LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Crime News

ಬಳ್ಳಾರಿಯಲ್ಲಿ ಎನ್‌ಐಎ ದಾಳಿ: ಉಗ್ರ ಸಂಪರ್ಕ ಪ್ರಕರಣದಲ್ಲಿ ಆರೋಪಿ ಮನೆ ಮೇಲೆ ಮತ್ತೆ ಶೋಧ

ಬಳ್ಳಾರಿ: ಆನ್‌ಲೈನ್ ಮೂಲಕ ಮೂಲಭೂತವಾದಿ ಚಟುವಟಿಕೆಗಳಿಗೆ ಪ್ರಚೋದನೆ ನೀಡಿದ ಹಾಗೂ ನಿಷೇಧಿತ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬುಧವಾರ ಬಳ್ಳಾರಿಯಲ್ಲಿ ಶೋಧ ಕಾರ್ಯ ನಡೆಸಿದರು.

ನಗರದ ಕೌಲಬಜಾರ್ ಪ್ರದೇಶದಲ್ಲಿರುವ ಅಬ್ದುಲ್ ಸಲಾಮ್ ಅವರ ನಿವಾಸಕ್ಕೆ ಎನ್‌ಐಎ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ಪ್ರಕರಣವು ಆಂಧ್ರ ಪ್ರದೇಶದ ಎನ್‌ಟಿಆರ್ ಜಿಲ್ಲೆಯಲ್ಲಿ ದಾಖಲಾಗಿದ್ದು, ಅದರ ತನಿಖೆಯ ಅಂಗವಾಗಿ ಅಧಿಕಾರಿಗಳು ಬಳ್ಳಾರಿಗೆ ಆಗಮಿಸಿದ್ದಾರೆ.

ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರೆಹಮತುಲ್ಲ ಷರೀಫ್ ವಿರುದ್ಧ ಆನ್‌ಲೈನ್ ಮೂಲಕ ಮೂಲಭೂತವಾದಿ ವಿಚಾರಧಾರೆಗಳನ್ನು ಹರಡುವುದು ಹಾಗೂ ನಿಷೇಧಿತ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪಗಳಡಿ ಪ್ರಕರಣ ದಾಖಲಾಗಿತ್ತು. ಈತನೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬ ಆರೋಪದ ಮೇರೆಗೆ ಬಳ್ಳಾರಿ ಮೂಲದ ಅಬ್ದುಲ್ ಸಲಾಮ್ ಅವರನ್ನು ಇದೇ ವರ್ಷದ ಮಾರ್ಚ್ 26ರಂದು ಬಂಧಿಸಲಾಗಿತ್ತು.

ಪ್ರಸ್ತುತ ತನಿಖೆಯ ಮುಂದುವರಿದ ಹಂತವಾಗಿ ಎನ್‌ಐಎ ಅಧಿಕಾರಿಗಳು ಮತ್ತೊಮ್ಮೆ ಅಬ್ದುಲ್ ಸಲಾಮ್ ಅವರ ನಿವಾಸದಲ್ಲಿ ಶೋಧ ನಡೆಸಿದ್ದು, ತನಿಖೆಗೆ ಸಂಬಂಧಿಸಿದ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಆದರೆ, ಈ ಕುರಿತು ಎನ್‌ಐಎ ಅಧಿಕಾರಿಗಳು ಯಾವುದೇ ಅಧಿಕೃತ ಮಾಹಿತಿ ಪ್ರಕಟಿಸಿಲ್ಲ.

ಪ್ರಕರಣದ ತನಿಖೆ ಮುಂದುವರಿದಿದ್ದು, ಡಿಜಿಟಲ್ ಸಾಕ್ಷ್ಯಗಳು ಹಾಗೂ ಆರೋಪಿಗಳ ನಡುವಿನ ಸಂಪರ್ಕದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

 

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ