LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಕಾರ್ಯಕರ್ತರ ಧ್ವನಿಯಾಗಿ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ: ಪ್ರೀತಂ ಗೌಡ

ಬೆಂಗಳೂರು: ಇಂದಿನ ಸಭೆಯಲ್ಲಿ ಕಾರ್ಯಕರ್ತರ ಪರವಾಗಿ, ಕಾರ್ಯಕರ್ತರ ಧ್ವನಿಯಾಗಿ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆ ಅಭಿಪ್ರಾಯ ಕೇಂದ್ರದ ನಾಯಕರು ಮತ್ತು ಎಲ್ಲಿಗೆ ತಲುಪಬೇಕೋ ಅಲ್ಲಿಗೆ ತಲುಪಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರು ತಿಳಿಸಿದರು.

ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ‘ಸಂಘಟನಾ ಪರ್ವ’ದ ಸಭೆಯ ಕುರಿತು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ರಾಜ್ಯ ಉಸ್ತುವಾರಿ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರವಾಲ್ ಅವರ ಸಮ್ಮುಖದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ‘ಸಂಘಟನಾ ಪರ್ವ’ದ ವಿಚಾರವಾಗಿ ಸಭೆ ನಡೆದಿದೆ. ಬಹುತೇಕ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರನ್ನು ಒಳಗೊಂಡಂತೆ ಪ್ರಸ್ತುತ ರಾಜಕೀಯ ಪರಿಸ್ಥಿತಿ ಬಗ್ಗೆ ಎಲ್ಲರ ಅಭಿಪ್ರಾಯ ಮತ್ತು ವಸ್ತುಸ್ಥಿತಿಯನ್ನು ಪಡೆಯಲಾಗಿದೆ ಎಂದು ವಿವರಿಸಿದರು.

ಈಚಿನ ದಿನಗಳಲ್ಲಿ ಕೆಲವರು ಮಾತನಾಡುತ್ತಿರುವುದರಿಂದ ಪಕ್ಷದ ಇಮೇಜ್‍ಗೆ ಧಕ್ಕೆ ಆಗುತ್ತಿದೆ; ಕಾರ್ಯಕರ್ತರ ಮನಸ್ಸಿಗೂ ನೋವು ಉಂಟಾಗುತ್ತಿದೆ. ಹಾಗಾಗಿ ಇದಕ್ಕೆ ತಾರ್ಕಿಕ ಅಂತ್ಯ ಆಗಬೇಕು ಎಂಬ ಆಶಯ ವ್ಯಕ್ತವಾಗಿದೆ. ಸುಮಾರು 50 ಶಾಸಕರು ಬಂದಿದ್ದು, ಹಾದಿಬೀದಿಯಲ್ಲಿ ಮಾತನಾಡುವವರಿಗೆ ರಾಷ್ಟ್ರೀಯ ನಾಯಕರು ತಾಕೀತು ಮಾಡಬೇಕೆಂದು ಮನವಿ ಮಾಡಿದ್ದಾರೆ ಎಂದು ತಿಳಿಸಿದರು.ಪರಿಸ್ಥಿತಿ ತಿಳಿಯಾಗಿ ಅವರು ಕೂಡ, ಪಕ್ಷದ ಸಂಘಟನೆಯ ಜೊತೆ ನಿಂತು ಪಕ್ಷವನ್ನು ಬಲವರ್ಧನೆ ಮಾಡುವುದಲ್ಲದೆ, ರಾಜ್ಯಾಧ್ಯಕ್ಷರಿಗೆ ಶಕ್ತಿ ಕೊಡುವ ನಿಟ್ಟಿನಲ್ಲಿ ಎಲ್ಲರೂ ಕೂಡ ಒಟ್ಟಾಗಿ ಕೆಲಸ ಮಾಡಬೇಕೆಂಬುದು ಎಲ್ಲ ಜನಪ್ರತಿನಿಧಿಗಳ ಆಶಯವಾಗಿತ್ತು. ಸಂಘಟನಾ ಪರ್ವದಲ್ಲಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನ, ಮಂಡಲ ಅಧ್ಯಕ್ಷರು, ಜಿಲ್ಲಾ ಅಧ್ಯಕ್ಷರ ನಿಯುಕ್ತಿಗೆ ಆಗುತ್ತಿರುವ ಎಲ್ಲ ಕ್ರಮಗಳು ಅಚ್ಚುಕಟ್ಟಾಗಿ ಆಗುತ್ತಿದೆ ಎಂದು ಹೇಳಿದರು.

2028ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಸಂಘಟಿತವಾಗಿ ಕೆಲಸ ಆಗಬೇಕೆಂಬ ಅಭಿಪ್ರಾಯವನ್ನು ರಾಧಾಮೋಹನ್ ದಾಸ್ ಅಗರವಾಲ್ ಅವರಿಗೆ ತಿಳಿಸಲಾಗಿದೆ. ಈ ಮೂಲಕ ಪಕ್ಷದಲ್ಲಿ ಗೊಂದಲ ಮಾಡುವ ಪ್ರಯತ್ನಕ್ಕೆ ತೆರೆ ಎಳೆಯುವ ವಿಶ್ವಾಸವನ್ನು ಎಲ್ಲ ಶಾಸಕರು ವ್ಯಕ್ತಪಡಿಸಿದ್ದಾರೆ. ಶಾಸಕರು ಆಗ್ರಹಪೂರ್ವಕವಾಗಿ ಮಾತನಾಡಿದ್ದಾರೆ ಎಂದು ತಿಳಿಸಿದರು.ಬಿಜೆಪಿ ಇದರಲ್ಲಿ ಯಶಸ್ಸನ್ನು ಕಂಡು ಮುಂದಿನ ದಿನಗಳಲ್ಲಿ ಉತ್ತಮ ರೀತಿಯಲ್ಲಿ ಪಕ್ಷದ ಸಂಘಟನೆ ಆಗಲಿದೆ ಎಂದು ತಿಳಿಸಿದರು. ಶಾಸಕರ ಅಭಿಪ್ರಾಯವನ್ನು ರಾಜ್ಯದ ನಾಯಕರು ಮತ್ತು ಪಕ್ಷದ ಹಿರಿಯರು ಗಮನಿಸುವರೆಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಜನರು ಸರ್ಟಿಫಿಕೇಟ್ ಕೊಡಬೇಕು. ವೈಯಕ್ತಿಕವಾಗಿ ಯಾರಾದರೂ ಅವರ ಭಾವನೆ ವ್ಯಕ್ತಪಡಿಸಲು ಸ್ವತಂತ್ರರು ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ನಮ್ಮ ಪಕ್ಷವು ಸಂಘಟನೆ, ಅಭಿಪ್ರಾಯ ವ್ಯಕ್ತಪಡಿಸಲು ಮುಕ್ತ ಅವಕಾಶ ಕೊಡುತ್ತದೆ. ಅದು ಯಾವಾಗ ಅತಿರೇಕಕ್ಕೆ ಹೋಗುತ್ತದೋ ಆಗ ಅಂತ್ಯವನ್ನು ಹಾಡುತ್ತದೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ