LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ : ಆರ್. ಅಶೋಕ

ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ? ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ. ಪ್ರಿಯಾಂಕ್ ಖರ್ಗೆ ಕಲಬುರ್ಗಿ ನಿಜಾಮನೂ ಅಲ್ಲ, ಅವರ ಅನುಯಾಯಿಗಳು ರಜಾಕಾರರೂ ಅಲ್ಲ. ಗುತ್ತಿಗೆದಾರ ಸಚಿನ್ ಸಾವಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಆಪ್ತರ ಪಾತ್ರವಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಅವರು ಕೂಡಲೇ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.

ಈ ಹಿಂದೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಾಗ, ಸಚಿವ ಈಶ್ವರಪ್ಪನವರ ರಾಜೀನಾಮೆ ಕೇಳಲಾಗಿತ್ತು. ಈಗ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ. ಸಚಿನ್ ಪಾಂಚಾಳ ಅವರು ಡೆತ್ನೋಟ್ನಲ್ಲಿ ರಾಜು ಕಪನೂರು ಹೆಸರು ಬರೆದಿಟ್ಟು, ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಂಚನೆ ಹಾಗೂ ಹಣಕ್ಕಾಗಿ ಕೊಲೆ ಬೆದರಿಕೆ ಆರೋಪ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಚಿನ್ ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಇದನ್ನು ಗಮನಿಸಿದ ಕುಟುಂಬಸ್ಥರು ಆತಂಕಗೊಂಡು, ಕೂಡಲೇ ಹುಡುಕಿ‌ ಕೊಡುವಂತೆ ಬೀದರ್ ನ ಗಾಂಧಿಗಂಜ್ ಪೊಲೀಸ್ ಠಾಣೆಗೆ ಮನವಿ ಮಾಡಿದ್ದರು. ಆದರೆ ದೂರು ದಾಖಲಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು 15 ಲಕ್ಷಕ್ಕೂ ಅಧಿಕ ಹಣ ತೆಗೆದುಕೊಂಡು ಟೆಂಡರ್‌ ನೀಡದೆ ವಂಚನೆ ಮಾಡಿದ್ದು, ಮಾತ್ರವಲ್ಲದೆ 1 ಕೋಟಿ ಹಣ ನೀಡುವಂತೆ ಒತ್ತಡ, ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಡೆತ್ನೋಟ್ನಲ್ಲಿ ಉಲ್ಲೇಖವಾಗಿದೆ. ಡೆತ್ ನೋಟ್ನಲ್ಲಿ ಕಲಬುರಗಿಯ ಮಾಜಿ ಕಾರ್ಪೊರೇಟ್ ರವಿ ಕಪನೂರು, ನಂದಕುಮಾರ್ ನಾಗಭುಜಂಗೆ, ಗೋರಖನಾಥ್ ಸೇರಿ 6 ಜನರ ವಿರುದ್ಧ ಜೀವ ಬೆದರಿಕೆ ಆರೋಪ ಮಾಡಲಾಗಿದೆ. ಇಂತಹ ಗೂಂಡಾಗಳನ್ನು ಆಪ್ತರಾಗಿ ಇಟ್ಟುಕೊಂಡ ಸಚಿವರು ಕೂಡ ಇಲ್ಲಿ ಹೊಣೆಗಾರರು ಎಂದು ಅವರು ಹೇಳಿದ್ದಾರೆ.

ರಾಜು ಕಪನೂರ್, ಖರ್ಗೆ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾನೆ. ಕಲಬುರಗಿ ಮಹಾನಗರ ಪಾಲಿಕೆ ಸದಸ್ಯನೂ ಆಗಿದ್ದ ರಾಜು ಕಪನೂರ್, ಈ ಹಿಂದೆ ಅಕ್ರಮ ಪಿಸ್ತೂಲ್ ಹೊಂದಿರುವ ಆರೋಪದಲ್ಲಿ ಬಂಧಿತನಾಗಿದ್ದ. ಇವೆಲ್ಲ ಗೊತ್ತಿದ್ದರೂ ಸಚಿವ ಪ್ರಿಯಾಂಕ್ ಖರ್ಗೆ ಆಪ್ತರಿಂದ ದೂರವಾಗಿಲ್ಲ. ಇಂತಹ ಗೂಂಡಾ, ಸಚಿವರ ಆಪ್ತ ಎಂದರೆ ನಮ್ಮ ರಾಜ್ಯದಲ್ಲಿ ಗೂಂಡಾಗಳ, ರೌಡಿಗಳ ಸರ್ಕಾರ ನಡೆಯುತ್ತಿದೆ ಎಂದರ್ಥ ಎಂದು ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ