LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಪಡೆಯಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟು

ಪ್ರಮುಖ ಅಂಶಗಳು:

ದಾವಣಗೆರೆ ದಕ್ಷಿಣಕ್ಕೆ ಸರ‍್ಥ್ ಮಲ್ಲಿಕರ‍್ಜುನ್ ಬಹುತೇಕ ಫಿಕ್ಸ್; ಮುಸ್ಲಿಂ ನಾಯಕರ ವಿರೋಧ.

ಬಾಗಲಕೋಟೆಗೆ ಎಚ್.ವೈ. ಮೇಟಿ ಪುತ್ರ ಉಮೇಶ್ ಆಯ್ಕೆ ಅಂತಿಮ.

ಸಿದ್ದರಾಮಯ್ಯ ಮತ್ತು ಸರ‍್ಜೇವಾಲಾ ಅವರಿಂದ ಅತೃಪ್ತ ನಾಯಕರ ಮನವೊಲಿಕೆ ಕಸರತ್ತು.

ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಕಣ ರಂಗೇರುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ತೀವ್ರ ಕುತೂಹಲ ಕೆರಳಿಸಿದೆ. ಕೇವಲ 'ಗೆಲುವಿನ ಮಾನದಂಡ'ವನ್ನೇ ಮುಂದಿಟ್ಟುಕೊಂಡು ಹೈಕಮಾಂಡ್ ಹೆಜ್ಜೆ ಇಡುತ್ತಿದ್ದರೆ, ಇತ್ತ ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಂ ನಾಯಕರು ಟಿಕೆಟ್‌ಗಾಗಿ ಪಟ್ಟು ಹಿಡಿದಿರುವುದು ಪಕ್ಷಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಶಾಮನೂರು ಕುಟುಂಬದ ಪರ ಬ್ಯಾಟಿಂಗ್
ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಅವರ ಮೊಮ್ಮಗ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಸಮರ್ಥ್ ಅವರ ಸ್ಪರ್ಧೆಗೆ ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಹಲವು ನಾಯಕರು ಬಹಿರಂಗ ಬೆಂಬಲ ಸೂಚಿಸಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಕೂಡ ಶಾಮನೂರು ಕುಟುಂಬದ ಪರವಾಗಿ ಬ್ಯಾಟಿಂಗ್ ಮಾಡುತ್ತಿರುವುದು ಸ್ಪಷ್ಟವಾಗಿದೆ.

ಮುಸ್ಲಿಂ ನಾಯಕರ ಬಂಡಾಯದ ಎಚ್ಚರಿಕೆ
ಸಮರ್ಥ್ ಅವರ ಉಮೇದುವಾರಿಕೆಗೆ ಮುಸ್ಲಿಂ ಸಮುದಾಯದ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ನೇತೃತ್ವದ ತಂಡವು ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ, ಈ ಬಾರಿ ಮುಸ್ಲಿಂ ಅಭ್ಯರ್ಥಿಗೆ ಅವಕಾಶ ನೀಡಲೇಬೇಕೆಂದು ಒತ್ತಾಯಿಸಿದೆ. ಒಂದು ವೇಳೆ ಸಮುದಾಯವನ್ನು ಕಡೆಗಣಿಸಿದರೆ ಬಂಡಾಯವೇಳುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಈ ಸಭೆಯಲ್ಲಿ ಸಲೀಂ ಅಹ್ಮದ್, ರಹೀಂ ಖಾನ್ ಮತ್ತು ನಾಸಿರ್ ಹುಸೇನ್ ಪಾಲ್ಗೊಂಡಿದ್ದರು.

ಬಾಗಲಕೋಟೆ: ಮೇಟಿ ಕುಟುಂಬದ ಮನವೊಲಿಕೆ
ಬಾಗಲಕೋಟೆಯಲ್ಲಿ ಎಚ್.ವೈ. ಮೇಟಿ ಅವರ ನಿಧನದ ನಂತರ ಉಂಟಾದ ಶೂನ್ಯವನ್ನು ತುಂಬಲು ಅವರ ಪುತ್ರ, ವಕೀಲ ಉಮೇಶ್ ಅವರನ್ನು ಅಭ್ಯರ್ಥಿಯನ್ನಾಗಿ ಅಂತಿಮಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಆರಂಭದಲ್ಲಿ ಕುಟುಂಬದೊಳಗೆ ಇದ್ದ ಭಿನ್ನಾಭಿಪ್ರಾಯಗಳನ್ನು ಶಮನಗೊಳಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಮೇಟಿ ಅವರ ಪುತ್ರಿಯರಾದ ಮಹಾದೇವಿ, ಬಯಕ್ಕ ಮತ್ತು ಮಗ ಮಲ್ಲಿಕಾರ್ಜುನ್ ಅವರ ಕೆಲವು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿ ಅವರನ್ನು ಒಪ್ಪಿಸಲಾಗಿದೆ.

'ನಾವು ಒಗ್ಗಟ್ಟಾಗಿದ್ದೇವೆ' ಎಂದ ಸುರ್ಜೇವಾಲಾ
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸರಣಿ ಸಭೆಗಳ ನಂತರ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲಾ, "ಕಾಂಗ್ರೆಸ್ ಪಕ್ಷದಲ್ಲಿ ಪ್ರತಿಯೊಬ್ಬರಿಗೂ ತಮ್ಮ ಆಕಾಂಕ್ಷೆಗಳನ್ನು ವ್ಯಕ್ತಪಡಿಸುವ ಹಕ್ಕಿದೆ. ಕರ್ನಾಟಕದ ಜನರು ನಮ್ಮೊಂದಿಗಿದ್ದಾರೆ. ಈ ಹಿಂದಿನ ಉಪಚುನಾವಣೆಗಳಂತೆ ಈ ಬಾರಿಯೂ ನಾವು ಎರಡೂ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದ್ದೇವೆ," ಎಂದು ವಿಶ್ವಾಸ ವ್ಯಕ್ತಪಡಿಸಿದರು

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ