LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಬಗ್ಗೆ ಸಂತಸ ವ್ಯಕ್ತಪಡಿಸಿದ ಜರ್ಮನಿಯ ಕ್ರಿಸ್ಟಿನ್ ಟೋಎಟ್ಜ್ಕೇ

ಬೆಂಗಳೂರು : ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿಯ ನಿಟ್ಟಿನಲ್ಲಿ ಭಾರತ ಮತ್ತು ಜರ್ಮನಿಯ ಸಹಕಾರ ವೃಧಿಸುವುದಕ್ಕಾಗಿ ಭಾರತಕ್ಕೆ ಭೇಟಿ ನೀಡಿರುವ ತಂಡವು ಇಂದು ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಭೇಟಿ ನೀಡಿದ ನಂತರ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಯಾಗಿ ಚರ್ಚಿಸಿದರು.

ದಾನಮಾಡಿದ ಮಾನವನ ಅಂಗಗಳನ್ನು ಮೆಟ್ರೋ ಮೂಲಕ ಕೆಲವೇ ನಿಮಿಷಗಳಲ್ಲಿ ಆಸ್ಪತ್ರೆಗಳಿಗೆ ತಲುಪಿಸುವ ವ್ಯವಸ್ಥೆಯನ್ನು ತಿಳಿದು ಆಶ್ಚರ್ಯ ಪಟ್ಟರು ಹಾಗೂ ಮೆಟ್ರೋ ವ್ಯವಸ್ಥೆಯಿಂದ ವಿಶೇಷ ಚೇತನ ವ್ಯಕ್ತಿಗಳು, ಹಿರಿಯ ನಾಗರೀಕರಿಗೆ ಬಹಳ ಅನುಕೂಲವಾಗಿದೆ ಎಂದು ವಿಶೇಷವಾಗಿ ತಿಳಿಸಿದರು.

ಹಸಿರು ಮತ್ತು ಸುಸ್ಥಿರ ಇಂಧನವನ್ನು ಬಳಸಿಕೊಳ್ಳಲು ಹೆಚ್ಚು ಕಂಪನಿಗಳು ಆಸಕ್ತಿ ಹೊಂದಿವೆ. ರಾಜ್ಯದಲ್ಲಿ ಹಲವಾರು ಕಡೆಗಳಲ್ಲಿ ಬರಡು ಭೂಮಿ ಇದೆ. ಅಲ್ಲಿ ಸೋಲಾರ್ ಅಥವಾ ಪವನ್ ವಿದ್ಯುತ್ಚಕ್ತಿ ಉತ್ಪಾದಿಸಲು ಅವಕಾಶಗಳಿವೆ. ಇದಕ್ಕಾಗಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಜರ್ಮನಿ ತಂಡವನ್ನು ಪರಿಚಯಿಸುವಂತೆ ಮುಖ್ಯ ಕಾರ್ಯದರ್ಶಿಯವರು ಅಧಿಕಾರಿಗಳಿಗೆ ತಿಳಿಸಿದರು.

ಬೆಂಗಳೂರು ನಗರ ಒಳಚರಂಡಿ ಮಂಡಳಿಯಿಂದ ಪ್ರಸ್ತುತ ಕೈಗೊಳ್ಳಲಾಗುತ್ತಿರುವ ಒಳಚರಂಡಿ ನೀರಿನ ಸಂಸ್ಕರಣೆ, ಮರುಬಳಕೆ, ಕೆರೆಗಳಲ್ಲಿ ಸಂಗ್ರಹವಾಗುವ ಹೂಳನ್ನು ತೆಗೆಯುವ ವಿಧಾನಗಳ ಕುರಿತು ವಿವರಿಸಿದ ನಗರಾಭಿವೃದ್ದಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ ಗಿರಿನಾಥ ಅವರು ಈ ವ್ಯವಸ್ಥೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಇದರಲ್ಲಿ ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಜರ್ಮನಿಯ ಸಹಭಾಗಿತ್ವವನ್ನು ಕೋರಿದರು.

ಜರ್ಮನ್ ತಂಡವು ಸೆಂಟರ್ ಆಫ್ ಎಕ್ಸ್ಲೆನ್ಸ್ ಬಗ್ಗೆ ವಿವರಿಸುತ್ತಾ, ಈಗಾಗಲೇ ಭಾಷ್, ಸಿಮನ್ಸ್ ನಂತರ ಹಲವಾರು ಜರ್ಮನ್ ಕಂಪನಿಗಳು ಬಹಳ ವರ್ಷಗಳಿಂದ ಬೆಂಗಳೂರಿನಲ್ಲಿ ಇವೆ. ಇತ್ತೀಚೆಗೆ ಬೆಂಗಳೂರು ಟೆಕ್ ಸಮಾವೇಶದಲ್ಲಿ ಚರ್ಚಿಸಿದ ಹಾಗೆ ಕೃತಕ ಬುದ್ಧಿಮತ್ತೆಯಲ್ಲಿ ತಂಡವು ಆಸಕ್ತಿ ವಹಿಸುತ್ತಿದೆ. ಜೊತೆಯಲ್ಲಿ ಮೂಲಸೌಕರ್ಯ ಯೋಜನೆಗಳು, ಟನಲ್ ರಸ್ತೆಗಳು, ಮೆಟ್ರೋ ಹಂತ-3 ಯೋಜನೆಗಳಲ್ಲೂ ಸಹಭಾಗಿತ್ವ ವಹಿಸುವುದಾಗಿ ತಿಳಿಸಿತು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ