LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಸರ್ವಸಮ್ಮತ ಅಭ್ಯರ್ಥಿಯಾದರೆ, ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದ: ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನಾನು ಸರ್ವಸಮ್ಮತ ಅಭ್ಯರ್ಥಿಯಾದರೆ, ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದ ಎಂದು ಬಿಜೆಪಿ ಖಾಯಂ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಬಣದಿಂದ ನನ್ನನ್ನೇ ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕೆಂದು ನಮ್ಮ ಪರ ಅಭ್ಯರ್ಥಿಗಳು ಒತ್ತಡ ಹಾಕಿದರೆ ನಾನು ಸ್ಪರ್ಧಿಸಲು ಸಿದ್ದನಿದ್ದೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು. ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತದೆಯೇ ಇಲ್ಲವೇ ಎಂಬುದನ್ನು ಕಾಲವೇ ತೀರ್ಮಾನಿಸುತ್ತದೆ. ಹಾಲಿ ಅಧ್ಯಕ್ಷ ವಿಜಯೇಂದ್ರ ಅವರನ್ನು ಬದಲಾವಣೆ ಮಾಡಬೇಕೆಂಬುದು ಹಲವರ ಒತ್ತಾಯವಾಗಿದೆ.

ಒಂದು ವೇಳೆ ಚುನಾವಣೆ ಉಸ್ತುವಾರಿಯಾಗಿರುವ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚವ್ಹಾಣ್ ಬಯಸಿದರೆ ನಾವು ಸ್ಪರ್ಧೆ ಮಾಡುತ್ತೇವೆ. ವಿಜಯೇಂದ್ರ ವಿರುದ್ದ ನಾವು ಖಂಡಿತವಾಗಿಯೂ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಹೇಳಿದರು.
ಹಲವರ ಬೆಂಬಲವಿದೆ ಎಂದು ವಿಜಯೇಂದ್ರ ಹೇಳಿರಬಹುದು. ಹಾಗಂದ ಮಾತ್ರಕ್ಕೆ ಚುನಾವಣೆ ನಡೆಯಲೇಬಾರದೆಂಬ ನಿಯಮವಿಲ್ಲ. ಯಾರಿಗೆ ಎಷ್ಟು ಬಹುಮತವಿದೆ ಎಂಬುದು ಚುನಾವಣೆ ನಡೆದಾಗ ಮಾತ್ರ ಗೊತ್ತಾಗುತ್ತದೆ. ಅಲ್ಲಿಯ ತನಕ ಅವರಿಗೆ ಕಾಯಲು ಹೇಳಿರಿ ಎಂದು ಸೂಚ್ಯವಾಗಿ ತಿರುಗೇಟು ನೀಡಿದರು. ಕೇವಲ ನಮ್ಮ ಬಣದಿಂದ ಮಾತ್ರ ವಿಜಯೇಂದ್ರ ಬದಲಾವಣೆಯಾಗಬೇಕೆಂಬ ಒತ್ತಡವಿಲ್ಲ. ಬಹುತೇಕ ಕಾರ್ಯಕರ್ತರ ಅಭಿಪ್ರಾಯವು ಇದೆ ಆಗಿದೆ. ಸಮಯ ಮತ್ತು ಕಾಲವು ಎಲ್ಲರ ಹಣೆಬರಹವನ್ನು ತೀರ್ಮಾನಿಸುತ್ತದೆ. ಅಲ್ಲಿಯ ತನಕ ಎಲ್ಲರೂ ಸಹನೆಯಿಂದ ವರ್ತಿಸಬೇಕೆಂದು ಮನವಿ ಮಾಡಿದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ