LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ರೈತರಿಂದ ಕನಿಷ್ಠ 15 ಕ್ವಿಂಟಾಲ್ ಮೆಕ್ಕೆಜೋಳ ಖರೀದಿಸಲು ಆಗ್ರಹ

ಬಳ್ಳಾರಿ : ರಾಜ್ಯ ಸರ್ಕಾರವು ಮೆಕ್ಕೆಜೋಳ ಬೆಳೆದ ರೈತರಿಂದ ಖರೀದಿ ಕೇಂದ್ರಗಳ ಮೂಲಕ ಮೆಕ್ಕೆಜೋಳ ಖರೀದಿಸುವುದಾಗಿ ಘೋಷಿಸಿ, ಅನೇಕ ದಿನಗಳು ಕಳೆದರೂ, ಈವರೆಗೂ ಅದು ಸಮರ್ಪಕವಾಗಿ ಜಾರಿಯಾಗಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಗಣಪಾಲ ಐನಾಥರೆಡ್ಡಿ ಬೇಸರ ವ್ಯಕ್ತಪಡಿಸಿದ್ದಾರೆ.
ಅಲ್ಲದೇ, ಪ್ರತಿಯೋರ್ವ ರೈತರಿಂದ ಕೇವಲ ಐದು ಕ್ವಿಂಟಾಲ್‍ಗಳಷ್ಟು ಮಾತ್ರವೇ ಮೆಕ್ಕೆಜೋಳ ಖರೀದಿಸುವುದಾಗಿ ಅಧಿಕಾರಿಗಳು ಹೇಳುತ್ತಿರುವುದು ರೈತ ವಿರೋಧಿ ಧೋರಣೆ ಹಾಗೂ ಅವೈಜ್ಞಾನಿಕ ನೀತಿಯಾಗಿದೆ ಎಂದು ಖಂಡಿಸಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಪ್ರತಿ ಎಕರೆಗೆ ಅಂದಾಜು 30 ಕ್ವಿಂಟಾಲ್‍ಗಳವರೆಗೆ ಇಳುವರಿ ಇದ್ದು, ಖರೀದಿ ಕೇಂದ್ರಗಳಲ್ಲಿ ಕೇವಲ ಐದು ಕ್ವಿಂಟಾಲ್‍ಗಳಷ್ಟು ಮಾತ್ರವೇ ಖರೀದಿ ಮಾಡಿದರೆ ಅದರ ಸಾಗಣೆ ವೆಚ್ಚವೂ ಸಹ ರೈತನ ಕೈಗೆ ಎಟುಕುವುದಿಲ್ಲ. ಈಗಾಗಲೇ ಜಿಲ್ಲೆಯ ರೈತರು, ಎರಡನೇ ಬೆಳೆಗೆ (ಬೇಸಿಗೆ ಬೆಳೆಗೆ) ನೀರಿಲ್ಲದೇ, ಬೆಳೆ ನಷ್ಟದ ಸಂಕಷ್ಟದಲ್ಲಿದ್ದಾರೆ, ಕಾರಣ ಪ್ರತಿಯೋರ್ವ ರೈತರಿಂದ ಕನಿಷ್ಠ 15 ಕ್ವಿಂಟಾಲ್‍ಗಳಷ್ಟು ಮೆಕ್ಕೆಜೋಳವನ್ನು ಖರೀದಿಸಬೇಕು ಎಂದು ಗಣಪಾಲ್ ಐನಾಥರೆಡ್ಡಿಯವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಪಡಿಸಿದ್ದಾರೆ.
ವಿಶ್ವ ಮಣ್ಣು ದಿನಾಚರಣೆ : ಅಂತೆಯೇ ಇಂದು ವಿಶ್ವ ಮಣ್ಣು ದಿನವನ್ನು ಆಚರಿಸುತ್ತಿದ್ದು, ಪರಿಸರ ವ್ಯವಸ್ಥೆ ಮತ್ತು ಸಕಲ ಜೀವರಾಶಿಗಳ ಯೋಗಕ್ಷೇಮಕ್ಕೆ ಮಣ್ಣು ಪ್ರಮುಖ ಅಡಿಪಾಯವಾಗಿದ್ದು, ಈ ಮಣ್ಣಿನ ಅತ್ಯಮೂಲ್ಯವಾದ ಪ್ರಾಮುಖ್ಯತೆಯನ್ನು ಗಮನದಲ್ಲಿರಿಸಿಕೊಂಡು, ಮಣ್ಣಿನ ಮಾಲಿನ್ಯವನ್ನು ತಡೆಗಟ್ಟಲು, ಮಣ್ಣು ಹಾಗೂ ಮಣ್ಣಿನ ಆರೋಗ್ಯವನ್ನು ಸಂರಕ್ಷಿಸಲು ಡಿ.5ರಂದು ವಿಶ್ವ ಮಣ್ಣು ದಿನವನ್ನು ಆಚರಿಸುತ್ತಿದ್ದು, ರೈತರು ಈ ನಿಟ್ಟಿನಲ್ಲಿ ಮಣ್ಣಿನ ಆರೋಗ್ಯ ಸಂರಕ್ಷಿಸಬೇಕೆಂದು ಐನಾಥರೆಡ್ಡಿ ಕೋರಿದ್ದಾರೆ.
ಮಣ್ಣಿನ ಸವೆತವು ದಿನ-ದಿನವೂ ಹೆಚ್ಚಾಗುತ್ತಿದ್ದು, ಅತಿಯಾದ ರಾಸಾಯನಿಕ ಗೊಬ್ಬರಗಳ ಬಳಕೆಯಿಂದಾಗಿ, ಮಣ್ಣಿನ ಫಲವತ್ತತೆ ಹಾಳಾಗುತ್ತಿದ್ದು, ರೈತರು ಇದರ ಬಳಕೆಯನ್ನು ಆದಷ್ಟೂ ಕಡಿಮೆ ಮಾಡಬೇಕೆಂದು ಮತ್ತು ಮುಖ್ಯವಾಗಿ ಸಾವಯವ ಕೃಷಿಗೆ ಆದ್ಯತೆ ನೀಡಬೇಕು. ಈ ಹಿನ್ನೆಲೆಯಲ್ಲಿ ಮಣ್ಣಿನ ಹಾನಿಯನ್ನು ತಡೆಗಟ್ಟುವುದು, ಮಣ್ಣಿನ ಫಲವತ್ತತೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ