LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
National News

ಮೆಟ್ರೋ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸಲ್ಲಿಸಿದ್ದು ಕರ್ನಾಟಕ ಸರ್ಕಾರ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿದೆ.

ದರ ಏರಿಕೆಗೂ ರಾಜ್ಯ ಸರ್ಕಾರಕ್ಕೂ ಸಂಬಂಧವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಹೇಳುತ್ತಿದ್ದರೆ, ರಾಜ್ಯ ಸರ್ಕಾರವೇ ಪ್ರಯಾಣ ದರ ಹೆಚ್ಚಿಸಿದೆ ಎಂದು ಬಿಜೆಪಿ ನಾಯಕರು ಆರೋಪ ಮಾಡುತ್ತಿದ್ದಾರೆ.

ಈ ನಡುವೆ ಇಂದು ಮೆಟ್ರೋ ಪ್ರಯಾಣ ದರ ಏರಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಮೆಟ್ರೋ ದರ ಹೆಚ್ಚಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜನರು ಪ್ರಶ್ನಿಸಬೇಕು. ಕೇಂದ್ರ ಸರ್ಕಾರವನ್ನಲ್ಲ ಎಂದರು.

ನಗರದ ನೈಜ ಪರಿಸ್ಥಿತಿ ರಾಜ್ಯ ಸರ್ಕಾರಕ್ಕೆ ಗೊತ್ತಿರುತ್ತದೆ. ಮೆಟ್ರೋದ ಮೇಲೆ ಹೆಚ್ಚಿನ ಹಕ್ಕು ಮತ್ತು ಅಧಿಕಾರಗಳು ಇರುವುದು ರಾಜ್ಯ ಸರ್ಕಾರಗಳಿಗೆ ಇರುತ್ತದೆ. ದರ ಏರಿಕೆ ಸಮಿತಿ ದೆಹಲಿಯಲ್ಲಿ ಇಲ್ಲ. ದರ ಏರಿಕೆ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಗಳು ಸಿದ್ಧಪಡಿಸುತ್ತವೆ. ಮೆಟ್ರೋ ಪ್ರಯಾಣ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದು ರಾಜ್ಯ ಸರ್ಕಾರ. ಹಾಗಾಗೀ ಹಾಗಾಗಿ ಇದನ್ನು ಮುಖ್ಯಮಂತ್ರಿ ಅವರಿಗೆ ಕೇಳಬೇಕು ಎಂದು ಹೇಳಿದರು.

ಮೆಟ್ರೋ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರಗಳು ನಿಗಾ ವಹಿಸುತ್ತವೆ. ಅದು ಕರ್ನಾಟಕ ಆಗಿರಲಿ ಅಥವಾ ಯಾವುದೇ ರಾಜ್ಯಗಳಾಗಿರಲಿ. ಬೆಲೆ ಏರಿಕೆ ಪ್ರಸ್ತಾವನೆಗಳು ಆಯಾ ರಾಜ್ಯಗಳಿಗೆ ಸಂಬಂಧಪಟ್ಟರುವ ವಿಚಾರ. ಮೆಟ್ರೋದ ಮೇಲೆ ಹೆಚ್ಚಿನ ಹಕ್ಕು ಮತ್ತು ಅಧಿಕಾರಗಳು ಇರುವುದು ರಾಜ್ಯ ಸರ್ಕಾರಗಳಿಗೆ. ಮೆಟ್ರೋ ದರ ಏರಿಕೆ ಪ್ರಸ್ತಾವನೆ ಮತ್ತು ದರ ಏರಿಕೆ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳಾಗಿವೆ ಎಂದು ತಿಳಿಸಿದ್ದಾರೆ.

ವಾರದ ಹಿಂದೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಪ್ರಯಾಣ ದರವನ್ನು ದುಪ್ಪಟ್ಟು ಹೆಚ್ಚಿಸಿತ್ತು. ರಾಜ್ಯ ಸರ್ಕಾರದ ವಿರುದ್ಧ ಜನತೆ ಆಕ್ರೋಶ ವ್ಯಕ್ತಪಡಿಸಿದ ನಂತರ ದರ ಪರಿಷ್ಕರಿಸಲು ಸಿಎಂ ಸಿದ್ದರಾಮಯ್ಯ, BMRCL ವ್ಯವಸ್ಥಾಪಕ ನಿರ್ದೇಶಕ ಎಂ ಮಹೇಶ್ವರ್ ರಾವ್ ಅವರಿಗೆ ಸೂಚಿಸಿದ್ದರು.

ಬಳಿಕ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಗರಿಷ್ಠ ಶೇ. 71 ರಷ್ಟು ಏರಿಕೆಗೆ ನಿರ್ಧರಿಸಿದ್ದು, ಪ್ರಯಾಣ ದರವನ್ನು ಪರಿಷ್ಕರಣೆ ಮಾಡುವುದಾಗಿ ಗುರುವಾರ ಘೋಷಿಸಿತ್ತು.ಅದರಂತೆ ಸ್ಟೇಜ್ ಗಳ ಆಧಾರದಲ್ಲಿ ಕೆಲವು ಕಡೆಗಳಲ್ಲಿ ದರವನ್ನು ಪರಿಷ್ಕರಣೆ ಮಾಡಲಾಗಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ