LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Entertainment News

ರಚಿತಾ ರಾಮ್ ವಿರುದ್ಧ ದೂರು : ನಿರ್ದೇಶಕ ನಾಗಶೇಖರ್ !

ರಚಿತಾ ರಾಮ್ ವಿರುದ್ಧ ದೂರು : ನಿರ್ದೇಶಕ ನಾಗಶೇಖರ್ !

ನಟಿ ರಚಿತಾ ರಾಮ್ ಮೇಲೆ ದೂರು ಧಾಖಲಾಗಿದೆ ಸಂಜು ವೆಡ್ಸ್ ಗೀತಾ ೨ ಸಿನಿಮಾದ ನಿರ್ದೇಶಕ ದೂರು ನೀಡಿದ್ದಾರೆ .
ಚಿತ್ರ ಹೇಗಾದರೂ ಇರಲಿ .. ಆದರೆ ಈ ಕಾಲದಲ್ಲಿ ಪ್ರಚಾರ ತುಂಬಾನೇ ಮುಖ್ಯ. ಹೀಗಾಗಿಯೇ ಪ್ರಚಾರ ಮಾಡುವ ಅವಶ್ಯಕತೆ ಇಲ್ಲದಿದ್ದರೂ ಕೂಡ ರಾಜಮೌಳಿ ಅವರಂತಹ ನಿರ್ದೇಶಕರು ತಮ್ಮ ಚಿತ್ರದ ಪ್ರಚಾರ ಮಾಡ್ತಾರೆ. ಪ್ರಚಾರಕ್ಕೆಂದೇ ಸಮಯ ಮೀಸಲಿಡುತ್ತಾರೆ. ಆದರೆ, ನಮ್ಮ ಕನ್ನಡ ಚಿತ್ರರಂಗಕ್ಕೆ ಈ ಪ್ರಚಾರದ ಮಹತ್ವ ಇನ್ನೂ ಅರ್ಥವೇ ಆಗಿಲ್ಲ. ಗಿಮಿಕ್‌ ಮಾಡುವುದನ್ನೇ ಪ್ರಚಾರ ಎಂದು ನಮ್ಮಲ್ಲಿ ಅನೇಕರು ಅಂದುಕೊಂಡಿದ್ದಾರೆ.
ಇನ್ನು ಕೆಲವರು ತಮ್ಮದೇ ಚಿತ್ರ ಆದರೂ ಕೂಡ.. ಬರಬೇಕಾದ ಹಣ ಬಂದರೂ ಕೂಡ.. ಪ್ರಚಾರ ಮಾಡಲು ಅದ್ಯಾಕೋ ಹಿಂದೆ ಮುಂದೆ ಯೋಚನೆ ಮಾಡುತ್ತಾರೆ. ಪ್ರಚಾರಕ್ಕೆ ಬರದೇ ಸತಾಯಿಸುತ್ತಾರೆ. ಉದಾಹರಣೆಗೆ ರಚಿತಾ ರಾಮ್.
ಹೌದು, ಧಾರಾವಾಹಿ ಪ್ರಪಂಚದಲ್ಲಿ ಸಣ್ಣಗೆ ಸದ್ದು ಮಾಡುತ್ತಲೇ ಏಕಾಏಕಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ನಾಯಕಿಯಾಗುವ ಮೂಲಕ ಅಚ್ಚರಿಗೆ ಕಾರಣವಾಗಿದ್ದವರು ರಚಿತಾ ರಾಮ್. ಅಲ್ಲಿಂದಾಚೆ ಕಮರ್ಷಿಯಲ್ ಪಥದಲ್ಲಿಯೇ ಮುಂದುವರೆಯುತ್ತಾ ಬಂದ ರಚಿತಾ ರಾಮ್, 'ಸಂಜು ವೆಡ್ಸ್ ಗೀತಾ 2' ಚಿತ್ರವನ್ನು ಮಾಡಿದ್ದರು.

ಈ ವರ್ಷದ ಆರಂಭದಲ್ಲಿ ಬಂದು ಕೇವಲ ಮೂರೇ ದಿನಕ್ಕೆ ಚಿತ್ರಮಂದಿರದಿಂದ ಎತ್ತಂಗಡಿಯಾಗಿದ್ದ ಈ ಚಿತ್ರ ಸದ್ಯ ಮರು ಬಿಡುಗಡೆಯಾಗಿದೆ. ಚಿತ್ರತಂಡ ಹೇಳಿಕೊಂಡಂತೆ ಪ್ರೇಕ್ಷಕರನ್ನು ಕೂಡ ಸೆಳೆಯುತ್ತಿದೆ. ಆದರೆ.. ಈ ಚಿತ್ರದ ಕಥಾನಾಯಕಿಯಾದ ರಚಿತಾ ರಾಮ್ ಮಾತ್ರ ತಮಗೂ ಚಿತ್ರಕ್ಕೂ ಸಂಬಂಧವೇ ಇಲ್ಲ ಎನ್ನುವಂತೆ ಇದ್ದಾರೆ.ಆರಂಭದಲ್ಲಿ ಅಂದರೆ ಮೊದಲ ಬಾರಿ ಚಿತ್ರ ಬಿಡುಗಡೆಯಾಗುವ ಮುನ್ನ ಒಂದೆರಡು ಮೂರು ಬಾರಿ ತಮ್ಮ ಈ ಚಿತ್ರದ ಕುರಿತು ರಚಿತಾ ರಾಮ್ ಮಾತನಾಡಿದ್ದು ಬಿಟ್ಟರೆ ಆ ನಂತರ ರಚಿತಾ ರಾಮ್‌ ತಾನು ಇಂತಹದ್ದೊಂದು ಚಿತ್ರವನ್ನು ಮಾಡಿದ್ದೇ ಎನ್ನುವುದನ್ನೇ ಮರೆತು ಹೋದಂತೆ ಇದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಜೂನ್ 6ಕ್ಕೆ ಚಿತ್ರ ಮರು ಬಿಡುಗಡೆಯಾಗುತ್ತಿದೆ ಎಂದು ಹೇಳಿರುವುದನ್ನು ಹೊರತು ಪಡಿಸಿದರೆ ರಚಿತಾ ಬೇರೆ ಎಲ್ಲಿಯೂ ಕೂಡ ಚಿತ್ರದ ಕುರಿತು ಮಾತನಾಡುವ ಗೋಜಿಗೆ ಹೋಗಿಲ್ಲ. ಹೀಗಾಗಿಯೇ ಕೆರಳಿ ಕೆಂಡವಾಗಿರುವ ನಿರ್ದೇಶಕ ನಾಗಶೇಖರ್ ಸದ್ಯ ರಚಿತಾ ರಾಮ್ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಿದ್ದಾರೆ. ನಾಗ್‌ಶೇಖರ್ ಅವರ ಜೊತೆ ಶ್ರೀನಗರ ಕಿಟ್ಟಿ ಕೂಡ ಈ ವಿಚಾರದಲ್ಲಿ ಜೊತೆ ನಿಂತಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ