LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Entertainment News

'ಧುರಂಧರ್ 2' ಹೊಗಳಿದ ತಲೈವಾ: ಪ್ರತಿ ಭಾರತೀಯನೂ ನೋಡಲೇಬೇಕಾದ ಸಿನಿಮಾ

ಮುಂಬೈ: ಬಾಕ್ಸ್ ಆಫೀಸ್‌ನಲ್ಲಿ ಸಖತ್ ಸದ್ದು ಮಾಡುತ್ತಿರುವ ರಣವೀರ್ ಸಿಂಗ್ ಅಭಿನಯದ 'ಧುರಂಧರ್ 2' ಚಿತ್ರದ ಯಶಸ್ಸಿನ ಮಕುಟಕ್ಕೆ ಈಗ ಮತ್ತೊಂದು ಗರಿ ಸೇರಿದೆ. ಭಾರತೀಯ ಚಿತ್ರರಂಗದ 'ತಲೈವಾ', ಸೂಪರ್ ಸ್ಟಾರ್ ರಜನಿಕಾಂತ್ ಅವರು ಈ ಚಿತ್ರವನ್ನು ಮುಕ್ತಕಂಠದಿAದ ಶ್ಲಾಘಿಸಿದ್ದಾರೆ.

ತಲೈವಾ ನೀಡಿದ ಬಿರುದು: 'ಬಾಕ್ಸ್ ಆಫೀಸ್ ಕಾ ಬಾಪ್'

ಸಾಮಾಜಿಕ ಜಾಲತಾಣ ಎಕ್ಸ್ (x) ನಲ್ಲಿ ಪೋಸ್ಟ್ ಮಾಡಿರುವ ರಜನಿಕಾಂತ್, ಚಿತ್ರದ ನಿರ್ದೇಶಕ ಆದಿತ್ಯ ಧರ್ ಅವರ ಕೆಲಸಕ್ಕೆ ಫಿದಾ ಆಗಿದ್ದಾರೆ.

"ಎಂತಹ ಅದ್ಭುತ ಸಿನಿಮಾ ಧುರಂಧರ್ 2! ಆದಿತ್ಯ ಧರ್ ಬಾಕ್ಸ್ ಆಫೀಸ್ ಕಾ ಬಾಪ್. ರಣವೀರ್ ಮತ್ತು ಇಡೀ ತಂಡಕ್ಕೆ ಅಭಿನಂದನೆಗಳು. ಇದು ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ. ಜೈ ಹಿಂದ್!" ಎಂದು ಅವರು ಟ್ವೀಟ್ ಮಾಡಿದ್ದಾರೆ.

ಬಾಕ್ಸ್ ಆಫೀಸ್ ಸುನಾಮಿ

ಆದಿತ್ಯ ಧರ್ ನಿರ್ದೇಶನದ ಈ ಬೇಹುಗಾರಿಕಾ (Spy Thriller) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳನ್ನು ಪುಡಿಪುಡಿ ಮಾಡುತ್ತಿದೆ:

4 ದಿನಗಳ ಗಳಿಕೆ: ಭಾರತದಲ್ಲಿ ಈಗಾಗಲೇ ₹541 ಕೋಟಿ ದಾಟಿದೆ.

ಹಿಂದಿನ ದಾಖಲೆ: 2025ರ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಿದ್ದ ಮೊದಲ ಭಾಗ 'ಧುರಂಧರ್' ₹1000 ಕೋಟಿಗೂ ಅಧಿಕ ಗಳಿಕೆ ಕಂಡು ಇತಿಹಾಸ ಸೃಷ್ಟಿಸಿತ್ತು.

ರಣವೀರ್ ಸಿಂಗ್ ಜೊತೆಗೆ ಆರ್. ಮಾಧವನ್, ಅರ್ಜುನ್ ರಾಮ್‌ಪಾಲ್ ಮತ್ತು ಸಂಜಯ್ ದತ್ ಅವರಂತಹ ಘಟಾನುಘಟಿ ಕಲಾವಿದರು ಈ ಚಿತ್ರದಲ್ಲಿದ್ದಾರೆ.

ಚಿತ್ರದ  ವಿವರ

ನಿರ್ಮಾಣ: ಬಿ62 ಸ್ಟುಡಿಯೊಸ್.

ಭಾಷೆ: ಹಿಂದಿ, ಕನ್ನಡ ಸೇರಿದಂತೆ ಐದು ಪ್ರಮುಖ ಭಾಷೆಗಳಲ್ಲಿ ಸಿನಿಮಾ ತೆರೆಕಂಡು ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ.

ಕಥೆ: ಮೊದಲ ಭಾಗದ ಮುಂದುವರಿದ ಭಾಗವಾಗಿದ್ದು, ದೇಶಭಕ್ತಿ ಮತ್ತು ರೋಚಕ ಬೇಹುಗಾರಿಕೆಯ ಕಥಾಹಂದರವನ್ನು ಹೊಂದಿದೆ.

ರಜನಿಕಾಂತ್ ಅವರ ಈ ಮೆಚ್ಚುಗೆಯ ನುಡಿಗಳು ಚಿತ್ರತಂಡಕ್ಕೆ ಆನೆಬಲ ತಂದಿದ್ದು, ಮುಂಬರುವ ದಿನಗಳಲ್ಲಿ ಸಿನಿಮಾ ಇನ್ನೂ ಹೆಚ್ಚಿನ ದಾಖಲೆ ಬರೆಯುವ ನಿರೀಕ್ಷೆಯಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ