LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಜಾನಪದ ಕೋಗಿಲೆ 'ಪದ್ಮಶ್ರೀ' ಪುರಸ್ಕೃತ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ಇನ್ನಿಲ್ಲ

ಬೆಂಗಳೂರು:  ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಹಾಲಕ್ಕಿ ಸಮುದಾಯದ ಸಾಕ್ಷಿ ಪ್ರಜ್ಞೆಯಂತಿದ್ದ ಜನಪದ ಹಾಡುಗಳನ್ನು ಹಾಡುವ ಜೊತೆಗೆ ಮದ್ಯಪಾನ ವಿರೋಧಿ ಹೋರಾಟದಿಂದ ಖ್ಯಾತಿಗಳಿಸಿದ್ದ ಅಂಕೋಲಾ ತಾಲ್ಲೂಕು ಬಡಗೇರಿಯ ಸುಕ್ರಿ ಬೊಮ್ಮ ಗೌಡ (88) ಗುರುವಾರ ನಸುಕಿನ ಜಾವ ನಿಧನರಾಗಿದ್ದಾರೆ

ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಸುಕ್ರಜ್ಜಿ ಎಂದೇ ಪ್ರಸಿದ್ದರಾಗಿದ್ದ ಸುಕ್ರಿ ಬೊಮ್ಮಗೌಡ ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕೆಲವು ದಿನದ ಹಿಂದೆ ಉಸಿರಾಟ ಸಮಸ್ಯೆಯಿಂದ ಉಡುಪಿಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು. ಆದರೆ ಇಂದು ಮುಂಜಾನೆ 4 ಗಂಟೆ ಸಮಯಕ್ಕೆ ಅಂಕೋಲದ ಬಡಿಗೇರಿಯ ಅವರ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಸುಕ್ರಿ ಬೊಮ್ಮಗೌಡ ಅವರು ಇದೀಗ ಇಬ್ಬರು ಮೊಮ್ಮಕ್ಕಳು ಓರ್ವ ಸೊಸೆಯನ್ನು ಅಗಲಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಾಲಕ್ಕಿ ಒಕ್ಕಲಿಗ ಜನಾಂಗಕ್ಕೆ ಸೇರಿದ ಸುಕ್ರಿ ಬೊಮ್ಮಗೌಡ ಅವರು ಸುಪ್ರಸಿದ್ಧ ಜಾನಪದ ಗಾಯಕಿಯಾಗಿದ್ದರು. ಸುಮಾರು 5 ಸಾವಿರ ಹಾಲಕ್ಕಿ ಹಾಡುಗಳು ಕಂಠಪಾಟವಾಗಿದ್ದವು. ಅವರು ಜಾನಪದ ಕಲೆಗೆ ನೀಡಿದ ಕೊಡುಗೆಗಳಿಗಾಗಿ ಮತ್ತು ಸಾಂಪ್ರದಾಯಿಕ ಬುಡಕಟ್ಟು ಸಂಗೀತವನ್ನು ಸಂರಕ್ಷಿಸುವ ಕಾರ್ಯಕ್ಕಾಗಿ ಹಲವು ಪ್ರಶಸ್ತಿಗಳನ್ನು ಸಂಪಾದಿಸಿದ್ದಾರೆ.

ಜನಪದ ಹಾಗೂ ಸಾಮಾಜಿಕ ಸೇವಾ ಕ್ಷೇತ್ರಕ್ಕೆ ಸುಕ್ರಿ ಬೊಮ್ಮ ಗೌಡ ನೀಡಿರುವ ಕೊಡುಗೆ ಗುರುತಿಸಿ, 1999ರಲ್ಲಿ ಜನಪದಶ್ರೀ ಪ್ರಶಸ್ತಿ, 2006ರಲ್ಲಿ ನಾಡೋಜ ಪ್ರಶಸ್ತಿ, 2017ರಲ್ಲಿ ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಇನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ದೇಶ ಹಾಗೂ ರಾಜ್ಯದ ಹಲವು ಪ್ರತಿಷ್ಠಿತ ಪ್ರಶಸ್ತಿ ಸುಕ್ರಿ ಬೊಮ್ಮ ಗೌಡ ಅವರನ್ನು ಅರಸಿಕೊಂಡು ಬಂದಿವೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ