LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Entertainment News

ರೇಣುಕಾಸ್ವಾಮಿ ಕುಟುಂಬಸ್ಥರ ಪರ ನಿಂತ ನಟಿ ರಮ್ಯಾ !

ರೇಣುಕಾಸ್ವಾಮಿ ಕುಟುಂಬಸ್ಥರ ಪರ ನಿಂತ ನಟಿ ರಮ್ಯಾ!

ಸದ್ಯ ಸುಪ್ರೀಂ ಕೋರ್ಟ್‌ನಲ್ಲಿರುವ ನಟ ದರ್ಶನ್‌ ಜಾಮೀನು ಕೇಸ್‌ಗೆ ಸಂಬಂಧಿಸಿದಂತೆ ನಟಿ ರಮ್ಯಾ (Actress Ramya) ಅವರು ಹೇಳಿಕೆ ಒಂದನ್ನು ನೀಡಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿಯೊಂದನ್ನು ಹಂಚಿಕೊಂಡಿರುವ ನಟಿ, ಎಲ್ಲಾ ಡಿಬಾಸ್ ಅಭಿಮಾನಿಗಳಿಗೆ ನನ್ನ ಇನ್ ಸ್ಟಾಗ್ರಾಂಗೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ

Ramya vs Darshan fans ದರ್ಶನ್ ಅಭಿಮಾನಿಗಳಿಗೆ ಖಡಕ್ ವಾರ್ನಿಂಗ್..!

 

ಬೆಂಗಳೂರು: ಸದ್ಯ ಸುಪ್ರೀಂ ಕೋರ್ಟ್‌ನಲ್ಲಿರುವ ನಟ ದರ್ಶನ್‌ ಜಾಮೀನು ಕೇಸ್‌ಗೆ ಸಂಬಂಧಿಸಿದಂತೆ ನಟಿ ರಮ್ಯಾ (Actress Ramya) ಅವರು ಹೇಳಿಕೆ ಒಂದನ್ನು ನೀಡಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿಯೊಂದನ್ನು ಹಂಚಿಕೊಂಡಿರುವ ನಟಿ, ಎಲ್ಲಾ ಡಿಬಾಸ್ ಅಭಿಮಾನಿಗಳಿಗೆ ನನ್ನ ಇನ್ ಸ್ಟಾಗ್ರಾಂಗೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ. ರೇಣುಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಸಿದಂತೆ ಮಾತನಾಡಿ, ಆತನ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣʼ ಎಂದು ತಮ್ಮ ಇನ್‌ಸ್ಟಾ ಸ್ಟೇಟಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದರು. ನಟಿ ರಮ್ಯಾ ಪೋಸ್ಟ್ ವೈರಲ್ ಆಗ್ತಿದ್ದಂತೆ ದರ್ಶನ್ ಅಭಿಮಾನಿಗಳು ಕೆಟ್ಟ ಪದಗಳಿಂದ ರಮ್ಯಾ ವಿರುದ್ದ ಸೋಶಿಯಲ್ ಮಿಡಿಯಾದಲ್ಲಿ ನಿಂದಿಸಿದ್ದರು.

ಪೋಸ್ಟ್‌ನಲ್ಲೇನಿದೆ?

ʻಕೇಸ್‌ ಯಾವುದೇ ಇರಲಿ, ಯಾರದ್ದೇ ಇರಲಿ, ಸದಾ ನ್ಯಾಯದ ಪರ, ʻತೆರೆಯಮೇಲಷ್ಟೇ ಅಲ್ಲ ನಿಜ ಜೀವನದಲ್ಲೂ ರಮ್ಯಾ ಹಿರೋಯಿನ್‌ ಎಂದು ಬರೆಯಲಾಗಿದೆ. ನಂತರ ಮೊತ್ತೊಂದು ಪೋಸ್ಟ್‌ನಲ್ಲಿ ನಟಿ ಡಿ ಬಾಸ್‌ ಫ್ಯಾನ್ಸ್‌ಗಳಿಗೆ ಓಪನ್‌ ಚಾಲೆಂಜ್‌ ಹಾಕಿದ್ದಾರೆ. ಎಲ್ಲಾ ಡಿಬಾಸ್ ಅಭಿಮಾನಿಗಳಿಗೆ ನನ್ನ ಇನ್ ಸ್ಟಾಗ್ರಾಂಗೆ ಸ್ವಾಗತ… ರೇಣುಕಾಸ್ವಾಮಿ ಅವರ ಕುಟುಂಬಕ್ಕೆ ಯಾಕೆ ನ್ಯಾಯ ಸಿಗಬೇಕು ಅನ್ನೋದಕ್ಕೇ ನಿಮ್ಮ ಕಾಮೆಂಟ್ಸ್‌ಗಳೇ ಸಾಕ್ಷಿʼಎಂದು ಬರೆದಿದ್ದಾರೆ.

ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್, ಪವಿತ್ರಾಗೌಡ ಸೇರಿ 17 ಆರೋಪಿಗಳು ಬಂಧನವಾಗಿದ್ದರು. ಜೈಲುವಾಸದ ನಂತರ ಎಲ್ಲಾ ಆರೋಪಿಗಳು ಜಾಮೀನು ಪಡೆದು ಆಚೆ ಬಂದಿದ್ದರು. ಇದೀಗ ದರ್ಶನ್‌ಗೆ ರಾಜ್ಯ ಹೈಕೋರ್ಟ್‌ ನೀಡಿ‌ದ್ದ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಗಿದಿದೆ. ಹೈಕೋರ್ಟ್‌ ರೀತಿ ತರಾತುರಿಯಲ್ಲಿ ಆದೇಶ ನೀಡುವುದಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್‌ ಒಂದು ವಾರದಲ್ಲಿ ಆದೇಶ ಪ್ರಕಟಿಸುವುದಾಗಿ ಹೇಳಿದೆ. ಒಂದೂವರೆ ಗಂಟೆಗಳ ಕಾಲ ವಾದ-ಪ್ರತಿವಾದ ಆಲಿಸಿ ಕಡೆಯಲ್ಲಿ ಇತರೇ ಆರೋಪಿಗಳ ಪರ ವಕೀಲರ ಮಾಹಿತಿ ಕೇಳಿದೆ. ಎಲ್ಲ ಆರೋಪಿಗಳ ಪರ ವಕೀಲರು ಲಿಖಿತ ವಾದ ಮಂಡಿಸಬಹುದು. ಒಂದು ವಾರದಲ್ಲಿ ಮೂರು ಪುಟಗಳ ಮಾಹಿತಿ ನೀಡಬೇಕು. ಬಳಿಕ ಆದೇಶ ನೀಡುವುದಾಗಿ ಕೋರ್ಟ್‌ ಹೇಳಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ