LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
National News

ಆಪರೇಷನ್ ಕಮಲದ ಆತಂಕ: ಒಡಿಶಾ ಕಾಂಗ್ರೆಸ್ ಶಾಸಕರು ಬಿಡದಿ ರೆಸಾರ್ಟ್‌ಗೆ ಶಿಫ್ಟ್; ಅಖಾಡಕ್ಕಿಳಿದ ಡಿಕೆ ಶಿವಕುಮಾರ್

ಬೆಂಗಳೂರು: ಒಡಿಶಾದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯ ಹಿನ್ನೆಲೆ ಅಡ್ಡ ಮತದಾನದ ಭೀತಿ ಎದುರಾಗಿದ್ದು, ಕಾಂಗ್ರೆಸ್ ತನ್ನ ಶಾಸಕರನ್ನು ಸುರಕ್ಷಿತವಾಗಿರಿಸಲು ರೆಸಾರ್ಟ್ ರಾಜಕೀಯಕ್ಕೆ ಮೊರೆ ಹೋಗಿದೆ. ಈ ಹಿನ್ನೆಲೆಯಲ್ಲಿ ಒಡಿಶಾ ಕಾಂಗ್ರೆಸ್‌ನ ಸುಮಾರು 14 ಮಂದಿ ಶಾಸಕರು ಹಾಗೂ ನಾಯಕರು ಬೆಂಗಳೂರಿಗೆ ಆಗಮಿಸಿ ರಾಮನಗರ ಜಿಲ್ಲೆಯ ಬಿಡದಿಯ ರೆಸಾರ್ಟ್‌ನಲ್ಲಿ ತಂಗಿದ್ದಾರೆ.

ಗುರುವಾರ ರಾತ್ರಿ ಭುವನೇಶ್ವರದಿಂದ ಇಂಡಿಗೋ ವಿಮಾನದ ಮೂಲಕ ಶಾಸಕರು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಂದ ಶಾಸಕರನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆಪ್ತರು ಸ್ವಾಗತಿಸಿದರು.

ವಿಮಾನ ನಿಲ್ದಾಣದಿಂದ ಪೊಲೀಸ್ ಬಂದೋಬಸ್ತ್ ಹಾಗೂ ಎಸ್ಕಾರ್ಟ್ ವ್ಯವಸ್ಥೆಯೊಂದಿಗೆ ಶಾಸಕರನ್ನು ನೇರವಾಗಿ ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ಅಲ್ಲಿ ಅವರಿಗೆ ವಿಶೇಷ ವಸತಿ ವ್ಯವಸ್ಥೆ ಮಾಡಲಾಗಿದೆ.

ಈ ತಂಡದಲ್ಲಿ ಶಾಸಕರಾದ ಮಂಗು ಖಿಲಾ, ಅಪ್ಪಲ ಸ್ವಾಮಿ, ರಾಜನ್ ಎಕ್ಕಾ, ಅಶೋಕ್ ಕುಮಾರ್ ಸೇರಿದಂತೆ ಹಲವು ನಾಯಕರು ಇದ್ದಾರೆ. ಜೊತೆಗೆ ಮಾಜಿ ಸಂಸದ ಭಕ್ತ ಚರಣ್ ದಾಸ್ ಹಾಗೂ ಕಾಂಗ್ರೆಸ್ ವಕ್ತಾರ ದುರ್ಗಾ ಪ್ರಸಾದ್ ಪಾಂಡಾ ಸೇರಿ ಒಟ್ಟು ಸುಮಾರು 14 ಮಂದಿ ಬೆಂಗಳೂರಿಗೆ ಬಂದಿದ್ದಾರೆ ಎಂದು ತಿಳಿದುಬಂದಿದೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಒಡಿಶಾ ಕಾಂಗ್ರೆಸ್‌ನ ವೀಕ್ಷಕರಾಗಿರುವ ಹಿನ್ನೆಲೆಯಲ್ಲಿ ಶಾಸಕರು ಬೆಂಗಳೂರಿಗೆ ಆಗಮಿಸಿದ್ದು, ರೆಸಾರ್ಟ್ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಒಡಿಶಾದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ನಡೆಯುವ ಸಾಧ್ಯತೆ ಹಿನ್ನೆಲೆ ಕಾಂಗ್ರೆಸ್ ಈ ಕ್ರಮ ಕೈಗೊಂಡಿದೆ. ಬಿಜೆಪಿಯ ‘ಆಪರೇಷನ್ ಕಮಲ’ ಪ್ರಯತ್ನವನ್ನು ತಡೆಯುವ ಉದ್ದೇಶದಿಂದ ಈ ತಂತ್ರ ರೂಪಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ