LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Education News

ಬೆಂಗಳೂರು ವಿವಿ – ಐಸಿಎಸ್ಐ ಬೆಂಗಳೂರು ಚಾಪ್ಟರ್ ನಡುವೆ ಶೈಕ್ಷಣಿಕ ಚಟುವಟಿಕೆಗಾಗಿ ಒಪ್ಪಂದ: ಸಿ.ಎಸ್. ಧನಂಜಯ್ ಶುಕ್ಲಾ

ಬೆಂಗಳೂರು: ಕೇಂದ್ರ ಸಾಂಸ್ಥಿಕ ವ್ಯವಹಾರಗಳ ವ್ಯಾಪ್ತಿಗೆ ಒಳಪಡುವ ಕಂಪೆನಿ ಸೆಕ್ರೇಟರೀಸ್ ಆಫ್ ಇಂಡಿಯಾ – ಬೆಂಗಳೂರು ಚಾಪ್ಟರ್ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ನಡುವೆ ಶಿಕ್ಷಣದಲ್ಲಿ ಸಹಭಾಗಿತ್ವ ಹೊಂದಲು ಒಪ್ಪಂದ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲೇ ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಹಕಾರ ಪ್ರಾರಂಭವಾಗಲಿವೆ ಎಂದು ಐಸಿಎಸ್ಐ ನೂತನ ರಾಷ್ಟ್ರೀಯ ಅಧ್ಯಕ್ಷ ಸಿ.ಎಸ್. ಧನಂಜಯ್ ಶುಕ್ಲಾ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷದ ಅಕ್ಟೋಬರ್ ನಲ್ಲಿ ಬೆಂಗಳೂರು ವಿವಿ ಜೊತೆ ಒಪ್ಪಂದಕ್ಕೆ ಸಹಿ ಮಾಡಲಾಗಿದೆ. ಇಂದು ಕುಲಸಚಿವರಾದ ಶೇಕ್ ಲತೀಫ್, ವಿವಿ ಡೀನ್ ಗಳ ಜೊತೆ ಶೈಕ್ಷಣಿಕವಾಗಿ ಪರಸ್ಪರ ಸಹಕಾರ, ಪಠ್ಯವನ್ನು ಮೇಲ್ದರ್ಜೆಗೇರಿಸುವ, ಕೈಗಾರಿಕಾ ಪಾಲುದಾರಿಕೆ ಹೊಂದುವ ಕುರಿತಂತೆ ವಿಸ್ತೃತ ಫಲಪ್ರದ ಮಾತುಕತೆ ನಡೆಸಲಾಗಿದೆ. ಇದರಿಂದ ಬೆಂಗಳೂರು ವಿವಿ ವ್ಯಾಪ್ತಿಯ 298 ಕಾಲೇಜುಗಳು ಮತ್ತು ಐಸಿಎಸ್ಐಗೆ ಅನುಕೂಲವಾಗಲಿದೆ. ಪಾಲುದಾರಿಕೆಯ ಸ್ವರೂಪದ ಬಗ್ಗೆ ಸಮಾಲೋಚಿಸಿದ್ದು, ಶೈಕ್ಷಣಿಕ ವಲಯದಲ್ಲಿ ಹೊಸ ಆಯಾಮಕ್ಕೆ ಇದೀಗ ವೇದಿಕೆ ಸಜ್ಜಾಗಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಒಟ್ಟು 12,170 ಮಂದಿ ವಿದ್ಯಾರ್ಥಿಗಳು ಕಂಪೆನಿ ಸೆಕ್ರೇಟರಿ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿದ್ದು, ಬೆಂಗಳೂರಿನ ಭಾರತೀಯ ಆಡಳಿತ ಮಂಡಳಿ – ಐಐಎಂ, ಕ್ರೈಸ್ಟ್ ವಿವಿ ಜೊತೆಯೂ ಐಸಿಎಸ್ಐ ಸಹಭಾಗಿತ್ವ ಹೊಂದಿದೆ. ಸಿಎಸ್ಆರ್ ಚಟುವಟಿಕೆಯಡಿ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿ ಹುತಾತ್ಮರಾದ ಸೈನಿಕರ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿದ್ದು, 2017 ರಿಂದ ಇದಕ್ಕಾಗಿ 41 ಲಕ್ಷ ರೂಪಾಯಿ ನಿಧಿ ಸಂಗ್ರಹಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡ ಮತ್ತು ವಿಶೇಷ ಚೇತನರಿಗೆ ಶುಲ್ಕದಲ್ಲಿ ರಿಯಾಯಿತಿ ನೀಡಲಾಗಿದೆ. ಸಿಎಸ್ ಕೋರ್ಸ್ ಗಳಿಗೆ ವ್ಯಾಪಕ ಬೇಡಿಕೆ ಇದ್ದು, ಬರುವ 2030 ರ ವೇಳೆಗೆ 30 ಸಾವಿರ ಹೆಚ್ಚುವರಿ ಹುದ್ದೆಗಳು ಸೃಜನೆಯಾಗಲಿವೆ. ವಿಜ್ಞಾನ ಒಲಿಂಪಿಯಾಡ್ ಪ್ರತಿಷ್ಠಾನದೊಂದಿಗೆ ಐಸಿಎಸ್ಐ ತಿಳಿವಳಿಕೆ ಒಪ್ಪಂದ ಮಾಡಿಕೊಂಡಿದೆ ಎಂದು ಸಿ.ಎಸ್. ಧನಂಜಯ್ ಶುಕ್ಲಾ ಹೇಳಿದರು.
ಐಸಿಎಸ್ಐ ಉಪಾಧ್ಯಕ್ಷ ಪವನ್ ಜಿ ಚಂದಕ್ ಮಾತನಾಡಿ, ಕಾರ್ಫೋರೆಟ್ ಜಗತ್ತಿಗೆ ಸಂವಹನ ಕೌಶಲ್ಯ ಅಗತ್ಯವಾಗಿದ್ದು, ಯೋಚಿಸಿ ಮಾತನಾಡುವ ಕುಶಲತೆಯನ್ನು ವೃದ್ಧಿಸಲು “ಸಮಾಜದೊಂದಿಗೆ ಚರ್ಚೆ” ಕಾರ್ಯಕ್ರಮವನ್ನು ಪರಿಚಯಿಸಲಾಗುತ್ತಿದೆ. ಸಾಮಾಜಿಕ ಆಡಳಿತ ಲೆಕ್ಕ ಪರಿಶೋಧನೆ, ಇ – ಕಲಿಕೆಯಲ್ಲಿ ಕ್ರಾಂತಿಕಾರ ಕ್ರಮಗಳನ್ನು ಅಳವಡಿಸಲಾಗುತ್ತಿದೆ ಎಂದು ಹೇಳಿದರು.

ಕೇಂದ್ರೀಯ ಮಂಡಳಿ ಸದಸ್ಯರಾದ ಸಿ. ದ್ವಾರಕಾನಾಥ್ ಮಾನತಾಡಿ, ಸಿಎಸ್ ಕೋರ್ಸ್ ಗಳನ್ನು ಪೂರ್ಣಗೊಳಿಸಿದವರು 24 ತಿಂಗಳು ಕಠಿಣ ತರಬೇತಿ ಪಡೆಯಬೇಕಾಗುತ್ತದೆ. ಇದರಿಂದ ಪ್ರಾಯೋಗಿಕವಾಗಿ ಕೆಲಸದ ಅನುಭವ ಪಡೆಯಲು ಸಹಕಾರಿಯಾಗಲಿದೆ. ತರಬೇತಿ ಪಡೆಯುವವರಿಗೆ ಗರಿಷ್ಠ 10 ಸಾವಿರ ರೂಪಾಯಿ ಶಿಷ್ಯ ವೇತನ ನೀಡಲಾಗುತ್ತದೆ ಎಂದು ಹೇಳಿದರು.
ಎಸ್ಐಆರ್ ಸಿ ಮಾಜಿ ಅಧ್ಯಕ್ಷರಾದ ಪ್ರದೀಪ್ ಬಿ ಕುಲಕರ್ಣಿ ಮಾತನಾಡಿ, ಕಂಪೆನಿ ಸೆಕ್ರೇಟರೀಸ್ ಕೋರ್ಸ್ ಗಳಿಗೆ ಅಂತಾರಾಷ್ಟ್ರೀಯ ಹಣಕಾಸು ಸೇವೆಗಳ ಪ್ರಾಧಿಕಾರ ಮತ್ತು ಸೆಬಿ ಕೂಡ ಮಾನ್ಯತೆ ನೀಡಿದ್ದು, ಕಾರ್ಪೋರೇಟ್ ವಲಯದಲ್ಲಿ ಈ ಕೋರ್ಸ್ ಗಳು ಹೊಸ ಸ್ವರೂಪ ಪಡೆದುಕೊಂಡಿವೆ. ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಬೆಂಗಳೂರಿನ ಮೂರು ಮಂದಿ ಅಗ್ರ ಶ್ರೇಯಾಂಕದಲ್ಲಿ ಉತ್ತೀರ್ಣರಾಗಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.

ಐಸಿಎಸ್ಐ ಬೆಂಗಳೂರು ಚಾಪ್ಟರ್ ಅಧ್ಯಕ್ಷರಾದ ಸಿ.ಎಸ್. ದೇವಿಕಾ ಸತ್ಯನಾರಾಯಣ್ ಮಾತನಾಡಿ, ಐಸಿಎಸ್ಐ ಜೊತೆ ಬೆಂಗಳೂರು ವಿವಿ ಒಪ್ಪಂದ ಮಾಡಿಕೊಂಡಿರುವುದರಿಂದ ಶೈಕ್ಷಣಿಕ ಚಟುವಟಿಕೆಗೆ ಜಾಗತಿಕ ಮನ್ನಣೆ ದೊರೆಯಲಿದೆ. ವಿದ್ಯಾರ್ಥಿಗಳ ಭವ್ಯ ಭವಿಷ್ಯಕ್ಕೆ ಇದು ಬುನಾದಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಐಸಿಎಸ್ಐ ಬೆಂಗಳೂರು ಚಾಪ್ಟರ್ ಕಾರ್ಯದರ್ಶಿ ಸಿಎಸ್ ಪ್ರಸನ್ನ ಬೇಡಿ ಉಪಸ್ಥಿತರಿದ್ದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ