LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
National News

ದೆಹಲಿ ಸ್ಫೋಟ ಪ್ರಕರಣ: ಅಲ್-ಫಲಾಹ್ ವಿವಿ ಮೇಲೆ ಇಡಿ ದಾಳಿ!

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ 12 ಮಂದಿಯ ಸಾವಿಗೆ ಕಾರಣವಾದ ಕಾರು ಸ್ಫೋಟ ಪ್ರಕರಣಕ್ಕೆ ಸಂಬAಧಿಸಿದAತೆ ಬಂಧಿತರಾಗಿರುವ ಶಂಕಿತ ಉಗ್ರರ ಜೊತೆಗಿನ ಸಂಬAಧ ಹೊಂದಿರುವ ಅಲ್-ಫಲಾಹ್ ವಿಶ್ವವಿದ್ಯಾಲಯದ ಹಣಕಾಸು ವ್ಯವಹಾರದ ಕುರಿತ ತನಿಖೆನ್ನು ಜಾರಿ ನಿರ್ದೇಶನಾಲಯ ತೀವ್ರಗೊಳಿಸಿದ್ದು, ವಿವಿಯ ಕಚೇರಿ ಸೇರಿ 25 ಸ್ಥಳಗಳ ಮೇಲೆ ಮಂಗಳವಾರ ದಾಳಿ ನಡೆಸಿ, ತೀವ್ರ ಶೋಧ ನಡೆಸುತ್ತಿದೆ.

ಫರಿದಾಬಾದ್‌ನಲ್ಲಿರುವ 70 ಎಕರೆ ವಿಸ್ತೀರ್ಣದ ವಿಶ್ವವಿದ್ಯಾಲಯದ ಓಖ್ಲಾ ಕಚೇರಿಯ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ.

ನ. 10ರಂದು ನಡೆಸಿದ ಸ್ಫೋಟದ ಪಿತೂರಿಯನ್ನು ಅದೇ ವಿವಿಯಲ್ಲಿ ರೂಪಿಸಲಾಗಿತ್ತು ಎಂದು ಆರೋಪಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಅಲ್ ಫಲಾಹ್ ವಿಶ್ವವಿದ್ಯಾಲಯದ ಖಾತೆಗಳ ಹಣಕಾಸು ಕುರಿತು ತನಿಖೆಗೆ ಆದೇಶಿಸಿತ್ತು. ಜೊತೆಗೆ ಆರ್ಥಿಕ ಅಪರಾಧಗಳ ವಿಭಾಗಕ್ಕೆ ವಿವಿಯ ಕಾರ್ಯನಿರ್ವಹಣೆಯನ್ನೂ ಪರಿಶೀಲಿಸುವಂತೆ ಸೂಚನೆ ನೀಡಿತ್ತು.

ದೆಹಲಿ-ಹರಿಯಾಣ ಗಡಿಯಿಂದ ಸುಮಾರು 27ಕಿಮೀ ದೂರದಲ್ಲಿರುವ 70 ಎಕರೆಗಳಷ್ಟು ವಿಸ್ತಾರವಾದ ಅಲ್ ಫಲಾಹ್ ವಿಶ್ವವಿದ್ಯಾಲಯ ಒಂದು ಖಾಸಗಿ ಸಂಸ್ಥೆಯಾಗಿದೆ. ದೆಹಲಿಯಲ್ಲಿ ಸ್ಫೋಟಗೊಂಡ ಹುಂಡೈ ಐ20 ಕಾರಿನ ಚಾಲಕ ಮೃತ ಡಾ. ಉಮರ್ ಮೊಹಮ್ಮದ್ ಇದೇ ವಿವಿಯಲ್ಲಿ ವೈದ್ಯನಾಗಿದ್ದನು. ಜೊತೆಗೆ, ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಡಾ. ಶಾಹೀನ್ ಸಯೀದ್, ಡಾ. ಆದಿಲ್ ರಾಥರ್ ಮತ್ತು ಡಾ. ಮುಜಮ್ಮಿಲ್ ಶಕೀಲ್ ವಿಶ್ವವಿದ್ಯಾಲಯದವರೇ ಎನ್ನಲಾಗಿದೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ತನಿಖಾಧಿಕಾರಿಗಳು ಡಾ.ಮುಜಮ್ಮಿಲ್ ಶಕೀಲ್ ಕೊಠಡಿಯಿಂದ ಅಪರಾಧ ಸಾಬೀತು ಪಡಿಸುವ ವಸ್ತುಗಳನ್ನು ಪತ್ತೆ ಹೆಚ್ಚಿದ್ದು, ಅದರಲ್ಲಿ ಇಬ್ಬರು ವೈದ್ಯರ ಡೈರಿಗಳಲ್ಲಿ ಕೋಡ್ ಇರುವ ಸಂದೇಶಗಳಿರುವುದು ಪತ್ತೆಯಾಗಿದೆ.

ಶಂಕಿತ ಉಗ್ರರು ತಮ್ಮ ಭಯೋತ್ಪಾದಕ ಯೋಜನೆಗಳ ಕುರಿತು ಚರ್ಚಿಸಲು ವಿಶ್ವವಿದ್ಯಾಲಯದಲ್ಲಿರುವ ಡಾ. ಮುಜಮ್ಮಿಲ್ ಅವರ ಕೋಣೆಯಲ್ಲಿ ರಹಸ್ಯವಾಗಿ ಭೇಟಿಯಾಗಿದ್ದರು ಎಂದು ತಿಳಿದುಬಂದಿದೆ.

ಬಾAಬ್ ತಯಾರಿಕೆಯಲ್ಲಿ ಬಳಸಲು ವಿಶ್ವವಿದ್ಯಾಲಯದ ಪ್ರಯೋಗಾಲಯದಿಂದ ಕೆಲವು ರಾಸಾಯನಿಕಗಳನ್ನೂ ಕಳ್ಳಸಾಗಣೆ ಮಾಡಿದ್ದರು ಎನ್ನಲಾಗಿದೆ. ಈ ಎಲ್ಲಾ ಆರೋಪ ಬೆನ್ನಲ್ಲೇ ಇಡಿ ಅಧಿಕಾರಿಗಲು ವಿವಿಯ ಕಚೇರಿ ಮೇಲೆ ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ