LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಬಳ್ಳಾರಿ ಶಾಸಕರು- ಸಂಸದರ ಮನೆ ಮೇಲೆ ಇಡಿ ದಾಳಿ : ಯಾರ ಯಾರ ಮನೆ ಮೇಲೆ ದಾಳಿ !

ಬಳ್ಳಾರಿ ಶಾಸಕರು- ಸಂಸದರ ಮನೆ ಮೇಲೆ ಇಡಿ ದಾಳಿ : ಯಾರ ಯಾರ ಮನೆ ಮೇಲೆ ದಾಳಿ !

ಬಳ್ಳಾರಿ: ವಾಲ್ಮೀಕಿ ನಿಗಮದ ಹಗರಣದ ಹಣವನ್ನು ಬಳ್ಳಾರಿ ಚುನಾವಣೆಗೆ ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪದ ಮೇಲೆ ಇ.ಡಿ ಅಧಿಕಾರಿಗಳು ಸಂಸದ ಇ.ತುಕಾರಾಮ್, ಶಾಸಕ ಭರತ್ ರೆಡ್ಡಿ ಸೇರಿದಂತೆ ಹಲವರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ( ಇ.ಡಿ)ವು ಬುಧವಾರ ಬೆಳಗ್ಗೆ ದಾಳಿ ನಡೆಸಿದೆ. ಸಂಸದ ಇ. ತುಕಾರಾಂ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಕಂಪ್ಲಿ ಶಾಸಕ ಜೆ.ಎನ್ ಗಣೇಶ್, ಶಾಸಕ ಬಿ. ನಾಗೇಂದ್ರ ಅವರ ಆಪ್ತ ಗೋವರ್ಧನ್ ರೆಡ್ಡಿ ಸೇರಿದಂತೆ ಹಲವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ಇ.ಡಿ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ. ದಾಳಿ ಸಂದರ್ಭದಲ್ಲಿ ಸಂಸದರು ಮತ್ತು ಶಾಸಕರು ತಮ್ಮ ನಿವಾಸಗಳಲ್ಲಿ ಇದ್ದರು ಎಂದು ತಿಳಿದು ಬಂದಿದೆ.

ಯಾವ ಪ್ರಕರಣದಲ್ಲಿ ಸಂಸದರು ಮತ್ತು ಶಾಸಕರ ಮನೆಗಳ ಮೇಲೆ ದಾಳಿ ನಡೆದಿದೆ ಎಂಬುದು ಖಚಿತವಾಗಿಲ್ಲ. ಆದರೆ, ನಾಗೇಂದ್ರ ಆಪ್ತ ಗೋವರ್ಧನ್ ರೆಡ್ಡಿ ಮನೆ ಮೇಲೆ ದಾಳಿ ನಡೆದಿರುವುದರಿಂದ ಇದು ವಾಲ್ಮೀಕಿ ನಿಗಮದ ಹಗರಣದ ತನಿಖೆಯ ಭಾಗವಾಗಿರಬಹುದು ಎಂದು ಹೇಳಲಾಗುತ್ತಿದೆ.

ಲೋಕಸಭಾ ಚುನಾವಣೆಯಲ್ಲಿ ಮತದಾರರಿಗೆ ಹಣ ನೀಡಲು ನಿಗಮದ ಹಣವನ್ನು ಬಳಸಲಾಗಿದೆ ಎಂಬ ಆರೋಪವಿದ್ದು, ಸುಮಾರು 20 ಕೋಟಿ ಹಣವನ್ನು ಬಳ್ಳಾರಿ ನಗರ, ಬಳ್ಳಾರಿ ಗ್ರಾಮಾಂತರ, ಸಂಡೂರು, ಕಂಪ್ಲಿ ಮತ್ತು ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಹಂಚಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ