LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
National News

India vs England 2nd test ಇಂಡಿಯಾ ಭರ್ಜರಿ ಗೆಲುವು:10 ವಿಕೆಟ್ ಪಡೆದು ನೋವು ಹಂಚಿಕೊಂಡ ಆಕಾಶ್ ದೀಪ್!

India vs England 2nd test ಇಂಡಿಯಾ ಭರ್ಜರಿ ಗೆಲುವು:10 ವಿಕೆಟ್ ಪಡೆದು ನೋವು ಹಂಚಿಕೊಂಡ ಆಕಾಶ್ ದೀಪ್!

ಬರ್ಮಿಂಗ್ಹ್ಯಾಮ್: ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆದ ಭಾರತ- ಇಂಗ್ಲೆಂಡ್ ನಡುವಿನ 2 ನೇ ಟೆಸ್ಟ್ ಪಂದ್ಯದಲ್ಲಿ 336 ರನ್ ಗಳ ಅಂತರದಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸಿದೆ. ಟೀಮ್ ಇಂಡಿಯಾದ ಈ ಗೆಲುವಿನಲ್ಲಿ ಆಕಾಶ್ ದೀಪ್ ಅವರ ಅತ್ಯುತ್ತಮ ಪ್ರದರ್ಶನ ಪ್ರಮುಖ ಪಾತ್ರ ವಹಿಸಿದೆ.

ಈ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 4 ವಿಕೆಟ್ ಗಳಿಸಿದ್ದ ಆಕಾಶ್ ದೀಪ್ ದ್ವಿತೀಯ ಇನಿಂಗ್ಸ್​ನಲ್ಲಿ 6 ವಿಕೆಟ್ ಪಡೆದರು. ಈ ಮೂಲಕ ಒಟ್ಟು 10 ವಿಕೆಟ್ ಪಡೆದು ಭಾರತ ತಂಡ ಇಂಗ್ಲೆಂಡ್ ನೆಲದಲ್ಲಿ ಐತಿಹಾಸಿಕ ಗೆಲುವು ಸಾಧಿಸುವಲ್ಲಿ ಪ್ರಮುಖ ಕೊಡುಗೆ ನೀಡಿದರು.

ಅಲ್ಲದೇ ಚೇತನ್ ಶರ್ಮಾ 1986ರಲ್ಲಿ ಮಾಡಿದ್ದ ದಾಖಲೆಯನ್ನು ಹಿಂದಿಕ್ಕಿದ್ದರು. 10 ವಿಕೆಟ್ ಪಡೆದ ಭಾರತದ ಎರಡನೇ ವೇಗಿ ಎಂಬ ಖ್ಯಾತಿಗೂ ಪಾತ್ರರಾದರು.Enter Akash Deep: Seam-tight, Shami-lite | Cricbuzz.com

 

ಈ ಭರ್ಜರಿ ಗೆಲುವನ್ನು ಆಕಾಶ್ ದೀಪ್ ಕಳೆದ ಎರಡು ತಿಂಗಳಿನಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ತನ್ನ ಸಹೋದರಿಗೆ ಅರ್ಪಿಸಿದ್ದಾರೆ. ಪಂದ್ಯದ ಬಳಿಕ ಜಿಯೋ ಹಾಟ್‌ಸ್ಟಾರ್‌ನಲ್ಲಿ ಚೇತೇಶ್ವರ ಪೂಜಾರ ಅವರೊಂದಿಗೆ ಮಾತನಾಡಿದ ಆಕಾಶ್ ದೀಪ್, ‘ನಾನು ಇದರ ಬಗ್ಗೆ ಯಾರೊಂದಿಗೂ ಮಾತನಾಡಿಲ್ಲ, ಆದರೆ ಎರಡು ತಿಂಗಳ ಹಿಂದೆ ನನ್ನ ಸಹೋದರಿಗೆ (ಅಕ್ಕ) ಕ್ಯಾನ್ಸರ್ ಇರುವುದು ಪತ್ತೆಯಾಯಿತು. ಅವರು ಈಗ ಚೆನ್ನಾಗಿದ್ದಾರೆ. ನನ್ನ ಪ್ರದರ್ಶನದಿಂದ ತುಂಬಾ ಸಂತೋಷಪಟ್ಟಿದ್ದಾರೆ ಅಂದುಕೊಂಡಿದ್ದೇನೆ. ಅವರ ಮುಖದಲ್ಲಿ ನಗುವನ್ನು ನೋಡಲು ಬಯಸಿದೆ. ಈ ಪಂದ್ಯವನ್ನು ಅವರಿಗೆ ಅರ್ಪಿಸುವುದಾಗಿ ತಿಳಿಸಿದರು.

Akash Deep
India vs England, 2nd test: ಇಂಗ್ಲೆಂಡ್ ನೆಲದಲ್ಲಿ ಭಾರತಕ್ಕೆ 336 ರನ್ ಗೆಲುವು
ನಾನು ಚೆಂಡನ್ನು ಕೈಗೆತ್ತಿಕೊಂಡಾಗಲೆಲ್ಲಾ ನಿನ್ನ ಮುಖ ನನ್ನ ಮನಸ್ಸಿನಲ್ಲಿರುತ್ತದೆ. ನಿನ್ನ ಮೊಗದಲ್ಲಿ ಸಂತೋಷ ನೋಡಲು ಬಯಸುತ್ತೇನೆ. ನಾವೆಲ್ಲ ನಿಮ್ಮೊಂದಿಗೆ ಇದ್ದೇವೆ ಎಂದು ಭಾವಾನಾತ್ಮಕ ಸಂದೇಶ ಕಳುಹಿಸಿದ್ದಾರೆ.

 

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ