆತ್ತಿಕೊಂಡಿರುವ ಸಿನಿಮಾ ಇದಾಗಿದೆ. ಹೀಗಾಗಿ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆಗಳಿವೆ.ಜೊತೆಗೆ ರಾಜಮೌಳಿ ಹಾಗೂ ಮಹೇಶ್ ಬಾಬು ಕಾಂಬಿನೇಷನ್ ಮೊದಲ ಬಾರಿಗೆ ಒಂದಾಗ್ತಿದೆ. ಇನ್ನು ಈ ಸಿನಿಮಾದಲ್ಲಿ ಮಹೇಶ್ ಬಾಬು ಜೊತೆಗೆ ಪ್ರಿಯಾಂಕ ಚೋಪ್ರಾ ಮುಖ್ಯ ಪಾತ್ರದಲ್ಲಿ ನಟಿಸಲಿದ್ದು, ಈ ಭಾಗದ ಕೆಲ ಸಾಹಸ ದೃಶ್ಯಗಳನ್ನ ಕೀನ್ಯಾದಲ್ಲಿ ಶೂಟಿಂಗ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆಯಂತೆ.

ಅಂದಹಾಗೆ ಚಿಯಾನ್ ವಿಕ್ರಂ ರಿಜೆಕ್ಟ್ ಮಾಡಿದ ನಂತರ ಆರ್.ಮಾಧವನ್ ಅವರನ್ನ ಈ ಪಾತ್ರಕ್ಕಾಗಿ ನಿರ್ದೇಶಕರು ಆಯ್ಕೆ ಮಾಡಿಕೊಂಡಿದ್ದಾರಂತೆ. ಇನ್ನು ಚಿತ್ರತಂಡ ಈ ಬಗ್ಗೆ ಅಧಿಕೃತವಾಗಿ ಹೇಳಿಕೊಂಡಿಲ್ಲ. ಈ ಬಗ್ಗೆ ನಿರ್ದೇಶಕರಾಗಲಿ ಅಥವಾ ಚಿತ್ರತಂಡವಾಗಲಿ ಅಧಿಕೃತವಾಗಿ ಮಾಹಿತಿ ನೀಡಬೇಕಿದೆ. ಮಾಧವನ್ ಇಂತಹ ಪಾತ್ರಗಳಿಗೆ ನ್ಯಾಯ ಒದಗಿಸುತ್ತಾರೆ ಎನ್ನುವ ನಿರ್ಧಾರ ನಿರ್ದೇಶಕರದ್ದಾಗಿದೆ. ಈ ಸಿನಿಮಾ ಬಗ್ಗೆ ಮತ್ತಷ್ಟು ಮಾಹಿತಿಯನ್ನ ಚಿತ್ರತಂಡವೇ ಹೇಳಬೇಕಿದೆ.

 

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ