LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಕಾಂಗ್ರೆಸ್ ಸಿದ್ಧಾಂತದ ಜೊತೆ ಸಿಎಂ ಸಿದ್ದರಾಮಯ್ಯ ವರ್ಚಸ್ಸು ಪಕ್ಷ ಅಧಿಕಾರಕ್ಕೆ ಬರಲು ಪ್ರಮುಖ ಕಾರಣ: ಎಂ.ಬಿ.ಪಾಟೀಲ್

ಬೆಂಗಳೂರು: ಕಾಂಗ್ರೆಸ್ ಸಿದ್ಧಾಂತದ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಚಸ್ಸು ಹಾಗೂ ಅವರ ಕಾರ್ಯಕ್ರಮಗಳು ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಪ್ರಮುಖ ಕಾರಣ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಟಾಂಗ್ ನೀಡಿದ್ದಾರೆ.
ನಾಯಕತ್ವಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಬಣದ ಸಚಿವರು ಸಾಮೂಹಿಕ ನಾಯಕತ್ವದಿಂದಲೇ ಪಕ್ಷ ಅಧಿಕಾರಕ್ಕೆ ಬಂದಿದೆ, ಇದರಲ್ಲಿ ಸಿದ್ದರಾಮಯ್ಯ ಪಾತ್ರ ಪ್ರಮುಖ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಮುಖ ಮತ್ತು ಕಾಂಗ್ರೆಸ್‌ನ ಕಾರ್ಯಕ್ರಮಗಳಿಗೆ ಜನ ಮತ ನೀಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಉತ್ತಮ ಸಂಘಟನೆ ಮಾಡಿದ್ದಾರೆ, ಅದರಲ್ಲಿ ಎರಡು ಮಾತಿಲ್ಲ, ಆದರೆ, ಕಾಂಗ್ರೆಸ್‌ನಲ್ಲಿ ಎಲ್ಲರೂ ನಾಯಕರೇ ಎಂದು ಹೇಳಿದರು.
ಕೆಳಹಂತದ ಕಾರ್ಯಕರ್ತ ಶ್ರಮಿಸದಿದ್ದರೆ ಪಕ್ಷ ಸಂಘಟನೆ ಆಗುವುದಿಲ್ಲ, ಇದು ಎಲ್ಲರಿಗೂ ತಿಳಿದಿರುವ ವಿಚಾರ, ನಮ್ಮಲ್ಲಿ ಡಾ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ನಾನು ಸೇರಿದಂತೆ ಅನೇಕ ನಾಯಕರಿದ್ದೇವೆ. ನಮಗೂ, ಪಕ್ಷ ಮತ್ತು ಸರ್ಕಾರ ನಡೆಸುವ ಸಾಮರ್ಥ್ಯವಿದೆ, ಜನ ಬೆಂಬಲವೂ ಇದೆ, ಕಾಂಗ್ರೆಸ್‌ನಲ್ಲಿ ಯಾರೊಬ್ಬರಿಗೂ ಸರ್ವೋಚ್ಛ ಅಧಿಕಾರ ನೀಡಿಲ್ಲ ಎಂದರು.
ಒಟ್ಟಿಗೆ ಹೋದರೇ ಪಕ್ಷ ಅಧಿಕಾರಕ್ಕೆ: ಶಿವಕುಮಾರ್ ಹೇಳಿಕೆಗೆ ಮತ್ತೊಂದೆಡೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕಾಂಗ್ರೆಸ್‌ನಲ್ಲಿ ಎಲ್ಲರೂ ನಾಯಕರೇ, ನಾವೆಲ್ಲ ಒಟ್ಟಿಗೆ ಸಂಘಟನಾತ್ಮಕವಾಗಿ ಹೋದಾಗಲೇ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯ. ಇದನ್ನು ಮಾಡಿ ತೋರಿಸಿದ್ದೇವೆ, ಯಾರೊಬ್ಬರೂ ತಮ್ಮಿಂದಲೇ ಎಲ್ಲವೂ ನಡೆಯುತ್ತದೆ ಎಂಬುದು ಕಾಂಗ್ರೆಸ್‌ನಲ್ಲಿ ಇಲ್ಲ ಎಂದರು.
ಶಿವಕುಮಾರ್ ಏನೋ ಹೇಳಿರಬಹುದು, ನಂತರ ಅವರೂ ಮುಂಬರುವ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲೇ ಎದುರಿಸುತ್ತೇವೆ ಎಂದಿದ್ದಾರೆ ಎಂದು ಪ್ರತಿಕ್ರಿಯಿಸಿದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ